AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ‘ಹುಡುಗರನ್ನು ಮನೆಯಿಂದ ಹೊರಗೆ ಕಳಿಸಬೇಕು’; ಬಿಗ್​ ಬಾಸ್​​ನಲ್ಲಿ ಸೋನು ಶ್ರೀನಿವಾಸ್​ ಗೌಡ ಪ್ಲ್ಯಾನ್​

Kichcha Sudeep | Bigg Boss Kannada OTT: ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಎರಡು ವಾರಗಳು ಕಳೆದಿವೆ. ಇನ್ನುಳಿದಿರುವುದು ನಾಲ್ಕು ವಾರಗಳು ಮಾತ್ರ. ಪ್ರತಿ ವಾರವೂ ಸ್ಪರ್ಧೆ ಕಠಿಣವಾಗುತ್ತಿದೆ.

Sonu Srinivas Gowda: ‘ಹುಡುಗರನ್ನು ಮನೆಯಿಂದ ಹೊರಗೆ ಕಳಿಸಬೇಕು’; ಬಿಗ್​ ಬಾಸ್​​ನಲ್ಲಿ ಸೋನು ಶ್ರೀನಿವಾಸ್​ ಗೌಡ ಪ್ಲ್ಯಾನ್​
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on:Aug 21, 2022 | 7:56 PM

Share

ಜನಪ್ರಿಯ ‘ಬಿಗ್​ ಬಾಸ್​ ಒಟಿಟಿ’ (Bigg Boss Kannada OTT) ಶೋನಲ್ಲಿ ಹಲವು ಟ್ವಿಸ್ಟ್​ಗಳು ಎದುರಾಗುತ್ತಿವೆ. ರೀಲ್ಸ್​ ಬೆಡಗಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ಬೇರೆ ಬೇರೆ ರೀತಿಯಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಪ್ರತಿ ವಾರ ಅವರು ನಾಮಿನೇಟ್​ ಆಗುತ್ತಿದ್ದರೂ ಕೂಡ ವೀಕ್ಷಕರಿಂದ ಅಗತ್ಯ ವೋಟ್​ ಪಡೆಯುವ ಮೂಲಕ ಸೇಫ್​ ಆಗುತ್ತಿದ್ದಾರೆ. ಎಲ್ಲರ ಜೊತೆಯಲ್ಲೂ ಅವರು ಬೆರೆಯುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ನೇರ-ನಡೆನುಡಿಯ ಕಾರಣದಿಂದಲೂ ಸೋನು ಗೌಡ ಸದ್ದು ಮಾಡುತ್ತಿದ್ದಾರೆ. ಎರಡು ವಾರಗಳ ಕಾಲ ನಡೆದ ನಾಮಿನೇಷನ್​ ಮತ್ತು ಎಲಿಮಿನೇಷನ್​ (Bigg Boss Elimination) ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ನಾವು ಈ ಮನೆಯಿಂದ ಹುಡುಗರನ್ನು ಹೊರಗೆ ಹಾಕಬೇಕು’ ಎಂದು ಅವರು ಹೇಳಿದ್ದಾರೆ. ಆ ರೀತಿ ಅವರು ಹೇಳಿದ್ದಕ್ಕೂ ಕಾರಣ ಇದೆ.

ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ಚೆನ್ನಾಗಿ ಟಾಸ್ಕ್​ ಮಾಡುತ್ತಿರುವುದು ಹುಡುಗಿಯರು. ಆದರೆ ಹೆಚ್ಚು ನಾಮಿನೇಟ್​ ಆಗುತ್ತಿರುವುದು ಕೂಡ ಹುಡುಗಿಯರು. ಅಲ್ಲದೇ ಈವರೆಗೆ ಕಡಿಮೆ ವೋಟ್​ ಪಡೆದು ಎಲಿಮಿನೇಟ್​ ಆದ ಇಬ್ಬರು ಕೂಡ ಹುಡುಗಿಯರು. ಈ ವಿಚಾರವನ್ನು ಮನೆಯೊಳಗೆ ಪ್ರಸ್ತಾಪಿಸಿರುವ ಸೋನು ಗೌಡ ಅವರು, ಮುಂದಿನ ಬಾರಿ ಹುಡುಗರನ್ನು ಮನೆಯಿಂದ ಹೊರಹಾಕಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಕೇಶ್​ ಅಡಿಗ ಮತ್ತು ಸೋನು ಶ್ರೀನಿವಾಸ್​ ಗೌಡ ನಡುವೆ ಆಪ್ತತೆ ಬೆಳೆಯುತ್ತಿದೆ. ಒಬ್ಬರಿಗೊಬ್ಬರು ಸಲಹೆ-ಸಹಕಾರ ನೀಡುತ್ತ ಮುಂದೆ ಸಾಗುತ್ತಿದ್ದಾರೆ. ಸೋನು ಶ್ರೀನಿವಾಸ್​ ಗೌಡ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಟ್ರೋಲ್​ ಮಾಡುತ್ತಿದ್ದಾರೆ. ಬಗೆಬಗೆಯ ಮೀಮ್ಸ್​ ಹರಿದಾಡುತ್ತಿವೆ. ಆದರೂ ಕೂಡ ಅವರು ‘ಬಿಗ್​ ಬಾಸ್​ ಒಟಿಟಿ’ ಆಟದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಈಗ ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಎರಡು ವಾರಗಳು ಕಳೆದಿವೆ. ಇನ್ನುಳಿದಿರುವುದು ನಾಲ್ಕು ವಾರಗಳು ಮಾತ್ರ. ಪ್ರತಿ ವಾರವೂ ಸ್ಪರ್ಧೆ ಕಠಿಣವಾಗುತ್ತಿದೆ. ಈಗಾಗಲೇ ಲೋಕೇಶ್​, ಅರ್ಜುನ್​ ರಮೇಶ್​, ಕಿರಣ್​ ಯೋಗೇಶ್ವರ್​, ಸ್ಫೂರ್ತಿ ಗೌಡ ಮನೆಯಿಂದ ಹೊರಹೋಗಿದ್ದಾರೆ. ಸದ್ಯ 12 ಜನರ ನಡುವೆ ಪೈಪೋಟಿ ನಡೆಯುತ್ತಿದೆ.

ಸೋನು ಶ್ರೀನಿವಾಸ್​​ ಗೌಡ ಅವರು ಬಿಗ್​ ಬಾಸ್​ ಮನೆಗೆ ಬರುವುದಕ್ಕಿಂತ ಮುಂಚೆ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಫೇಮಸ್​ ಆಗಿದ್ದರು. ಅದರ ಜೊತೆಗೆ ಅವರ ಖಾಸಗಿ ವಿಡಿಯೋ ವೈರಲ್​ ಆಗಿದ್ದರಿಂದ ಅವರು ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗಿದ್ದರು. ಆ ಬಗ್ಗೆ ದೊಡ್ಮನೆಯಲ್ಲಿ ಅವರು ಆರಂಭದಲ್ಲೇ ಸ್ಪಷ್ಟನೆ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:56 pm, Sun, 21 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್