AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ.

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ
ಮುರಳಿ
ರಾಜೇಶ್ ದುಗ್ಗುಮನೆ
|

Updated on: Nov 21, 2024 | 12:50 PM

Share

ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾಗೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿತ್ತು. ಈಗ ಈ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಕೇವಲ 20 ದಿನಗಳಲ್ಲಿ ಸಿನಿಮಾ ಒಟಿಟಿ ಹಾದಿ ಹಿಡಿದಿದೆ. ಹಾಗಾದರೆ ಈ ಚಿತ್ರ ಯಾವ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ? ಸಿನಿಮಾ ಮಾಡಿದ ವಿಶೇಷ ಸಾಧನೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರವನ್ನು ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ ಅನ್ನೋದು ವಿಶೇಷ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ. ಈ ಬಗ್ಗೆ ನೆಟ್​ಫ್ಲಿಕ್ಸ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದೆ.

ಸಾಮಾನ್ಯವಾಗಿ ಅಮೇಜಾನ್ ಪ್ರೈಮ್, ಜೀ 5 ಮೊದಲಾದ ಒಟಿಟಿ ಪ್ಲಾಟ್​ಫಾರ್ಮ್​ಗಳು ಕನ್ನಡ ಸಿನಿಮಾಗಳನ್ನು ಪಡೆಯಲು ಪೈಪೋಟಿ ನಡೆಸುತ್ತವೆ. ಆದರೆ, ನೆಟ್​ಫ್ಲಿಕ್ಸ್ ಮೊದಲಿನಿಂದಲೂ ಈ ಬಗ್ಗೆ ತಾತ್ಸಾರ ತೋರುತ್ತಾ ಬಂದಿದೆ. ಈ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಇರೋದು ಬೆರಳೆಣಿಕೆ ಕನ್ನಡ ಚಿತ್ರಗಳು ಮಾತ್ರ. ಆದರೆ, ಈ ಒಟಿಟಿ ಸಂಸ್ಥೆ ‘ಬಘೀರ’ ಚಿತ್ರವನ್ನು ಖರೀದಿ ಮಾಡಿದೆ ಎಂದಾಗ ಸಹಜವಾಗಿಯೇ ಕನ್ನಡಿಗರಿಗೆ ಖುಷಿ ಆಗಿದೆ. ಅನೇಕರು ಸಿನಿಮಾದ ಗುಣಮಟ್ಟದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:  ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 

‘ಬಘೀರ’ ಸಿನಿಮಾದಲ್ಲಿ ಶ್ರೀಮುರಳಿ ಹಾಗೂ ರುಕ್ಮಿಣಿ ಜೊತೆ ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ರಂಗಾಯಣ ರಘು, ಗರುಡ ರಾಮ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ
ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ