AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆರರಿಸ್ಟ್ ಪಾತ್ರಕ್ಕೆ ಭೋಲಾ, ಶಂಕರ್​ ಹೆಸರು; ನೆಟ್​ಫ್ಲಿಕ್ಸ್​ ಮುಖ್ಯಸ್ಥರನ್ನು ವಿಚಾರಣೆಗೆ ಕರೆದ ಸರ್ಕಾರ

ನೈಜ ಘಟನೆ ಆಧರಿಸಿ ‘ಐಸಿ 814: ದಿ ಕಂದಹಾರ್​ ಹೈಜಾಕ್​’ ವೆಬ್ ಸಿರೀಸ್​ ನಿರ್ಮಾಣ ಆಗಿದೆ. ಆದರೆ ಇದರಲ್ಲಿ ಭಯೋತ್ಪಾದಕರ ಹೆಸರನ್ನು ಬದಲಾಯಿಸಲಾಗಿದೆ ಎಂಬ ಆರೋಪ ಇದೆ. ಪಾಕಿಸ್ತಾನದ ಭಯೋತ್ಪಾದಕರಿಗೆ ಭೋಲಾ ಮತ್ತು ಶಂಕರ್ ಎಂದು ಹೆಸರು ಇಡಲಾಗಿದೆ. ಇದರಿಂದ ವಿವಾದ ಹುಟ್ಟಿಕೊಂಡಿದೆ. ನೆಟ್​ಫ್ಲಿಕ್ಸ್​ನಲ್ಲಿ ಈ ವೆಬ್​ ಸಿರೀಸ್​ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ಆಕ್ಷೇಪ ಎತ್ತಿದ್ದಾರೆ.

ಟೆರರಿಸ್ಟ್ ಪಾತ್ರಕ್ಕೆ ಭೋಲಾ, ಶಂಕರ್​ ಹೆಸರು; ನೆಟ್​ಫ್ಲಿಕ್ಸ್​ ಮುಖ್ಯಸ್ಥರನ್ನು ವಿಚಾರಣೆಗೆ ಕರೆದ ಸರ್ಕಾರ
ಐಸಿ 814: ದಿ ಕಂದಹಾರ್​ ಹೈಜಾಕ್​
ಮದನ್​ ಕುಮಾರ್​
|

Updated on: Sep 02, 2024 | 8:25 PM

Share

ನೆಟ್​ಫ್ಲಿಕ್ಸ್​ ಒಟಿಟಿ ಮೂಲಕ ಬಿಡುಗಡೆ ಆಗಿರುವ ‘ಐಸಿ 814: ದಿ ಕಂದಹಾರ್​ ಹೈಜಾಕ್​’ ವೆಬ್​ ಸರಣಿ ವಿವಾದಕ್ಕೆ ಕಾರಣ ಆಗಿದೆ. ರಿಯಲ್​ ಘಟನೆಯನ್ನು ಆಧರಿಸಿದ ಈ ವೆಬ್​ ಸಿರೀಸ್​ನಲ್ಲಿ ಕೆಲವು ಮಾಹಿತಿಯನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಸ್ಲಿಂ ಭಯೋತ್ಪಾದಕರ ಪಾತ್ರಗಳಿಗೆ ಹಿಂದೂಗಳ ಹೆಸರನ್ನು ಇಡಲಾಗಿದೆ ಎಂದು ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನೆಟ್​ಫ್ಲಿಕ್ಸ್​ ಮುಖ್ಯಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದೆ.

1999ರ ಡಿಸೆಂಬರ್​ 24ರಂದು ನೇಪಾಳದ ಕಠ್ಮಂಡು ಇಂದ ದೆಹಲಿಗೆ ಹೊರಟಿದ್ದ ವಿಮಾನವನ್ನು ಪಾಕಿಸ್ತಾನದ ಭಯೋತ್ಪಾದಕರು ಹೈಜಾಕ್​ ಮಾಡಿದ್ದರು. ಆ ವಿಮಾನದಲ್ಲಿ 190 ಪ್ರಯಾಣಿಕರು ಇದ್ದರು. ಅಮೃತಸರ, ಲಹೋರ್​, ದುಬೈ ಮುಂತಾದ ಕಡೆಗಳಲ್ಲಿ ಸುತ್ತಾಡಿದ ಬಳಿಕ ಮರುದಿನ ಅಂದರೆ, ಡಿಸೆಂಬರ್​ 25ರಂದು ಅಫ್ಘಾನಿಸ್ತಾನದ ಕಂದಹಾರ್​ನಲ್ಲಿ ‘ಐಸಿ 814’ ವಿಮಾನವನ್ನು ಲ್ಯಾಂಡ್​ ಮಾಡಲಾಯಿತು. ಭಾರತದ ಜೈಲಿನಲ್ಲಿ ಇರುವ ಪಾಕಿಸ್ತಾನದ ಭಯೋತ್ಪಾದಕರ ಬಿಡುಗಡೆಗೆ ಒತ್ತಾಯಿಸಿ ಈ ಹೈಜಾಕ್​ ಮಾಡಲಾಗಿತ್ತು.

ಈ ರೋಚಕ ಘಟನೆಯನ್ನು ಇಟ್ಟುಕೊಂಡು ‘ಐಸಿ 814: ದಿ ಕಂದಹಾರ್​ ಹೈಜಾಕ್​’ ವೆಬ್​ ಸಿರೀಸ್​ ಮೂಡಿಬಂದಿದೆ. ವಿಮಾನ ಹೈಜಾಕ್​ ಮಾಡಿದ್ದ ಭಯೋತ್ಪಾದಕರ ಹೆಸರು ಇಬ್ರಾಹಿಂ ಅಥರ್​, ಶಾಹಿದ್​ ಅಖ್ತರ್​ ಸಯೀದ್​, ಸನ್ನಿ ಅಹ್ಮದ್​ ಖಾಜಿ, ಝಹೂರ್​ ಮಿಸ್ತ್ರೀ ಮತ್ತು ಶಾಖಿರ್​. ಆದರೆ ಈ ವೆಬ್​ ಸರಣಿಯಲ್ಲಿ ಭಯೋತ್ಪಾಕರ ಹೆಸರನ್ನು ಭೋಲಾ ಮತ್ತು ಶಂಕರ್​ ಎಂದು ತೋರಿಸಲಾಗಿದೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿದ ಪ್ರಯಾಣಿಕನ ಬಂಧನ, ಹೀಗೆ ಮಾಡಲು ಕಾರಣವೇನು?

‘ಐಸಿ 814: ದಿ ಕಂದಹಾರ್​ ಹೈಜಾಕ್​’ ವೆಬ್​ ಸರಣಿಯಲ್ಲಿ ಭಯೋತ್ಪಾದಕರ ಹೆಸರು ಬದಲಾಗಿದ್ದು ಯಾಕೆ ಎಂದು ವಿವರಣೆ ನೀಡುವಂತೆ ನೆಟ್​ಫ್ಲಿಕ್ಸ್​ನ ಕಾಂಟೆಂಟ್​ ಮುಖ್ಯಸ್ಥರಿಗೆ ಪ್ರಶ್ನೆ ಮಾಡಲಾಗಿದೆ. ಈ ವಿಚಾರವಾಗಿ ಸೆಪ್ಟೆಂಬರ್​ 3ರಂದು ವಿಚಾರಣೆಗೆ ಬರುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಮನ್ಸ್​ ನೀಡಿದೆ. ‘ಭೋಲಾ ಮತ್ತು ಶಂಕರ್​ ಎಂಬುದು ಭಯೋತ್ಪಾದಕರ ಕೋಡ್​ನೇಮ್​ ಆಗಿತ್ತು’ ಎಂದು ಕೆಲವರು ವಾದಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಸ್ಪಷ್ಟನೆ ನೀಡಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ