AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

600 ಕೋಟಿ ರೂಪಾಯಿ ಗಳಿಸಿದ ಬೆನ್ನಲ್ಲೇ ಒಟಿಟಿಗೆ ಬಂದ ‘ಸ್ತ್ರೀ 2’; ಆದರೆ…

ಶ್ರದ್ಧಾ ಕಪೂರ್ ಅವರು ಹಾಗೂ ರಾಜ್​ಕುಮಾರ್ ರಾವ್ ನಟನೆಯ ‘ಸ್ತ್ರೀ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಆಗಸ್ಟ್ 15ರಂದು ರಿಲೀಸ್ ಆದ ಈ ಚಿತ್ರ ಈಗಲೂ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ ಅನ್ನೋದು ವಿಶೇಷ. ಹೀಗಿರುವಾಗಲೇ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ.

600 ಕೋಟಿ ರೂಪಾಯಿ ಗಳಿಸಿದ ಬೆನ್ನಲ್ಲೇ ಒಟಿಟಿಗೆ ಬಂದ ‘ಸ್ತ್ರೀ 2’; ಆದರೆ...
ಶ್ರದ್ಧಾ
ರಾಜೇಶ್ ದುಗ್ಗುಮನೆ
|

Updated on:Sep 26, 2024 | 11:09 AM

Share

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಪಂಕಜ್ ತ್ರಿಪಾಠಿ ಮೊದಲಾದವರು ನಟಿಸಿರೋ ‘ಸ್ತ್ರೀ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಬರೋಬ್ಬರಿ 600 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಬೆನ್ನಲ್ಲೇ ‘ಸ್ತ್ರೀ 2’ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ವೀಕ್ಷಿಸಬಹುದು. ಆದರೆ, ಇದಕ್ಕೆ ನೀವು ಬಾಡಿಗೆ ಪಾವತಿ ಮಾಡಬೇಕು.

ಅಮೇಜಾನ್ ಪ್ರೈಮ್ ವಿಡಿಯೋ ಹೊಸ ತಂತ್ರ ರೂಪಿಸಿದೆ. ಬೇಡಿಕೆ ಇರುವ ಸಿನಿಮಾಗಳನ್ನು ರೆಂಟ್ ಕ್ಯಾಟಗರಿ ಅಡಿಯಲ್ಲಿ ಪ್ರಸಾರ ಮಾಡುತ್ತಿದೆ. ಇದನ್ನು ನೋಡಬೇಕು ಎಂದರೆ ನಿಗದಿಪಡಿಸಿದ ಹಣ ಪಾವತಿ ಮಾಡಬೇಕು. ‘ಸ್ತ್ರೀ 2’ ಚಿತ್ರಕ್ಕೂ ಇದೇ ತಂತ್ರವನ್ನು ರೂಪಿಸುವ ಕೆಲಸ ಆಗಿದೆ.

‘ಸ್ತ್ರೀ 2’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ 349 ರೂಪಾಯಿಗೆ ಲಭ್ಯವಿದೆ. ಹಿಂದಿ ಭಾಷೆಯಲ್ಲಿ ಮಾತ್ರ ಸಿನಿಮಾನ ನೋಡಬಹುದು. ಚಂದಾದಾರರು ಇದನ್ನು ಉಚಿತವಾಗಿ ವೀಕ್ಷಿಸಬೇಕು ಎಂದರೆ ಮತ್ತಷ್ಟು ದಿನ ಕಾಯಬೇಕು. ಅಲ್ಲಿಯವರೆಗೆ ಬಾಡಿಗೆ ನೀಡಿಯೇ ಹಣ ಪಾವತಿ ಮಾಡಬೇಕು.

‘ಸ್ತ್ರೀ 2’ ಚಿತ್ರವನ್ನು ದಿನೇಶ್ ವಿಜನ್, ಜ್ಯೋತಿ ದೇಶಪಾಂಡೆ ನಿರ್ಮಾಣ ಮಾಡಿದ್ದಾರೆ. ಅಮರ್ ಕೌಶಿಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅಕ್ಷಯ್ ಕುಮಾರ್, ವರುಣ್ ಧವನ್ ಮೊದಲಾದವರು ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ಸ್ತ್ರೀ 3’ ಕೂಡ ಬರಲಿದ್ದು, ಇದಕ್ಕಾಗಿ ಈಗಾಗಲೇ ಸ್ಕ್ರಿಪ್ಟ್ ಕೂಡ ರೆಡಿ ಆಗಿದೆ.

ಇದನ್ನೂ ಓದಿ: ಶಾರುಖ್​, ರಣಬೀರ್ ದಾಖಲೆ ಮುರಿದ ಶ್ರದ್ಧಾ ಕಪೂರ್; ದಾಖಲೆ ಬರೆದ ‘ಸ್ತ್ರೀ 2’ ಸಿನಿಮಾ

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್ ಬಾಲಿವುಡ್​ನಲ್ಲಿ ಯಶಸ್ಸನ್ನು ಕಂಡವರು. ಅವರ ಸಿನಿಮಾಗಳು 100 ಕೋಟಿ ರೂಪಾಯಿ ಗಳಿಸಿದ ಉದಾಹರಣೆ ಇದೆ. ಆದರೆ, ಇದೇ ಮೊದಲ ಬಾರಿಗೆ ಅವರ ಚಿತ್ರ 600 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದು ಅವರ ವೃತ್ತಿ ಜೀವನದಲ್ಲಿ ಕಂಡ ದೊಡ್ಡ ಯಶಸ್ಸಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Thu, 26 September 24

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ