ವಿಜಯ್ ದೇವರಕೊಂಡ ಸಹೋದರನ ಸೂಪರ್ ಹಿಟ್ ಸಿನಿಮಾ ‘ಬೇಬಿ’ ಒಟಿಟಿಗೆ

Baby Movie: ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ನಟನೆಯ ಸೂಪರ್ ಹಿಟ್ ಸಿನಿಮಾ 'ಬೇಬಿ' ಒಟಿಟಿಗೆ ಬರುತ್ತಿದೆ.

ವಿಜಯ್ ದೇವರಕೊಂಡ ಸಹೋದರನ ಸೂಪರ್ ಹಿಟ್ ಸಿನಿಮಾ 'ಬೇಬಿ' ಒಟಿಟಿಗೆ
ಬೇಬಿ
Follow us
|

Updated on: Aug 18, 2023 | 4:30 PM

ವಿಜಯ್ ದೇವರಕೊಂಡ (Vijay Deverakonda) ಸಾಲು-ಸಾಲು ಫ್ಲಾಪ್ ಸಿನಿಮಾಗಳನ್ನು ನೀಡುತ್ತಿದ್ದರೆ, ಅವರ ಸಹೋದರ ಆನಂದ್ ದೇವರಕೊಂಡ ಮಾತ್ರ ಸಣ್ಣ-ಪುಟ್ಟ ಸಿನಿಮಾಗಳನ್ನೇ ಮಾಡುತ್ತಾ ಹಿಟ್ ಮೇಲೆ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಆನಂದ್ ದೇವರಕೊಂಡ ಇತ್ತೀಚೆಗೆ ನಟಿಸಿರುವ ‘ಬೇಬಿ‘ (Baby) ಸಿನಿಮಾ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿದೆ. ಕಡಿಮೆ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾ 100 ಕೋಟಿ ಕಲೆಕ್ಷನ್ ದಾಟಿದೆ. ಪರರಾಜ್ಯಗಳಲ್ಲಿಯೂ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ.

‘ಬೇಬಿ’ ಸಿನಿಮಾ ತೆಲುಗಿನ ಆಹಾ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಆಗಸ್ಟ್ 26ರಿಂದ ಆಹಾನಲ್ಲಿ ‘ಬೇಬಿ’ ಸಿನಿಮಾ ಸ್ಟ್ರೀಂ ಆಗಲಿದೆ. ಕೇವಲ 9 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾಗಿದ್ದ ‘ಬೇಬಿ’ ಸಿನಿಮಾ ಜುಲೈ 14ರಂದು ಬಿಡುಗಡೆ ಆಗಿತ್ತು. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಶೋಗಳ ಸಂಖ್ಯೆ ದುಪ್ಪಟ್ಟಾಯಿತಲ್ಲದೆ ಯುವ ಜನರು ಮುಗಿಬಿದ್ದು ಸಿನಿಮಾ ನೋಡಿದರು. ಕೆಲವೇ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ನೂರು ಕೋಟಿ ದಾಟಿತು.

ಇದೀಗ ‘ಬೇಬಿ’ ಸಿನಿಮಾವು ಆಹಾ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿರುವುದು ಕೆಲವರಿಗೆ ಆಶ್ಚರ್ಯವನ್ನೂ ಉಂಟು ಮಾಡಿದೆ. ಸೂಪರ್ ಹಿಟ್ ಆಗಿರುವ ‘ಬೇಬಿ’ ಸಿನಿಮಾವನ್ನು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬಳಕೆದಾರರಿರುವ ಒಟಿಟಿಗಳಿಗೆ ನೀಡದೆ ತೆಲುಗು ಭಾಷೆಗಷ್ಟೆ ಸೀಮಿತವಾಗಿರುವ ಕಡಿಮೆ ಬಳಕೆದಾರರಿರುವ ‘ಆಹಾ’ ಒಟಿಟಿಗೆ ನೀಡಿರುವುದು ಜಾಣ ನಡೆಯಲ್ಲ ಎಂದು ಕೆಲವು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಮಾಹಿತಿಯ ಪ್ರಕಾರ, ‘ಆಹಾ’ ಒಟಿಟಿಯ ಜೊತೆಗೆ ಜೀ5ನಲ್ಲಿಯೂ ಈ ಸಿನಿಮಾ ಸ್ಟ್ರೀಂ ಆಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:Baby Movie Collection: ‘ಅರ್ಜುನ್​ ರೆಡ್ಡಿ’ ಚಿತ್ರದ ಲೈಫ್​ಟೈಮ್​ ಗಳಿಕೆ ಮೀರಿಸಿದ ‘ಬೇಬಿ’; ಅಣ್ಣನ ರೀತಿಯೇ ಮಿಂಚಿದ ಆನಂದ್​ ದೇವರಕೊಂಡ

‘ಬೇಬಿ’ ಸಿನಿಮಾ ಸೂಪರ್ ಹಿಟ್ ಆಗಿರುವ ಜೊತೆಗೆ ಕೆಲವು ಟೀಕೆಗಳನ್ನೂ ಸಹ ಎದುರಿಸಿದೆ. ಈ ಸಿನಿಮಾ ಮಹಿಳಾ ವಿರೋಧಿ ಎಂಬ ಮಾತುಗಳು ಕೇಳಿ ಬಂದಿವೆ. ಯುವತಿಯರ ವ್ಯಕ್ತಿತ್ವವನ್ನು ಕೆಟ್ಟದಾಗಿ ಸಿನಿಮಾದಲ್ಲಿ ಬಿಂಬಿಸಲಾಗಿದೆ ಎಂದು ಕೆಲವರು ಆರೋಪಿಸಿದ್ದಾರೆ. ಸಿನಿಮಾವು ತ್ರಿಕೋನ ಪ್ರೇಮಕತೆಯನ್ನು ಆಧರಿಸಿದ್ದು, ಸಿನಿಮಾದಲ್ಲಿ ನಾಯಕಿಯು ಒಂದೇ ಸಮಯಕ್ಕೆ ಇಬ್ಬರನ್ನು ಪ್ರೀತಿಸುತ್ತಾಳೆ, ಕೊನೆಗೆ ಮೂರನೇ ವ್ಯಕ್ತಿಯನ್ನು ಮದುವೆಯಾಗುತ್ತಾಳೆ. ಸಿನಿಮಾದಲ್ಲಿ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಆಟೋ ಚಾಲಕನ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು