Sonu Srinivas Gowda: ‘ಯಾವ ನನ್ಮಗ​ ಏನು ಅಂದುಕೊಂಡ್ರೂ ನಾನು ತಲೆ ಕೆಡಿಸಿಕೊಳ್ಳಲ್ಲ’: ಸೋನು ಗೌಡ ಓಪನ್​ ಮಾತು

Bigg Boss Kannada OTT: ‘ಬೇರೆಯವರು ನೋಡಿದರೆ ಏನು ಅಂದುಕೊಳ್ಳುತ್ತಾರೋ ಎಂಬ ಸ್ವಭಾವದವಳು ನಾನಲ್ಲ. ನನ್ನ ಲೈಫ್​ ನನ್ನ ಇಷ್ಟ’ ಎಂದು ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

Sonu Srinivas Gowda: ‘ಯಾವ ನನ್ಮಗ​ ಏನು ಅಂದುಕೊಂಡ್ರೂ ನಾನು ತಲೆ ಕೆಡಿಸಿಕೊಳ್ಳಲ್ಲ’: ಸೋನು ಗೌಡ ಓಪನ್​ ಮಾತು
ಸೋನು ಶ್ರೀನಿವಾಸ್​ ಗೌಡ
Follow us
| Updated By: ಮದನ್​ ಕುಮಾರ್​

Updated on:Aug 13, 2022 | 8:17 PM

ರೀಲ್ಸ್​ ಮೂಲಕ ಫೇಮಸ್​ ಆದ ಸೋನು ಶ್ರೀನಿವಾಸ್​ (Sonu Srinivas Gowda) ಅವರು ಬಿಗ್​ ಬಾಸ್​ ಮನೆಯಲ್ಲಿ ಸದ್ದು ಮಾಡುತ್ತಿದ್ದಾರೆ. ಅವರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲೂ ಹೆಚ್ಚು ಚರ್ಚೆ ಆಗುತ್ತಿದೆ. ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ಲೀಕ್​ ಆಗಿತ್ತು. ಅದರಿಂದ ಅವರು ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಮತ್ತೆ ಚರ್ಚೆ ಆಗುತ್ತಿದೆ. ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋನಲ್ಲಿ ಎಲ್ಲ ಸ್ಪರ್ಧಿಗಳಿಗೆ ಒಂದು ಟಾಸ್ಕ್​ ನೀಡಲಾಗಿತ್ತು. ಈ ವೇಳೆ ಸೋನು ಗೌಡ ಅವರು ಒಂದಷ್ಟು ವಿಚಾರಗಳ ಬಗ್ಗೆ ಓಪನ್​ ಆಗಿ ಮಾತನಾಡಿದ್ದಾರೆ. ಟ್ರೋಲ್​ (Sonu Srinivas Gowda Troll)ವಿಚಾರದಲ್ಲಿ ತಮ್ಮ ನಿಲುವು ಏನು ಎಂಬುದನ್ನು ಅವರು ನೇರವಾಗಿ ಹೇಳಿದ್ದಾರೆ.

ಸೋನು ಶ್ರೀನಿವಾಸ್​ ಗೌಡ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯ ಬಗ್ಗೆ ಈಗಾಗಲೇ ಮುಕ್ತವಾಗಿಯೇ​ ಮಾತನಾಡಿದ್ದಾರೆ. ಅದರಿಂದ ಅವರ ಭವಿಷ್ಯಕ್ಕೆ ತೊಂದರೆ ಆಗುವುದಿಲ್ಲವೇ ಎಂಬುದು ಸೋಮಣ್ಣ ಮಾಚಿಮಾಡ ಅವರ ಪ್ರಶ್ನೆ ಆಗಿತ್ತು. ಅದಕ್ಕೆ ಸೋನು ಗೌಡ ಅವರು ಉತ್ತರ ನೀಡಿದ್ದಾರೆ. ತಾವು ಯಾರ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

‘ಬೇರೆಯವರು ನೋಡಿದರೆ ಏನು ಅಂದುಕೊಳ್ಳುತ್ತಾರೋ ಎಂಬ ಸ್ವಭಾವದವಳು ನಾನಲ್ಲ. ಇಲ್ಲಿ ಯಾರಿಂದಲೂ ನಮಗೆ ಒಂದು ರೂಪಾಯಿಯೂ ಹೆಲ್ಪ್​ ಆಗಿಲ್ಲ. ನನ್ನ ಲೈಫ್​ ನನ್ನ ಇಷ್ಟ’ ಎಂದು ಸೋನು ಶ್ರೀನಿವಾಸ್​ ಗೌಡ ಉತ್ತರ ನೀಡಿದ್ದಾರೆ. ಅವರ ಬಗ್ಗೆ ದೊಡ್ಮನೆಯೊಳಗೆ ಗಾಸಿಪ್​ ಕೂಡ ಮಾಡಲಾಗಿದೆ.

ಇದನ್ನೂ ಓದಿ
Image
Bigg Boss: ‘ಬಿಗ್​ ಬಾಸ್’​ ಮನೆಗೆ ಹೊಗ್ತಾರಾ ಸ್ಟಾರ್​ ನಿರೂಪಕಿ? ಎಲ್ಲರಿಗಿಂತ ಹೆಚ್ಚು ಸಂಭಾವನೆ ಸಿಗೋದು ಇವರಿಗೆ
Image
Bigg Boss Kannada: ‘ಕಷ್ಟ ಹೇಳ್ಕೊಂಡು ಸಿಂಪಥಿ ಗಿಟ್ಟಿಸಬೇಡಿ’: ಬಿಗ್​ ಬಾಸ್​ ಸ್ಪರ್ಧಿಗೆ ಗುರೂಜಿ ಮಾತಿನ ಡಿಚ್ಚಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು

‘ಅವಳು ಫೇಮಸ್​ ಆಗಿದ್ದೇ ಟ್ರೋಲ್​ ಇಂದ. ಅವಳು ನೆಗೆಟಿವ್​ ಕಮೆಂಟ್​ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದರಿಂದ ಅವಳಿಗೆ ಉಪಯೋಗವೇ ಆಗಿದೆ. ಫೇಮಸ್​ ಆದ್ರೆ ಸಾಕು ಅನ್ನೋ ಭಾವನೆ ಇದೆ. ಕೆಟ್ಟದ್ದೋ ಒಳ್ಳೇದೋ ಗೊತ್ತಿಲ್ಲ, ನ್ಯೂಸ್​ನಲ್ಲಿ ಇರಬೇಕು​ ಅಂದುಕೊಂಡಿದ್ದಾಳೆ’ ಎಂದು ಸೋನು ಬಗ್ಗೆ ಉದಯ್​ ಸೂರ್ಯ ಹೇಳಿದ್ದಾರೆ. ಅವರ ಮಾತಿಗೆ ಇನ್ನುಳಿದವರು ಧ್ವನಿ ಗೂಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:17 pm, Sat, 13 August 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ