AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Gowda: ಸೋನು ಗೌಡ ಮುಖ ನೋಡಿ ಕುಸಿದು ಬಿದ್ದ ಗುರೂಜಿ; ಅಸಲಿಗೆ ಅಲ್ಲಿ ನಡೆದಿದ್ದು ಏನು?

Aryavardhan Guruji | Bigg Boss Kannada OTT: ಬಾತ್​ ರೂಮ್​ನಲ್ಲಿ ಆರ್ಯವರ್ಧನ್​ ಗುರೂಜಿ ಕುಸಿದು ಬಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಒಂದಷ್ಟು ನಿಮಿಷಗಳ ಕಾಲ ಆತಂಕದ ವಾತಾವರಣ ನಿರ್ಮಾಣ ಆಯಿತು.

Sonu Gowda: ಸೋನು ಗೌಡ ಮುಖ ನೋಡಿ ಕುಸಿದು ಬಿದ್ದ ಗುರೂಜಿ; ಅಸಲಿಗೆ ಅಲ್ಲಿ ನಡೆದಿದ್ದು ಏನು?
ಸೋನು ಗೌಡ
TV9 Web
| Edited By: |

Updated on:Aug 28, 2022 | 8:43 PM

Share

‘ಬಿಗ್​ ಬಾಸ್​ ಒಟಿಟಿ’ (Bigg Boss Kannada OTT) ಶೋ ಹಲವು ಇಂಟರೆಸ್ಟಿಂಗ್​ ಘಟನೆಗಳಿಗೆ ಸಾಕ್ಷಿ ಆಗುತ್ತಿದೆ. ಆರ್ಯವರ್ಧನ್​ ಗುರೂಜಿ ಅವರು ನಿರೀಕ್ಷೆಗೂ ಮೀರಿ ಗಮನ ಸೆಳೆಯುತ್ತಿದ್ದಾರೆ. ತಮ್ಮ ನೈಜ ಸ್ವಭಾವದಿಂದ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಪ್ರತಿ ವಾರದ ಎಲಿಮಿನೇಷನ್​ನಲ್ಲಿ ಅವರು ಬಚಾವ್​ ಆಗುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಆರ್ಯವರ್ಧನ್​ ಗುರೂಜಿ (Aryavardhan Guruji) ಅವರಿಗೆ ದೆವ್ವ ಎಂದರೆ ಸಖತ್​ ಭಯ. ಆ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದುಂಟು. ಆ ಭಯವನ್ನೇ ಟಾರ್ಗೆಟ್​ ಮಾಡಿಕೊಂಡು ಬಿಗ್​ ಬಾಸ್​ ಮನೆಯಲ್ಲಿ ಅವರನ್ನು ಹೆದರಿಸುವ ಪ್ರಯತ್ನ ಮಾಡಲಾಗಿದೆ. ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ದೆವ್ವದ ರೀತಿಯಲ್ಲಿ ಮೇಕಪ್​ ಮಾಡಿಕೊಂಡು ಹೆದರಿಸಿದ್ದಾರೆ. ನಂತರ ಆಗಿದ್ದು ನಿಜಕ್ಕೂ ಶಾಕಿಂಗ್​ ಘಟನೆ. ಈ ಬಗ್ಗೆ ಕಿಚ್ಚ ಸುದೀಪ್​ ಅವರು ವಾರದ ಪಂಚಾಯಿತಿಯಲ್ಲಿ ಮಾತುಕಥೆ ಮಾಡಿದ್ದಾರೆ.

ಆರ್ಯವರ್ಧನ್​ ಗುರೂಜಿ ಅವರನ್ನು ಹೆದರಿಸಬೇಕು ಎಂದು ಸೋನು ಶ್ರೀನಿವಾಸ್​ ಗೌಡ ಹಾಗೂ ಅಕ್ಷತಾ ಕುಕ್ಕಿ ಅವರು ಪ್ಲ್ಯಾನ್​ ಮಾಡಿದ್ದರು. ಆ ಪ್ಲ್ಯಾನ್​ನಲ್ಲಿ ರಾಕೇಶ್​ ಅಡಿಗ ಕೂಡ ಇದ್ದರು. ಆದರೆ ಅವರು ಉಲ್ಟಾ ಹೊಡೆದರು. ಸೋನು ಮತ್ತು ಅಕ್ಷತಾ ಮಾಡಿದ ಪ್ಲ್ಯಾನ್​ ಬಗ್ಗೆ ಗುರೂಜಿಗೆ ರಾಕೇಶ್​ ಮೊದಲೇ ಮಾಹಿತಿ ಲೀಕ್​ ಮಾಡಿದರು. ಆದರೂ ಕೂಡ ಎಡವಟ್ಟು ನಡೆಯಿತು!

ಆರ್ಯವರ್ಧನ್​ ಅವರು ಬಾತ್​ ರೂಮ್​ನಲ್ಲಿ ಇದ್ದರು. ಈ ವೇಳೆ ಸೋನು ಗೌಡ ಅವರು ತಮ್ಮ ಮುಖಕ್ಕೆ ಪೌಡರ್​ ಬಳಿದುಕೊಂಡು, ಹಣೆಗೆ ದೊಡ್ಡದಾಗಿ ಕುಂಕುಮ ಹಚ್ಚಿಕೊಂಡು, ಕೂದಲು ಕೆದರಿಕೊಂಡು ಬಾತ್​ ರೂಮ್​ ಹೊರಗೆ ನಿಂತಿದ್ದರು. ಬಾತ್​ ರೂಮ್​ ಬಾಗಿಲು ತೆಗೆಯುತ್ತಿದ್ದಂತೆಯೇ ಸೋನು ಗೌಡ ಮುಖ ನೋಡಿ ಗುರೂಜಿ ನಿಜವಾಗಿಯೂ ಬೆಚ್ಚಿ ಬಿದ್ದರು. ಕೆಳಗಿ ಬಿದ್ದು ಪ್ರಜ್ಞೆ ತಪ್ಪಿದ ಅವರನ್ನು ರೂಪೇಶ್​ ಮತ್ತು ರಾಕೇಶ್​ ಸೇರಿ ಎತ್ತಿಕೊಂಡು ಬಂದರು. ಇಡೀ ಮನೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಆಯಿತು.

ಇದನ್ನೂ ಓದಿ
Image
Sonu Srinivas Gowda: ‘ಸೋನು ಗೌಡ ಇದ್ದಲ್ಲಿ ಮಜಾ ಇರತ್ತೆ’; ಬಿಗ್​ ಬಾಸ್​ ಸ್ಪರ್ಧಿಗಳು ಹೀಗೆ ಹೇಳೋಕೆ ಕಾರಣ ಏನು?
Image
Sonu Srinivas Gowda: ‘ಹುಡುಗರನ್ನು ಮನೆಯಿಂದ ಹೊರಗೆ ಕಳಿಸಬೇಕು’; ಬಿಗ್​ ಬಾಸ್​​ನಲ್ಲಿ ಸೋನು ಶ್ರೀನಿವಾಸ್​ ಗೌಡ ಪ್ಲ್ಯಾನ್​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಫೋನ್​ ನಂಬರ್​ ಏನು? ಅದ್ರಲ್ಲೂ ಚಾಲಕಿತನ ತೋರಿದ ರೀಲ್ಸ್​ ಬೆಡಗಿ

ಆರ್ಯವರ್ಧನ್​ ಅವರಿಗೆ ಹಾರ್ಟ್​ ಅಟ್ಯಾಕ್​ ಆಗಿರಬಹುದು ಎಂದು ಎಲ್ಲರೂ ಭಯಪಟ್ಟರು. ‘ನಾನೆಲ್ಲೋ ಇದು ಜೋಕ್​ ಅಂದುಕೊಂಡೆ. ದೇವರಾಣೆ ಜೋಕ್​ ಅಲ್ಲ’ ಎಂದು ರೂಪೇಶ್​ ಆತಂಕ ಹೊರಹಾಕಿದರು. ನಂತರ ಗುರೂಜಿಯನ್ನು ಸಮಾಧಾನ ಮಾಡುವ ಕೆಲಸ ಎಲ್ಲರಿಂದ ಆಯಿತು. ‘ನಿಜಕ್ಕೂ ದೆವ್ವ ಅಂತ ಹೆದರಿಕೊಂಡೆ’ ಎಂದು ಗುರೂಜಿ ಕಣ್ಣೀರು ಹಾಕಿದ್ದಾರೆ. ಬಾತ್​ ರೂಮ್​ನಲ್ಲಿ ಅವರು ಬಿದ್ದಿದ್ದ ರೀತಿಯನ್ನು ನೆನಪಿಸಿಕೊಂಡು ಅಕ್ಷತಾ ಕುಕ್ಕಿ ಅತ್ತರು.

ಈ ಎಲ್ಲ ವಿಚಾರ ‘ಸೂಪರ್​ ಸಂಡೇ ವಿತ್​ ಸುದೀಪ್​’ ಎಪಿಸೋಡ್​ನಲ್ಲಿ ಚರ್ಚೆಗೆ ಬಂದಿದೆ. ಆರ್ಯವರ್ಧನ್​ ಗುರೂಜಿಗೆ ಕಿಚ್ಚ ಸುದೀಪ್​ ಸಮಾಧಾನ ಮಾಡಿದ್ದಾರೆ. ‘ಬಾತ್​ ರೂಮ್​ನಲ್ಲಿ ದೆವ್ವ ಇಲ್ಲ. ನಿಮ್ಮ ಸುತ್ತ-ಮುತ್ತ 300 ತಂತ್ರಜ್ಞರು ಇದ್ದಾರೆ. ನಿಮಗೆ ತೊಂದರೆ ಆದ್ರೆ ತಕ್ಷಣ ಸಹಾಯಕ್ಕೆ ಬರುತ್ತಾರೆ’ ಎಂದು ಸುದೀಪ್​ ಅಭಯ ನೀಡಿದ್ದಾರೆ.

‘ನಾನು ದೆವ್ವಕ್ಕೆ ಹೆದರುತ್ತೇನೆ. ರಾತ್ರಿ ಸಿನಿಮಾ ನೋಡಿಕೊಂಡು ಬಂದಾಗ ನಮ್ಮ ಮನೆಯಲ್ಲಿ ಯಾರಾದರೂ ನನ್ನನ್ನು ಲಿಫ್ಟ್​ವರೆಗೆ ಬಿಟ್ಟು ಹೋಗಬೇಕು. ಅಷ್ಟು ಹೆದರುತ್ತೇನೆ’ ಎಂದು ಗುರೂಜಿ ಅವರು ಹೇಳಿದ್ದಾರೆ. ದೊಡ್ಮನೆಯಲ್ಲಿ ಪ್ರ್ಯಾಂಕ್​ ಮಾಡುವವರಿಗೆ ಸುದೀಪ್​ ಎಚ್ಚರಿಕೆ ನೀಡಿದ್ದಾರೆ. ‘ನೋಡಿಕೊಂಡು ತಮಾಷೆ ಮಾಡಿ. ಕೆಲವರಿಗೆ ದೊಡ್ಡ ಹಾನಿ ಆಗಬಹುದು. ಅದರಿಂದ ಜೀವನವಿಡೀ ಪಶ್ಚಾತ್ತಾಪ ಪಡುವಂತೆ ಆಗಬಾರದು’ ಎಂದು ಸೋನು ಶ್ರೀನಿವಾಸ್​ ಗೌಡ ಅವರಿಗೆ ಸುದೀಪ್​ ಕಿವಿಮಾತು ಹೇಳಿದ್ದಾರೆ.

Published On - 8:43 pm, Sun, 28 August 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ