AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ‘ಹುಡುಗರನ್ನು ಮನೆಯಿಂದ ಹೊರಗೆ ಕಳಿಸಬೇಕು’; ಬಿಗ್​ ಬಾಸ್​​ನಲ್ಲಿ ಸೋನು ಶ್ರೀನಿವಾಸ್​ ಗೌಡ ಪ್ಲ್ಯಾನ್​

Kichcha Sudeep | Bigg Boss Kannada OTT: ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಎರಡು ವಾರಗಳು ಕಳೆದಿವೆ. ಇನ್ನುಳಿದಿರುವುದು ನಾಲ್ಕು ವಾರಗಳು ಮಾತ್ರ. ಪ್ರತಿ ವಾರವೂ ಸ್ಪರ್ಧೆ ಕಠಿಣವಾಗುತ್ತಿದೆ.

Sonu Srinivas Gowda: ‘ಹುಡುಗರನ್ನು ಮನೆಯಿಂದ ಹೊರಗೆ ಕಳಿಸಬೇಕು’; ಬಿಗ್​ ಬಾಸ್​​ನಲ್ಲಿ ಸೋನು ಶ್ರೀನಿವಾಸ್​ ಗೌಡ ಪ್ಲ್ಯಾನ್​
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on:Aug 21, 2022 | 7:56 PM

Share

ಜನಪ್ರಿಯ ‘ಬಿಗ್​ ಬಾಸ್​ ಒಟಿಟಿ’ (Bigg Boss Kannada OTT) ಶೋನಲ್ಲಿ ಹಲವು ಟ್ವಿಸ್ಟ್​ಗಳು ಎದುರಾಗುತ್ತಿವೆ. ರೀಲ್ಸ್​ ಬೆಡಗಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು ಬೇರೆ ಬೇರೆ ರೀತಿಯಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಪ್ರತಿ ವಾರ ಅವರು ನಾಮಿನೇಟ್​ ಆಗುತ್ತಿದ್ದರೂ ಕೂಡ ವೀಕ್ಷಕರಿಂದ ಅಗತ್ಯ ವೋಟ್​ ಪಡೆಯುವ ಮೂಲಕ ಸೇಫ್​ ಆಗುತ್ತಿದ್ದಾರೆ. ಎಲ್ಲರ ಜೊತೆಯಲ್ಲೂ ಅವರು ಬೆರೆಯುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ನೇರ-ನಡೆನುಡಿಯ ಕಾರಣದಿಂದಲೂ ಸೋನು ಗೌಡ ಸದ್ದು ಮಾಡುತ್ತಿದ್ದಾರೆ. ಎರಡು ವಾರಗಳ ಕಾಲ ನಡೆದ ನಾಮಿನೇಷನ್​ ಮತ್ತು ಎಲಿಮಿನೇಷನ್​ (Bigg Boss Elimination) ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ನಾವು ಈ ಮನೆಯಿಂದ ಹುಡುಗರನ್ನು ಹೊರಗೆ ಹಾಕಬೇಕು’ ಎಂದು ಅವರು ಹೇಳಿದ್ದಾರೆ. ಆ ರೀತಿ ಅವರು ಹೇಳಿದ್ದಕ್ಕೂ ಕಾರಣ ಇದೆ.

ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ಚೆನ್ನಾಗಿ ಟಾಸ್ಕ್​ ಮಾಡುತ್ತಿರುವುದು ಹುಡುಗಿಯರು. ಆದರೆ ಹೆಚ್ಚು ನಾಮಿನೇಟ್​ ಆಗುತ್ತಿರುವುದು ಕೂಡ ಹುಡುಗಿಯರು. ಅಲ್ಲದೇ ಈವರೆಗೆ ಕಡಿಮೆ ವೋಟ್​ ಪಡೆದು ಎಲಿಮಿನೇಟ್​ ಆದ ಇಬ್ಬರು ಕೂಡ ಹುಡುಗಿಯರು. ಈ ವಿಚಾರವನ್ನು ಮನೆಯೊಳಗೆ ಪ್ರಸ್ತಾಪಿಸಿರುವ ಸೋನು ಗೌಡ ಅವರು, ಮುಂದಿನ ಬಾರಿ ಹುಡುಗರನ್ನು ಮನೆಯಿಂದ ಹೊರಹಾಕಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಕೇಶ್​ ಅಡಿಗ ಮತ್ತು ಸೋನು ಶ್ರೀನಿವಾಸ್​ ಗೌಡ ನಡುವೆ ಆಪ್ತತೆ ಬೆಳೆಯುತ್ತಿದೆ. ಒಬ್ಬರಿಗೊಬ್ಬರು ಸಲಹೆ-ಸಹಕಾರ ನೀಡುತ್ತ ಮುಂದೆ ಸಾಗುತ್ತಿದ್ದಾರೆ. ಸೋನು ಶ್ರೀನಿವಾಸ್​ ಗೌಡ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಟ್ರೋಲ್​ ಮಾಡುತ್ತಿದ್ದಾರೆ. ಬಗೆಬಗೆಯ ಮೀಮ್ಸ್​ ಹರಿದಾಡುತ್ತಿವೆ. ಆದರೂ ಕೂಡ ಅವರು ‘ಬಿಗ್​ ಬಾಸ್​ ಒಟಿಟಿ’ ಆಟದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ರಾತ್ರಿ 2.15ಕ್ಕೆ ಸೋನು ಗೌಡ ಜತೆ ಮಾತಾಡಲು ಬಂದ ರಾಕೇಶ್; ವೈರಲ್​ ಹುಡುಗಿಯ ಪ್ರತಿಕ್ರಿಯೆ ಹೇಗಿತ್ತು?​
Image
Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ

ಈಗ ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಎರಡು ವಾರಗಳು ಕಳೆದಿವೆ. ಇನ್ನುಳಿದಿರುವುದು ನಾಲ್ಕು ವಾರಗಳು ಮಾತ್ರ. ಪ್ರತಿ ವಾರವೂ ಸ್ಪರ್ಧೆ ಕಠಿಣವಾಗುತ್ತಿದೆ. ಈಗಾಗಲೇ ಲೋಕೇಶ್​, ಅರ್ಜುನ್​ ರಮೇಶ್​, ಕಿರಣ್​ ಯೋಗೇಶ್ವರ್​, ಸ್ಫೂರ್ತಿ ಗೌಡ ಮನೆಯಿಂದ ಹೊರಹೋಗಿದ್ದಾರೆ. ಸದ್ಯ 12 ಜನರ ನಡುವೆ ಪೈಪೋಟಿ ನಡೆಯುತ್ತಿದೆ.

ಸೋನು ಶ್ರೀನಿವಾಸ್​​ ಗೌಡ ಅವರು ಬಿಗ್​ ಬಾಸ್​ ಮನೆಗೆ ಬರುವುದಕ್ಕಿಂತ ಮುಂಚೆ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಫೇಮಸ್​ ಆಗಿದ್ದರು. ಅದರ ಜೊತೆಗೆ ಅವರ ಖಾಸಗಿ ವಿಡಿಯೋ ವೈರಲ್​ ಆಗಿದ್ದರಿಂದ ಅವರು ಸಿಕ್ಕಾಪಟ್ಟೆ ಟ್ರೋಲ್​ಗೆ ಒಳಗಾಗಿದ್ದರು. ಆ ಬಗ್ಗೆ ದೊಡ್ಮನೆಯಲ್ಲಿ ಅವರು ಆರಂಭದಲ್ಲೇ ಸ್ಪಷ್ಟನೆ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:56 pm, Sun, 21 August 22

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ