AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ

ಕನ್ನಡ ಮತ್ತು ತುಳು ಭಾಷೆಯ ‘ಜೈ’ ಸಿನಿಮಾ 2025ರ ನವೆಂಬರ್ 14ರಂದು ರಿಲೀಸ್ ಆಗಿತ್ತು. ಚಿತ್ರಮಂದಿರದಲ್ಲಿ ಹಿಟ್ ಆದ ಆ ಸಿನಿಮಾ ಈಗ ‘ಜೀ5’ ಒಟಿಟಿಯಲ್ಲಿ ಪ್ರಸಾರ ಆಗಲು ಸಜ್ಜಾಗಿದೆ. ಫೆಬ್ರವರಿ 6ರಿಂದ ಕನ್ನಡ ಹಾಗೂ ತುಳುವಿನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ
Jai Movie Poster
ಮದನ್​ ಕುಮಾರ್​
|

Updated on: Feb 02, 2026 | 10:23 PM

Share

‘ಬಿಗ್ ಬಾಸ್ ಕನ್ನಡ 9’ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರ ನಟ ಮತ್ತು ನಿರ್ದೇಶಕ ಕೂಡ ಹೌದು. ಅವರು ಅಭಿನಯಿಸಿ, ನಿರ್ದೇಶನ ಮಾಡಿರುವ ‘ಜೈ’ ಸಿನಿಮಾ (Jai Movie) ಇತ್ತೀಚೆಗೆ ಬಿಡುಗಡೆ ಆಗಿತ್ತು. ತುಳು ಮತ್ತು ಕನ್ನಡ ಭಾಷೆಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಚಿತ್ರಮಂದಿರದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಬರುತ್ತಿದೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಫೆಬ್ರವರಿ 6ರಿಂದ ಜೀ5 ಒಟಿಟಿ (OTT) ಮೂಲಕ ‘ಜೈ’ ಸಿನಿಮಾ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಅವರು ನಟಿಸಿದ್ದಾರೆ ಎಂಬುದು ವಿಶೇಷ.

‘ಜೈ’ ಸಿನಿಮಾದಲ್ಲಿ ನಾಯಕನಾಗಿ ರೂಪೇಶ್ ಶೆಟ್ಟಿ ಅಭಿನಯಿಸಿದ್ದಾರೆ. ಅವರ ಜೊತೆ ರಾಜ್ ದೀಪಕ್ ಶೆಟ್ಟಿ, ಅದ್ವಿತಿ ಶೆಟ್ಟಿ, ದೇವದಾಸ್ ಕಾಪಿಕಾಡ್, ಅರವಿಂದ್ ಬೋಲಾರ್, ನವೀನ್ ಡಿ. ಪಡೀಲ್, ಭೋಜರಾಜ್ ವಮಂಜೂರ್ ಮುಂತಾದ ಕಲಾವಿದರು ನಟಿಸಿದ್ದಾರೆ. ಹಿಂದಿ ಚಿತ್ರರಂಗದ ಸ್ಟಾರ್ ನಟ ಸುನೀಲ್ ಶೆಟ್ಟಿ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸುನೀಲ್ ಶೆಟ್ಟಿ ಅವರ ಮಾತೃಭಾಷೆ ಕೂಡ ತುಳು. ಆ ಭಾಷೆಯ ಮೇಲಿನ ಪ್ರೀತಿಯಿಂದಾಗಿ ಅವರು ‘ಜೈ’ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದರು. ಅವರಿಂದಾಗಿ ಚಿತ್ರತಂಡಕ್ಕೆ ದೊಡ್ಡ ಬಲ ಬಂದಿತ್ತು. ಅವರ ಪಾತ್ರದ ಎಂಟ್ರಿ ದೃಶ್ಯವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿತ್ತು. ಸುನೀಲ್ ಶೆಟ್ಟಿ ಅವರು ಈ ಚಿತ್ರದಲ್ಲಿ ನಟಿಸಿದ್ದು ಮಾತ್ರವಲ್ಲದೇ ಪ್ರಚಾರದಲ್ಲಿ ಕೂಡ ಭಾಗಿ ಆಗಿದ್ದರು.

ಇದು ಸುನೀಲ್ ಶೆಟ್ಟಿ ಅವರು ನಟಿಸಿದ ಮೊದಲ ತುಳು ಸಿನಿಮಾ ಎಂಬುದು ಇನ್ನೊಂದು ವಿಶೇಷ. ಚಿತ್ರದ ಒಟಿಟಿ ರಿಲೀಸ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಈ ಸಿನಿಮಾವನ್ನು ಒಪ್ಪಿಕೊಳ್ಳಲು ನನಗೆ ಪ್ರೇರಣೆ ಆಗಿದ್ದು ಈ ತಂಡದ ಪ್ರಾಮಾಣಿಕತೆ ಹಾಗೂ ಈ‌ ಕಥೆಗಿರುವ ಶಕ್ತಿ. ತುಳು ಸಿನಿಮಾ, ಸಂಸ್ಕೃತಿಯನ್ನು ಮೆರೆಯುತ್ತದೆ. ಇಂತಹ ಒಂದು ವಿಶೇಷವಾದ ಚಿತ್ರವು ಜೀ5ನಲ್ಲಿ ರಿಲೀಸ್ ಆಗುವುದರಿಂದ ಭಾಷೆಯ ಗೆರೆಯನ್ನು ದಾಟಿ ಎಲ್ಲರ ಗಮನ ಸೆಳೆಯಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟ ವಿನ್ ಆಗಿದ್ದಕ್ಕೆ ರೂಪೇಶ್ ಶೆಟ್ಟಿಗೆ ಬೇಸರವಾಯ್ತಾ?

ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಮಾತನಾಡಿ, ‘ಈ ಸಿನಿಮಾ ನಮ್ಮ ಮಣ್ಣಿನ ಕಥೆಯನ್ನು ಹೇಳುತ್ತದೆ. ದಕ್ಷಿಣ ಕರ್ನಾಟಕದ ಸಾಹಿತ್ಯ, ಸಂಸ್ಕೃತಿ ಮುಂತಾದವುಗಳನ್ನು ಈ ಸಿನಿಮಾ ಒಳಗೊಂಡಿದೆ. ಇದು ನನ್ನ ಬದುಕಿಗೆ ಬಹಳ ಹತ್ತಿರವಾದ ಕಥೆ ಆಗಿದೆ. ಇದು ಕನ್ನಡ ಹಾಗೂ ತುಳುವಿನಲ್ಲಿ ಜೀ5ನಲ್ಲಿ ಪ್ರಸಾರ ಆಗಲಿರುವುದು ಮತ್ತೊಂದು ಪ್ರಮುಖ ಸಂಗತಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ