AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಟ್ಲೀಸ್ಟ್​​ ಇಷ್ಟ ಅಂತಾದ್ರೂ ಹೇಳು’; ಸ್ಫೂರ್ತಿಗೆ ನೇರವಾಗಿ ಹೇಳಿದ ರಾಕೇಶ್

‘ಬಿಗ್ ಬಾಸ್’ ಮನೆಯಲ್ಲಿ ಈವರೆಗೆ ಸಾಕಷ್ಟು ಪ್ರೇಮ ಕಥೆಗಳು ಹುಟ್ಟಿಕೊಂಡಿವೆ. ಈ ವರ್ಷವೂ ಯಾವುದಾದರೂ ಪ್ರೇಮಕಥೆಗಳು ಹುಟ್ಟಿಕೊಳ್ಳಲಿದೆಯೇ ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

‘ಅಟ್ಲೀಸ್ಟ್​​ ಇಷ್ಟ ಅಂತಾದ್ರೂ ಹೇಳು’; ಸ್ಫೂರ್ತಿಗೆ ನೇರವಾಗಿ ಹೇಳಿದ ರಾಕೇಶ್
ರಾಕೇಶ್​-ಸ್ಫೂರ್ತಿ
TV9 Web
| Edited By: |

Updated on: Aug 10, 2022 | 9:00 PM

Share

‘ಬಿಗ್ ಬಾಸ್ ಒಟಿಟಿ’ (Bigg Boss OTT) ದಿನ ಕಳೆದಂತೆ ರಂಗು ಹೆಚ್ಚಿಸಿಕೊಳ್ಳುತ್ತಿದೆ. ಒಂದೇ ವಾರದಲ್ಲಿ ಎಲ್ಲರ ನಿಜವಾದ ಮುಖ ಬಯಲಾಗುತ್ತಿದೆ. ಯಾರು ಮೃದು ಎಂದುಕೊಂಡಿದ್ದರೋ ಅವರ ವೈಲೆಂಟ್ ಮುಖ ಅನಾವರಣಗೊಂಡಿದೆ. ವೈಲೆಂಟ್ ಎಂದುಕೊಂಡವರಲ್ಲೂ ಒಂದು ಮಗು ಮನಸ್ಸು ಇದೆ ಎಂಬುದು ಗೊತ್ತಾಗುತ್ತಿದೆ. ಈ ಮಧ್ಯೆ ಮನೆಯಲ್ಲಿ ಲವ್ ವಿಚಾರ ಚರ್ಚೆಗೆ ಬರುತ್ತಿದೆ. ಸ್ಫೂರ್ತಿ ಗೌಡ (Spoorthi Gowda) ಹಾಗೂ ರಾಕೇಶ್ ಇಬ್ಬರೂ ದಿನ ಕಳೆದಂತೆ ಅನ್ಯೋನ್ಯವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವಿಚಾರ ಸಾಕಷ್ಟು ಹೈಲೈಟ್ ಆಗುತ್ತಿದೆ.

‘ಬಿಗ್ ಬಾಸ್’ ಮನೆಯಲ್ಲಿ ಈವರೆಗೆ ಸಾಕಷ್ಟು ಪ್ರೇಮ ಕಥೆಗಳು ಹುಟ್ಟಿಕೊಂಡಿವೆ. ಈ ಪೈಕಿ ಕೆಲ ಜೋಡಿಗಳು ಮದುವೆ ಆದ ಉದಾಹರಣೆ ಇದೆ. ಈ ವರ್ಷವೂ ಯಾವುದಾದರೂ ಪ್ರೇಮಕಥೆಗಳು ಹುಟ್ಟಿಕೊಳ್ಳಲಿದೆಯೇ ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ. ಈ ಸಂದರ್ಭದಲ್ಲಿ ಸ್ಫೂರ್ತಿ ಗೌಡ ಹಾಗೂ ರಾಕೇಶ್ ನಡುವೆ ಆಪ್ತತೆ ಬೆಳೆಯುತ್ತಿದೆ.

‘ಬಿಗ್ ಬಾಸ್​’ ಮನೆಯಲ್ಲಿ ರಾಕೇಶ್ ಹಾಗೂ ಸ್ಫೂರ್ತಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಒಂದು ಘಟನೆ ವೀಕ್ಷಕರ ಗಮನ ಸೆಳೆದಿದೆ. ‘ನಿಮಗೆ ಯಾರ ಮೇಲಾದರೂ ಲವ್ ಆದರೆ ಹೇಳ್ತೀರಾ?’ ಎಂದು ಸ್ಫೂರ್ತಿಗೆ ಪ್ರಶ್ನೆ ಮಾಡಿದರು ರಾಕೇಶ್. ‘ನಾನಾಗಿ ಯಾರಿಗೂ ಪ್ರಪೋಸ್ ಮಾಡಲ್ಲ. ಹುಡುಗನೇ ನನ್ನ ಬಳಿ ಬಂದು ಪ್ರೀತಿ ಹೇಳಿಕೊಳ್ಳಬೇಕು. ಆ ರೀತಿ ಮಾಡ್ತೀನಿ’ ಎಂದರು ಸ್ಫೂರ್ತಿ.

ಇದನ್ನೂ ಓದಿ
Image
ಸ್ಫೂರ್ತಿಗೆ ಪ್ರೀತಿಯಿಂದ ಚಪಾತಿ ತಿನ್ನಿಸಿದ ರಾಕೇಶ್; ‘ನಮ್ಮಿಬರ ಜೋಡಿ ಓಕೆ ನಾ’ ಎಂದು ಗುರೂಜಿ ಬಳಿ ಕೇಳಿದ ನಟಿ
Image
‘ನಾವು ಆಡೋಕೆ ಬಂದಿರೋದು, ಫೀಲಿಂಗ್ಸ್ ಬಗ್ಗೆ ಮಾತನಾಡೋಕಲ್ಲ’; ಸೋನು ಮುಖಕ್ಕೆ ಹೊಡೆದಂತೆ ಹೇಳಿದ ಸ್ಫೂರ್ತಿ
Image
ರಾಕೇಶ್​​ಗೆ ಸ್ಫೂರ್ತಿ ಗೌಡ ಮೇಲೆ ಲವ್​​? ‘ಬಿಗ್​​ ಬಾಸ್​’ನಲ್ಲಿ ಮೊದಲ ವಾರವೇ ಹುಟ್ಟಿತು ಪ್ರೀತಿ-ಪ್ರೇಮದ ಚರ್ಚೆ
Image
Spoorthi Gowda: ನಾಲ್ಕನೇ ಸ್ಪರ್ಧಿಯಾಗಿ ಸ್ಫೂರ್ತಿ ಗೌಡ ಎಂಟ್ರಿ; ಮಲೆನಾಡ ಹುಡಗಿಗೆ ಇದೆ ಒಂದು ಕೆಟ್ಟ ಹವ್ಯಾಸ

‘ನೀನು ಟಿಪಿಕಲ್ ಹುಡುಗಿ ತರ ಆಡ್ತೀರಲ್ಲ. ಲವ್ ಆದ್ರೆ ಲವ್ ಆಗಿದೆ ಎಂದು ಹೇಳಿಕೊಳ್ಳಬೇಕು. ಅಟ್ಲೀಸ್ಟ್​ ಇಷ್ಟ ಇದೆ ಎಂದ್ರೆ ಇಷ್ಟ ಇದೆ ಅಂತ ಹೇಳಿ’ ಎಂದರು ರಾಕೇಶ್. ‘ಇಲ್ಲಿ ಯಾರೂ ಇಷ್ಟ ಆಗಿಲ್ಲ. ಮನೆ ಹೊರಗೆ ಹೋಗಿ ಯಾರಾದರೂ ಇಷ್ಟ ಆದರೆ, ಇಷ್ಟ ಆಗಿದೆ ಅಂತ ಹೇಳ್ತೀನಿ’ ಎಂದರು ಅವರು.

ಇದನ್ನೂ ಓದಿ: ಸ್ಫೂರ್ತಿಗೆ ಪ್ರೀತಿಯಿಂದ ಚಪಾತಿ ತಿನ್ನಿಸಿದ ರಾಕೇಶ್; ‘ನಮ್ಮಿಬರ ಜೋಡಿ ಓಕೆ ನಾ’ ಎಂದು ಗುರೂಜಿ ಬಳಿ ಕೇಳಿದ ನಟಿ

ಸ್ಫೂರ್ತಿ ಅವರು ತೆಲುಗು ಧಾರಾವಾಹಿಯಲ್ಲಿ ನಟಿಸಿದ್ದರು. ಅದರಿಂದ ಅರ್ಧಕ್ಕೆ ಓಡಿ ಬಂದರು. ಇಂಜಿನಿಯರಿಂಗ್ ಕೂಡ ಅರ್ಧಕ್ಕೆ ತೊರೆದಿದ್ದಾರೆ. ಕಷ್ಟ ಎನಿಸಿದಾಗ ಅವರು ಮಾಡುತ್ತಿರುವ ಕೆಲಸದಿಂದ ಹೊರ ಬರುತ್ತಾರೆ. ಆದರೆ, ಬಿಗ್ ಬಾಸ್ ಮನೆಯಲ್ಲಿ ಹಲವು ಟಾಸ್ಕ್​ಗಳನ್ನು ಅವರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ.

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ