AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಸೀರಿಸ್ ಘೋಷಿಸಿದ ರಾಜಮೌಳಿ; ಶೀಘ್ರವೇ ಟ್ರೇಲರ್ ರಿಲೀಸ್

‘ಬಾಹುಬಲಿ’ ಸಿನಿಮಾ ಮಾಡಿದ ಮೇಲೆ ಅದನ್ನು ಸೀರಿಸ್ ಮಾಡೋದು ಏಕೆ ಅನ್ನೋ ಪ್ರಶ್ನೆ ಮೂಡೋದು ಸಹಜ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ಬಾಹುಬಲಿ.. ಬಾಹುಬಲಿ ಎಂಬ ಘೋಷ ಕೇಳುತ್ತಿದೆ.

‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಸೀರಿಸ್ ಘೋಷಿಸಿದ ರಾಜಮೌಳಿ; ಶೀಘ್ರವೇ ಟ್ರೇಲರ್ ರಿಲೀಸ್
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:May 01, 2024 | 7:04 AM

Share

ಎಸ್​.ಎಸ್. ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದಿಂದ ರಾಜಮೌಳಿ ಖ್ಯಾತಿ ವಿಶ್ವಾದ್ಯಂತ ಹಬ್ಬಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಾಡಿದ ಕಲೆಕ್ಷನ್​ ತುಂಬಾನೇ ದೊಡ್ಡದು. ಈ ದಾಖಲೆಗಳನ್ನು ಮುರಿಯೋಕೆ ಯಾರಿಂದಲೂ ಸಾಧ್ಯವಾಗಿಲ್ಲ. ಈ ಮಧ್ಯೆ ರಾಜಮೌಳಿ ಅವರು ಒಂದು ಅಚ್ಚರಿಯ ಅಪ್​​ಡೇಟ್ ನೀಡಿದ್ದಾರೆ. ‘ಬಾಹುಬಲಿ’ ಹೆಸರಲ್ಲಿ ಸೀರಿಸ್ ಘೋಷಣೆ ಮಾಡಿದ್ದಾರೆ. ಇದರ ಟ್ರೇಲರ್ ಕೂಡ ಶೀಘ್ರವೇ ರಿಲೀಸ್ ಆಗಲಿದೆಯಂತೆ.

‘ಬಾಹುಬಲಿ’ ಸಿನಿಮಾ ಮಾಡಿದ ಮೇಲೆ ಅದನ್ನು ಸೀರಿಸ್ ಮಾಡೋದು ಏಕೆ ಅನ್ನೋ ಪ್ರಶ್ನೆ ಮೂಡೋದು ಸಹಜ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ಬಾಹುಬಲಿ.. ಬಾಹುಬಲಿ ಎಂಬ ಘೋಷ ಕೇಳುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸುತ್ತದೆ.

ಇದನ್ನೂ ಓದಿ: ವಿಫಲವಾಯ್ತಾ ರಾಜಮೌಳಿ ಪ್ರಯತ್ನ? ಮಹೇಶ್​ ಬಾಬು ಲುಕ್​ ಬಹಿರಂಗ

ಈ ಬಗ್ಗೆ ರಾಜಮೌಳಿ ಮಾಹಿತಿ ನೀಡಿದ್ದಾರೆ. ‘ಮಾಹಿಷ್ಮತಿಯ ಜನರು ಅವನ ಹೆಸರನ್ನು ಜಪಿಸಿದಾಗ, ಬ್ರಹ್ಮಾಂಡದ ಯಾವುದೇ ಶಕ್ತಿಯು ಅವನ ಹಿಂತಿರುಗಿವುಕೆಯನ್ನು ತಡೆಯಲು ಸಾಧ್ಯವಿಲ್ಲ. ಬಾಹುಬಲಿ: ಕ್ರೌನ್ ಆಫ್ ಬ್ಲಡ್ ಅನಿಮೇಟೆಡ್ ಸರಣಿ ಶೀಘ್ರವೇ ಬರಲಿದೆ’ ಎಂದಿದ್ದಾರೆ ರಾಜಮೌಳಿ. ರಾಜಮೌಳಿ ಅವರೇ ಇದನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಇದು ‘ಬಾಹುಬಲಿ’ ಸಿನಿಮಾ ಕಥೆಯನ್ನೇ ಹೊಂದಿರಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜೊತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Wed, 1 May 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್