AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ

ಕನ್ನಡ ಮತ್ತು ತುಳು ಭಾಷೆಯ ‘ಜೈ’ ಸಿನಿಮಾ 2025ರ ನವೆಂಬರ್ 14ರಂದು ರಿಲೀಸ್ ಆಗಿತ್ತು. ಚಿತ್ರಮಂದಿರದಲ್ಲಿ ಹಿಟ್ ಆದ ಆ ಸಿನಿಮಾ ಈಗ ‘ಜೀ5’ ಒಟಿಟಿಯಲ್ಲಿ ಪ್ರಸಾರ ಆಗಲು ಸಜ್ಜಾಗಿದೆ. ಫೆಬ್ರವರಿ 6ರಿಂದ ಕನ್ನಡ ಹಾಗೂ ತುಳುವಿನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ
Jai Movie Poster
ಮದನ್​ ಕುಮಾರ್​
|

Updated on: Feb 02, 2026 | 10:23 PM

Share

‘ಬಿಗ್ ಬಾಸ್ ಕನ್ನಡ 9’ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರ ನಟ ಮತ್ತು ನಿರ್ದೇಶಕ ಕೂಡ ಹೌದು. ಅವರು ಅಭಿನಯಿಸಿ, ನಿರ್ದೇಶನ ಮಾಡಿರುವ ‘ಜೈ’ ಸಿನಿಮಾ (Jai Movie) ಇತ್ತೀಚೆಗೆ ಬಿಡುಗಡೆ ಆಗಿತ್ತು. ತುಳು ಮತ್ತು ಕನ್ನಡ ಭಾಷೆಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಚಿತ್ರಮಂದಿರದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಬರುತ್ತಿದೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಫೆಬ್ರವರಿ 6ರಿಂದ ಜೀ5 ಒಟಿಟಿ (OTT) ಮೂಲಕ ‘ಜೈ’ ಸಿನಿಮಾ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಅವರು ನಟಿಸಿದ್ದಾರೆ ಎಂಬುದು ವಿಶೇಷ.

‘ಜೈ’ ಸಿನಿಮಾದಲ್ಲಿ ನಾಯಕನಾಗಿ ರೂಪೇಶ್ ಶೆಟ್ಟಿ ಅಭಿನಯಿಸಿದ್ದಾರೆ. ಅವರ ಜೊತೆ ರಾಜ್ ದೀಪಕ್ ಶೆಟ್ಟಿ, ಅದ್ವಿತಿ ಶೆಟ್ಟಿ, ದೇವದಾಸ್ ಕಾಪಿಕಾಡ್, ಅರವಿಂದ್ ಬೋಲಾರ್, ನವೀನ್ ಡಿ. ಪಡೀಲ್, ಭೋಜರಾಜ್ ವಮಂಜೂರ್ ಮುಂತಾದ ಕಲಾವಿದರು ನಟಿಸಿದ್ದಾರೆ. ಹಿಂದಿ ಚಿತ್ರರಂಗದ ಸ್ಟಾರ್ ನಟ ಸುನೀಲ್ ಶೆಟ್ಟಿ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸುನೀಲ್ ಶೆಟ್ಟಿ ಅವರ ಮಾತೃಭಾಷೆ ಕೂಡ ತುಳು. ಆ ಭಾಷೆಯ ಮೇಲಿನ ಪ್ರೀತಿಯಿಂದಾಗಿ ಅವರು ‘ಜೈ’ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದರು. ಅವರಿಂದಾಗಿ ಚಿತ್ರತಂಡಕ್ಕೆ ದೊಡ್ಡ ಬಲ ಬಂದಿತ್ತು. ಅವರ ಪಾತ್ರದ ಎಂಟ್ರಿ ದೃಶ್ಯವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿತ್ತು. ಸುನೀಲ್ ಶೆಟ್ಟಿ ಅವರು ಈ ಚಿತ್ರದಲ್ಲಿ ನಟಿಸಿದ್ದು ಮಾತ್ರವಲ್ಲದೇ ಪ್ರಚಾರದಲ್ಲಿ ಕೂಡ ಭಾಗಿ ಆಗಿದ್ದರು.

ಇದು ಸುನೀಲ್ ಶೆಟ್ಟಿ ಅವರು ನಟಿಸಿದ ಮೊದಲ ತುಳು ಸಿನಿಮಾ ಎಂಬುದು ಇನ್ನೊಂದು ವಿಶೇಷ. ಚಿತ್ರದ ಒಟಿಟಿ ರಿಲೀಸ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಈ ಸಿನಿಮಾವನ್ನು ಒಪ್ಪಿಕೊಳ್ಳಲು ನನಗೆ ಪ್ರೇರಣೆ ಆಗಿದ್ದು ಈ ತಂಡದ ಪ್ರಾಮಾಣಿಕತೆ ಹಾಗೂ ಈ‌ ಕಥೆಗಿರುವ ಶಕ್ತಿ. ತುಳು ಸಿನಿಮಾ, ಸಂಸ್ಕೃತಿಯನ್ನು ಮೆರೆಯುತ್ತದೆ. ಇಂತಹ ಒಂದು ವಿಶೇಷವಾದ ಚಿತ್ರವು ಜೀ5ನಲ್ಲಿ ರಿಲೀಸ್ ಆಗುವುದರಿಂದ ಭಾಷೆಯ ಗೆರೆಯನ್ನು ದಾಟಿ ಎಲ್ಲರ ಗಮನ ಸೆಳೆಯಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟ ವಿನ್ ಆಗಿದ್ದಕ್ಕೆ ರೂಪೇಶ್ ಶೆಟ್ಟಿಗೆ ಬೇಸರವಾಯ್ತಾ?

ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಮಾತನಾಡಿ, ‘ಈ ಸಿನಿಮಾ ನಮ್ಮ ಮಣ್ಣಿನ ಕಥೆಯನ್ನು ಹೇಳುತ್ತದೆ. ದಕ್ಷಿಣ ಕರ್ನಾಟಕದ ಸಾಹಿತ್ಯ, ಸಂಸ್ಕೃತಿ ಮುಂತಾದವುಗಳನ್ನು ಈ ಸಿನಿಮಾ ಒಳಗೊಂಡಿದೆ. ಇದು ನನ್ನ ಬದುಕಿಗೆ ಬಹಳ ಹತ್ತಿರವಾದ ಕಥೆ ಆಗಿದೆ. ಇದು ಕನ್ನಡ ಹಾಗೂ ತುಳುವಿನಲ್ಲಿ ಜೀ5ನಲ್ಲಿ ಪ್ರಸಾರ ಆಗಲಿರುವುದು ಮತ್ತೊಂದು ಪ್ರಮುಖ ಸಂಗತಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್