AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಸೀರಿಸ್ ಘೋಷಿಸಿದ ರಾಜಮೌಳಿ; ಶೀಘ್ರವೇ ಟ್ರೇಲರ್ ರಿಲೀಸ್

‘ಬಾಹುಬಲಿ’ ಸಿನಿಮಾ ಮಾಡಿದ ಮೇಲೆ ಅದನ್ನು ಸೀರಿಸ್ ಮಾಡೋದು ಏಕೆ ಅನ್ನೋ ಪ್ರಶ್ನೆ ಮೂಡೋದು ಸಹಜ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ಬಾಹುಬಲಿ.. ಬಾಹುಬಲಿ ಎಂಬ ಘೋಷ ಕೇಳುತ್ತಿದೆ.

‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಸೀರಿಸ್ ಘೋಷಿಸಿದ ರಾಜಮೌಳಿ; ಶೀಘ್ರವೇ ಟ್ರೇಲರ್ ರಿಲೀಸ್
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:May 01, 2024 | 7:04 AM

Share

ಎಸ್​.ಎಸ್. ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದಿಂದ ರಾಜಮೌಳಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಾಡಿದ ಕಲೆಕ್ಷನ್​ ತುಂಬಾನೇ ದೊಡ್ಡದು. ಈ ದಾಖಲೆಗಳನ್ನು ಮುರಿಯೋಕೆ ಯಾರಿಂದಲೂ ಸಾಧ್ಯವಾಗಿಲ್ಲ. ಈ ಮಧ್ಯೆ ರಾಜಮೌಳಿ ಅವರು ಒಂದು ಅಚ್ಚರಿಯ ಅಪ್​​ಡೇಟ್ ನೀಡಿದ್ದಾರೆ. ‘ಬಾಹುಬಲಿ’ ಹೆಸರಲ್ಲಿ ಸೀರಿಸ್ ಘೋಷಣೆ ಮಾಡಿದ್ದಾರೆ. ಇದರ ಟ್ರೇಲರ್ ಕೂಡ ಶೀಘ್ರವೇ ರಿಲೀಸ್ ಆಗಲಿದೆಯಂತೆ.

‘ಬಾಹುಬಲಿ’ ಸಿನಿಮಾ ಮಾಡಿದ ಮೇಲೆ ಅದನ್ನು ಸೀರಿಸ್ ಮಾಡೋದು ಏಕೆ ಅನ್ನೋ ಪ್ರಶ್ನೆ ಮೂಡೋದು ಸಹಜ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ಬಾಹುಬಲಿ.. ಬಾಹುಬಲಿ ಎಂಬ ಘೋಷ ಕೇಳುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸುತ್ತದೆ.

ಇದನ್ನೂ ಓದಿ: ವಿಫಲವಾಯ್ತಾ ರಾಜಮೌಳಿ ಪ್ರಯತ್ನ? ಮಹೇಶ್​ ಬಾಬು ಲುಕ್​ ಬಹಿರಂಗ

ಈ ಬಗ್ಗೆ ರಾಜಮೌಳಿ ಮಾಹಿತಿ ನೀಡಿದ್ದಾರೆ. ‘ಮಾಹಿಷ್ಮತಿಯ ಜನರು ಅವನ ಹೆಸರನ್ನು ಜಪಿಸಿದಾಗ, ಬ್ರಹ್ಮಾಂಡದ ಯಾವುದೇ ಶಕ್ತಿಯು ಅವನ ಹಿಂತಿರುಗಿವುಕೆಯನ್ನು ತಡೆಯಲು ಸಾಧ್ಯವಿಲ್ಲ. ಬಾಹುಬಲಿ: ಕ್ರೌನ್ ಆಫ್ ಬ್ಲಡ್ ಅನಿಮೇಟೆಡ್ ಸರಣಿ ಶೀಘ್ರವೇ ಬರಲಿದೆ’ ಎಂದಿದ್ದಾರೆ ರಾಜಮೌಳಿ. ರಾಜಮೌಳಿ ಅವರೇ ಇದನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಇದು ‘ಬಾಹುಬಲಿ’ ಸಿನಿಮಾ ಕಥೆಯನ್ನೇ ಹೊಂದಿರಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜೊತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Wed, 1 May 24

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು