AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಈ ವಾರ ರಿಲೀಸ್ ಆಗುತ್ತಿವೆ ಹಲವು ಸಿನಿಮಾಗಳು; ಇಲ್ಲಿದೆ ವಿವರ

ಚಿಯಾನ್ ವಿಕ್ರಮ್ ಅವರು ಆಗಸ್ಟ್ 15ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಕರ್ನಾಟಕದ ಕೋಲಾರ ಚಿನ್ನದ ಗಣಿಯ ಕಥೆಯನ್ನು ಹೊಂದಿದೆ. ಈ ಸಿನಿಮಾ ಸೆಪ್ಟೆಂಬರ್ 20ರಂದು ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

ಒಟಿಟಿಯಲ್ಲಿ ಈ ವಾರ ರಿಲೀಸ್ ಆಗುತ್ತಿವೆ ಹಲವು ಸಿನಿಮಾಗಳು; ಇಲ್ಲಿದೆ ವಿವರ
ಒಟಿಟಿಯಲ್ಲಿ ಈ ವಾರ ರಿಲೀಸ್ ಆಗುತ್ತಿವೆ ಹಲವು ಸಿನಿಮಾಗಳು; ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on: Sep 16, 2024 | 9:45 PM

Share

ದಿನ ಕಳೆದಂತೆ ಒಟಿಟಿ ವ್ಯಾಪ್ತಿ ಹಿರಿದಾಗುತ್ತಲೇ ಇದೆ. ದೊಡ್ಡ ದೊಡ್ಡ ಸಿನಿಮಾಗಳು ಒಟಿಟಿಯಲ್ಲಿ ಬಿಡುಡಗೆ ಕಾಣುತ್ತಿವೆ. ಈ ವಾರವೂ ಒಟಿಟಿ ಪ್ರಿಯರಿಗೆ ಗುಡ್​ನ್ಯೂಸ್ ಇದೆ. ಹೌದು, ಈ ವಾರ ಅನೇಕ ಭಾಷೆಯ ಚಿತ್ರಗಳು ಹಾಗೂ ಸೀರಿಸ್ ವಿವಿಧ ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಪ್ರಸಾರ ಕಾಣುತ್ತಿವೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ಪಂಚಾಯತ್

ಹಿಂದಿಯಲ್ಲಿ ‘ಪಂಚಾಯತ್’ ಸೀರಿಸ್ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ಪಡೆಯಿತು. ಇದರ ತಮಿಳ ರಿಮೇಕ್ ರಿಲೀಸ್ ಆಗುತ್ತಿದೆ. ‘ದಳೈವೆತ್ತಿಯಾನ್ ಪಾಲಯಂ’ ಸೀರಿಸ್ ಸೆಪ್ಟೆಂಬರ್ 20ರಂದು ರಿಲೀಸ್ ಆಗಲಿದೆ. ಈ ಸೀರಿಸ್​ನಲ್ಲಿ ಜಿತೇಂದ್ರ ಕುಮಾರ್ ಪಾತ್ರವನ್ನು ಅಭಿಷೇಕ್ ಕುಮಾರ್ ನಟಿಸುತ್ತಿದ್ದಾರೆ.

ತಂಗಳಾನ್

ಚಿಯಾನ್ ವಿಕ್ರಮ್ ಅವರು ಆಗಸ್ಟ್ 15ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಕರ್ನಾಟಕದ ಕೋಲಾರ ಚಿನ್ನದ ಗಣಿಯ ಕಥೆಯನ್ನು ಹೊಂದಿದೆ. ಈ ಸಿನಿಮಾ ಸೆಪ್ಟೆಂಬರ್ 20ರಂದು ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

ಲಾಲ್ ಸಲಾಂ

ರಜನಿಕಾಂತ್ ಅವರ ನಟನೆಯ ‘ಲಾಲ್ ಸಲಾಂ’ ಸಿನಿಮಾ ಫೆಬ್ರವರಿ 9ರಂದು ಥಿಯೇಟರ್​ನಲ್ಲಿ ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ರಜನಿಕಾಂತ್ ಪ್ರಮುಖ ಅತಿಥಿ ಪಾತ್ರ ಮಾಡಿದ್ದರು. ಈ ಸಿನಿಮಾಗೆ ರಜನಿಕಾಂತ್ ಮಗಳು ಐಶ್ವರ್ಯಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಕೊನೆಗೂ ಒಟಿಟಿ ಬಾಗಿಲು ಓಪನ್ ಆಗಿದೆ. ಸನ್​ ಎನ್​ಎಕ್ಸ್​ಟಿ ಮೂಲಕ ಸಿನಿಮಾ ಸೆಪ್ಟೆಂಬರ್ 20ರಂದು ಬಿಡುಗಡೆ ಕಾಣುತ್ತಿದೆ.

ಮಾರುತಿ ನಗರ್ ಸುಬ್ರಮಣ್ಯಂ

ಆಗಸ್ಟ್ 23ರಂದು ‘ಮಾರುತಿ ನಗರ್ ಸುಬ್ರಮಣ್ಯಂ’ ಚಿತ್ರಮಂದಿರದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಕಾಮಿಡಿ ಡ್ರಾಮಾ ರೀತಿಯಲ್ಲಿ ಮೂಡಿ ಬಂತು. ಈ ಚಿತ್ರ ಆಹಾದಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ: ತಮಿಳಿನ ‘ಕೆಜಿಎಫ್’ ಕತೆ ‘ತಂಗಲಾನ್’ ಒಟಿಟಿ ಬಿಡುಗಡೆ ಯಾವಾಗ?

1000 ಬೇಬಿಸ್

ರೆಹಮಾನ್ ಅವರ ಮಲಯಾಂ ಸೀರಿಸ್ ‘1000 ಬೇಬಿಸ್’ ಪ್ರಸಾರ ಆಗುತ್ತಿದೆ. ಕೇರಳದ ಪಟ್ಟಣ ಒಂದರಲ್ಲಿ ಸಾಮೂಹಿಕ ಶಿಶುಹತ್ಯೆಯ ಮೇಲೆ ಈ ಕಥೆ ಇದೆ. ಈ ಸೀರಿಸ್​ನಲ್ಲಿ ನೀನಾ ಗುಪ್ತಾ, ಸಂಜು ಶಿವರಾಮ್, ಅಶ್ವಿನ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಈ ಸೀರಿಸ್​ ಮಲಯಾಳಂ, ತೆಲುಗು, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ಸೆಪ್ಟೆಂಬರ್ 20ರಂದು ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು