AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಪ್ರಕರಣ; ‘ಸ್ಕ್ವಿಡ್​ ಗೇಮ್’ 001 ಪ್ಲೇಯರ್​ಗೆ 80ನೇ ವಯಸ್ಸಲ್ಲಿ 1 ವರ್ಷ ಜೈಲು

ಸ್ಕ್ವಿಡ್ ಗೇಮ್ ಖ್ಯಾತಿಯ ದಕ್ಷಿಣ ಕೊರಿಯಾದ ನಟ ಓ ಯೆಂಗ್ ಸು ಅವರಿಗೆ 2017ರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆರೋಪಿ ತನ್ನ ಅಪರಾಧವನ್ನು ಅಲ್ಲಗಳೆದಿದ್ದರೂ, ನ್ಯಾಯಾಲಯವು ಸಂತ್ರಸ್ತೆಯ ಹೇಳಿಕೆಯನ್ನು ಪರಿಗಣಿಸಿ ತೀರ್ಪು ನೀಡಿದೆ. ಈ ತೀರ್ಪಿನಿಂದ ಸ್ಕ್ವಿಡ್ ಗೇಮ್ 3ರ ಚಿತ್ರೀಕರಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ.

ಲೈಂಗಿಕ ಕಿರುಕುಳ ಪ್ರಕರಣ; ‘ಸ್ಕ್ವಿಡ್​ ಗೇಮ್’ 001 ಪ್ಲೇಯರ್​ಗೆ 80ನೇ ವಯಸ್ಸಲ್ಲಿ 1 ವರ್ಷ ಜೈಲು
ಯಂಗ್ ಸು
ರಾಜೇಶ್ ದುಗ್ಗುಮನೆ
|

Updated on: Apr 04, 2025 | 2:35 PM

Share

ದಕ್ಷಿಣ ಕೊರಿಯಾ ನಟ ಓ ಯಂಗ್ ಸು (O Yeong-su ) ಅವರು ತೊಂದರೆ ಎದುರಿಸಿದ್ದಾರೆ. ಮಹಿಳೆಗೆ ಲೈಂಗಿಕವಾಗಿ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಅವರು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ. ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಂಡ ‘ಸ್ಕ್ವಿಡ್ ಗೇಮ್​’ ಸೀರಿಸ್​ನಲ್ಲಿ ಓ ಯೆಂಗ್ ಸೂ ಅವರು ಪ್ಲೇಯರ್ ನಂಬರ್ 1 ಪಾತ್ರ ಮಾಡಿದ್ದರು. ಈ ಪಾತ್ರ ಮೊದಲ ಸೀಸನ್​ನಲ್ಲೇ ಕೊನೆಗೊಳ್ಳುತ್ತದೆ. ಹೀಗಾಗಿ, ಅವರ ಜೈಲು ವಾಸದಿಂದ ಸ್ಕ್ವಿಡ್ ಗೇಮ್ 3’ ಶೂಟ್​ಗೆ ಯಾವುದೇ ಸಮಸ್ಯೆ ಆಗುವುದಿಲ್ಲ.

ಓ ಯಂಗ್ ಸು ಅವರು ರಂಗಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಕಾರ್ಯೋನ್ಮುಖವಾಗಿದ್ದಾರೆ. ಥಿಯೇಟರ್ ಗ್ರೂಪ್​ನ ಸದಸ್ಯೆ ಒಬ್ಬರಿಗೆ ಅವರು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಇತ್ತು. ಈ ಘಟನೆ ಬಳಿಕ ಆ ಯುವತಿ ಭಯದ ವಾತಾವರಣದಲ್ಲೇ ವಾಸವಾಗಿದ್ದಾಳೆ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಏಪ್ರಿಲ್ 3ರಂದು ಓ ಯೆಂಗ್ ಸು ಅವರ ಅರ್ಜಿಯ ಕೊನೆಯ ವಿಚಾರಣೆ ನಡೆದಿದೆ. ಇದರಲ್ಲಿ ಅವರಿಗೆ 1 ವರ್ಷ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿದೆ.

‘ಓ ಯಂಗ್ ಸು ಅವರು ಸಂತ್ರಸ್ತೆ ಬಳಿ ಕ್ಷಮೆ ಕೇಳುವ ಬದಲು, ತಂದೆಯಾಗಿ ನಾನು ಆ ರೀತಿ ಮಾಡಿದೆ ಎಂದು ಹೇಳುವ ಮೂಲಕ ಮತ್ತಷ್ಟು ನೋವು ಮಾಡಿದ್ದಾರೆ. ಆರೋಪ ಮಾಡಲ್ಪಟ್ಟಾಗಿನಿಂದ ಓ ಯಂಗ್ ಸು ಹೇಳಿಕೆಗಳು ಸ್ಥಿರವಾಗಿವೆ. ಸಂತ್ರಸ್ತೆಗೆ ಬೆಂಬಲ ನೀಡಲು ಮತ್ತು ಭವಿಷ್ಯದಲ್ಲಿ ಇಂತಹ ಅಪರಾಧಗಳನ್ನು ತಡೆಯಲು ಆರೋಪಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಬೇಕು’ ಎಂದು ಸಂತ್ರಸ್ತೆ ಪರ ವಕೀಲರು ಕೋರಿದರು.

ಇದನ್ನೂ ಓದಿ
Image
‘ಬಾಯ್ಸ್ vs ಗರ್ಲ್ಸ್’ ಶೋಗೆ ರಜತ್ ಹಾಜರ್; ವಿನಯ್ ಗೌಡ ಅಬ್ಸೆಂಟ್
Image
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
Image
ಮಹೇಶ್ ಬಾಬು ಕಾರಣಕ್ಕೆ ಶಾಲೆ ಬಂಕ್ ಮಾಡ್ತಾರೆ ಸಿತಾರಾ
Image
‘ಬಜರಂಗಿ ಭಾಯಿಜಾನ್’ ಆಫರ್ ಮೊದಲು ಹೋಗಿದ್ದು ಆಮಿರ್ ಬಳಿ

ಆದರೆ, ಓ ಯೆಂಗ್ ಸು ಅವರು ಈ ಎಲ್ಲಾ ಆರೋಪಗಳನ್ನು ಅಲ್ಲ ಗಳೆದಿದ್ದಾರೆ. ‘ಸಂತ್ರಸ್ತೆಯ ಹೇಳಿಕೆ ಮಾತ್ರ ಅವರ ವಿರುದ್ಧದ ಏಕೈಕ ಸಾಕ್ಷಿ. ಸಂತ್ರಸ್ತೆಯ ಸಾಕ್ಷ್ಯಕ್ಕೆ ಸ್ಥಿರತೆ ಮತ್ತು ತಾರ್ಕಿಕ ಸುಸಂಬದ್ಧತೆಯ ಕೊರತೆ ಇದೆ’ ಎಂದಿರುವ ವಕೀಲರು, ‘ಸ್ಕ್ವಿಡ್ ಗೇಮ್ ಹಿಟ್ ಆದ ಬಳಿಕ ಶೋ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಇದನ್ನು ತಪ್ಪಿಸಲು ನಟ ಔಪಚಾರಿಕವಾಗಿ ಕ್ಷಮೆ ಕೇಳಿದ್ದರು’ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಮಾಡಿದ ಅಚಾತುರ್ಯದಿಂದ ರಿವೀಲ್ ಆಯ್ತು ‘ಸ್ಕ್ವಿಡ್ ಗೇಮ್ 3’ ರಿಲೀಸ್ ದಿನಾಂಕ

ಘಟನೆ ಏನು?

2017ರಲ್ಲಿ ಈ ಘಟನೆ ನಡೆದಿದೆ. ಓ ಯಂಗ್ ಸು ಅವರು ತಮ್ಮ ಮನೆ ಸಮೀಪ ಸಂತ್ರಸ್ತೆಯನ್ನು ಅಪ್ಪಿಕೊಂಡು ಕಿಸ್ ಮಾಡಿದ್ದಾನೆ ಎನ್ನಲಾಗಿದೆ. ಈ ಮೊದಲು ಅವರಿಗೆ 8 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಹೊಸ ಆದೇಶದಲ್ಲಿ ಒಂದು ವರ್ಷ ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು