AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ.

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ
ಮುರಳಿ
ರಾಜೇಶ್ ದುಗ್ಗುಮನೆ
|

Updated on: Nov 21, 2024 | 12:50 PM

Share

ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾಗೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿತ್ತು. ಈಗ ಈ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಕೇವಲ 20 ದಿನಗಳಲ್ಲಿ ಸಿನಿಮಾ ಒಟಿಟಿ ಹಾದಿ ಹಿಡಿದಿದೆ. ಹಾಗಾದರೆ ಈ ಚಿತ್ರ ಯಾವ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ? ಸಿನಿಮಾ ಮಾಡಿದ ವಿಶೇಷ ಸಾಧನೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರವನ್ನು ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ ಅನ್ನೋದು ವಿಶೇಷ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ. ಈ ಬಗ್ಗೆ ನೆಟ್​ಫ್ಲಿಕ್ಸ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದೆ.

ಸಾಮಾನ್ಯವಾಗಿ ಅಮೇಜಾನ್ ಪ್ರೈಮ್, ಜೀ 5 ಮೊದಲಾದ ಒಟಿಟಿ ಪ್ಲಾಟ್​ಫಾರ್ಮ್​ಗಳು ಕನ್ನಡ ಸಿನಿಮಾಗಳನ್ನು ಪಡೆಯಲು ಪೈಪೋಟಿ ನಡೆಸುತ್ತವೆ. ಆದರೆ, ನೆಟ್​ಫ್ಲಿಕ್ಸ್ ಮೊದಲಿನಿಂದಲೂ ಈ ಬಗ್ಗೆ ತಾತ್ಸಾರ ತೋರುತ್ತಾ ಬಂದಿದೆ. ಈ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಇರೋದು ಬೆರಳೆಣಿಕೆ ಕನ್ನಡ ಚಿತ್ರಗಳು ಮಾತ್ರ. ಆದರೆ, ಈ ಒಟಿಟಿ ಸಂಸ್ಥೆ ‘ಬಘೀರ’ ಚಿತ್ರವನ್ನು ಖರೀದಿ ಮಾಡಿದೆ ಎಂದಾಗ ಸಹಜವಾಗಿಯೇ ಕನ್ನಡಿಗರಿಗೆ ಖುಷಿ ಆಗಿದೆ. ಅನೇಕರು ಸಿನಿಮಾದ ಗುಣಮಟ್ಟದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:  ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 

‘ಬಘೀರ’ ಸಿನಿಮಾದಲ್ಲಿ ಶ್ರೀಮುರಳಿ ಹಾಗೂ ರುಕ್ಮಿಣಿ ಜೊತೆ ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ರಂಗಾಯಣ ರಘು, ಗರುಡ ರಾಮ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್