AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದು ಗದ್ದಲ ಇಲ್ಲದೇ ಸೈಲೆಂಟ್​ ಆಗಿ ಒಟಿಟಿಗೆ ಬಂತು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾ

ಜನವರಿ 25ರ ರಾತ್ರಿಯಿಂದಲೇ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ - ಸೈಡ್​ ಬಿ’ ಸಿನಿಮಾ ಸ್ಟ್ರೀಮಿಂಗ್​ ಆಗುತ್ತಿದೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾದ ಒಟಿಟಿ ರಿಲೀಸ್​ ಬಗ್ಗೆ ಹೆಚ್ಚೇನೂ ಪ್ರಚಾರ ನೀಡಿಲ್ಲ. ಥಿಯೇಟರ್​ನಲ್ಲಿ ಈ ಚಿತ್ರವನ್ನು ಮಿಸ್ ಮಾಡಿಕೊಂಡವರು ಈಗ ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು.

ಸದ್ದು ಗದ್ದಲ ಇಲ್ಲದೇ ಸೈಲೆಂಟ್​ ಆಗಿ ಒಟಿಟಿಗೆ ಬಂತು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾ
‘ಸಪ್ತ ಸಾಗರದಾಚೆ ಎಲ್ಲೋ - ಸೈಡ್​ ಬಿ’
ಮದನ್​ ಕುಮಾರ್​
|

Updated on: Jan 26, 2024 | 3:40 PM

Share

ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ (SSE Side B) ಸಿನಿಮಾ ಬಿಡುಗಡೆಯಾಗಿ ಬಹಳ ದಿನಗಳು ಕಳೆದಿವೆ. ವಿಮರ್ಶಕರಿಂದ ಈ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. 2023ರ ನವೆಂಬರ್ 17ರಂದು ತೆರೆಕಂಡಿದ್ದ ಈ ಸಿನಿಮಾ ಯಾವಾಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದರು. ಈಗ ಸದ್ದು ಗದ್ದಲ ಇಲ್ಲದೇ ‘ಅಮೇಜಾನ್​ ಪ್ರೈಂ ವಿಡಿಯೋ’ (Amazon Prime Video) ಮೂಲಕ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಥಿಯೇಟರ್​ನಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು. ರಕ್ಷಿತ್​ ಶೆಟ್ಟಿ (Rakshit Shetty) ಜೊತೆ ರುಕ್ಮಿಣಿ ವಸಂತ್​ ಮತ್ತು ಚೈತ್ರಾ ಆಚಾರ್​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಎರಡು ಪಾರ್ಟ್​ನಲ್ಲಿ ಮೂಡಿಬಂತು. ಮೊದಲ ಭಾಗವನ್ನು ‘ಸೈಡ್​ ಎ’ ಹಾಗೂ ಎರಡನೇ ಭಾಗವನ್ನು ‘ಸೈಡ್​ ಬಿ’ ಎಂದು ಕರೆಯಲಾಯಿತು. ಒಂದು ಗಾಢವಾದ ಪ್ರೇಮಕಥೆ ಈ ಸಿನಿಮಾದಲ್ಲಿ ಇದೆ. ಹೇಮಂತ್​ ಎಂ. ರಾವ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ‘ಸೈಡ್​ ಎ’ ನೋಡಿ ಮೆಚ್ಚಿಕೊಂಡವರು ಈಗ ಒಟಿಟಿಯಲ್ಲಿ ‘ಸೈಡ್​ ಬಿ’ ನೋಡಿ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: SSE Side B: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ತಂಡಕ್ಕೆ ‘ಕತ್ತೆ’ ಎಂದು ಹೊಗಳಿದ ಕಿಚ್ಚ ಸುದೀಪ್​

ಜನವರಿ 25ರ ರಾತ್ರಿಯಿಂದಲೇ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾ ಸ್ಟ್ರೀಮಿಂಗ್​ ಆಗುತ್ತಿದೆ. ಈ ಬಗ್ಗೆ ಹೆಚ್ಚೇನೂ ಪ್ರಚಾರ ನೀಡಿಲ್ಲ. ಬಹುನಿರೀಕ್ಷಿತ ಸಿನಿಮಾದ ಒಟಿಟಿ ರಿಲೀಸ್​ ವೇಳೆ ಚಿತ್ರತಂಡದವರು ಒಂದಷ್ಟು ಪ್ರಚಾರ ಮಾಡುವುದು ವಾಡಿಕೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಚಿತ್ರದ ಒಟಿಟಿ ರಿಲೀಸ್​ ಕುರಿತು ಅಷ್ಟೇನೂ ಪ್ರಚಾರ ಮಾಡಲಾಗಿಲ್ಲ.

ಇದನ್ನೂ ಓದಿ: ಗಣರಾಜ್ಯೋತ್ಸವದ ಪ್ರಯುಕ್ತ ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ

ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡಿದ್ದಾರೆ. ಪ್ರೀತಿಗಾಗಿ ಮತ್ತು ಪ್ರೀತಿಸಿದವಳಿಗಾಗಿ ಜೀವನದಲ್ಲಿ ಸಾಕಷ್ಟು ರಿಸ್ಕ್​ಗಳನ್ನು ತೆಗೆದುಕೊಳ್ಳುವ ಆ ಪಾತ್ರವನ್ನು ರಕ್ಷಿತ್​ ಶೆಟ್ಟಿ ಅವರು ಚೆನ್ನಾಗಿ ನಿಭಾಯಿಸಿದ್ದಾರೆ. ನಾಯಕಿಯರಾದ ರುಕ್ಮಿಣಿ ವಸಂತ್​ ಹಾಗೂ ಚೈತ್ರಾ ಆಚಾರ್​ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗೋಪಾಲಕೃಷ್ಣ ದೇಶಪಾಂಡೆ ಅವರು ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯವಾದ ಪಾತ್ರ ಮಾಡಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನ, ಅದ್ವೈತ್​ ಗುರುಮೂರ್ತಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು