AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ವೆಬ್ ಸೀರಿಸ್ ಈಗ ಒಟಿಟಿಯಲ್ಲಿ; ಕೊನೆವರೆಗೂ ಗೆಸ್ ಮಾಡ್ತಾನೇ ಇರ್ಬೇಕು

ಕೊವಿಡ್ ನಂತರ ಭಾರತದಲ್ಲಿ ವೆಬ್ ಸರಣಿಗಳ ಜನಪ್ರಿಯತೆ ಹೆಚ್ಚಿದೆ. ತಮಿಳಿನ ವೆಬ್ ಸೀರಿಸ್​​ಗೆ ಎರಡನೇ ಪಾರ್ಟ್​ ಅಮೇಜಾನ್ ಪ್ರೈಮ್​ಗೆ ಬಂದಿದೆ. ಕಥಿರ್ ಮತ್ತು ಐಶ್ವರ್ಯಾ ರಾಜೇಶ್ ನಟಿಸಿರುವ ಈ ಸರಣಿಯು ಒಂದು ಕೊಲೆ ಪ್ರಕರಣವನ್ನು ಕೇಂದ್ರೀಕರಿಸಿದೆ. ಮೊದಲ ಸೀಸನ್ ನೋಡಿದವರಿಗೆ ಎರಡನೇ ಸೀಸನ್ ಅರ್ಥ ಮಾಡಿಕೊಳ್ಳಲು ಸುಲಭ.

ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ವೆಬ್ ಸೀರಿಸ್ ಈಗ ಒಟಿಟಿಯಲ್ಲಿ; ಕೊನೆವರೆಗೂ ಗೆಸ್ ಮಾಡ್ತಾನೇ ಇರ್ಬೇಕು
ವೆಬ್ ಸರಣಿ
ರಾಜೇಶ್ ದುಗ್ಗುಮನೆ
|

Updated on:Mar 07, 2025 | 2:30 PM

Share

ಕೊವಿಡ್ ಕಾಣಿಸಿಕೊಂಡ ಬಳಿಕ ಭಾರತದಲ್ಲಿ ವೆಬ್ ಸೀರಿಸ್​​ಗಳ ನಿರ್ಮಾಣ ಹೆಚ್ಚಾಗಿದೆ. ಕೊರೊನಾ ಸಮಯದಲ್ಲಿ ಒಟಿಟಿ ವ್ಯಾಪ್ತಿ ಹೆಚ್ಚಿದ್ದರಿಂದ ಸಿನಿಮಾ ನಿರ್ಮಾಪಕರು ವೆಬ್​ ಸೀರಿಸ್​ಗಳ ನಿರ್ಮಾಣಕ್ಕೆ ಆದ್ಯತೆ ಕೊಟ್ಟರು. ಸದ್ಯದ ಮಾರುಕಟ್ಟೆಯಲ್ಲಿ ಕ್ರೈಮ್ ಥ್ರಿಲ್ಲರ್ (Crime Thriller) ವೆಬ್​ ಸೀರಿಸ್​ಗೆ ಸಖತ್ ಬೇಡಿಕೆ ಇದೆ. ಈಗ ತಮಿಳಿನ ಸೂಪರ್ ಹಿಟ್ ವೆಬ್ ಸರಣಿ ಒಂದು ಒಟಿಟಿಯಲ್ಲಿ ಲಭ್ಯವಾಗಿದೆ. ಇದನ್ನು ನೀವು ಮಿಸ್ ಮಾಡದೇ ನೋಡಬೇಕು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಸದ್ಯ ರಿಲೀಸ್ ಆಗಿರೋ ತಮಿಳಿನ ವೆಬ್ ಸರಣಿಯ ಹೆಸರು ‘ಸುಳಲ್ 2’. ‘ಸುಳಲ್’ ವೆಬ್ ಸರಣಿ 2022ರ ಜೂನ್ 17ರಂದು ಪ್ರಸಾರ ಆರಂಭಿಸಿತು. ಇದು ಎಂಟು ಎಪಿಸೋಡ್​ಗಳನ್ನು ಒಳಗೊಂಡಿತ್ತು. ಕಧಿರ್, ಐಶ್ವರ್ಯಾ ರಾಜೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಕ್ಕರೆ (ಕಧಿರ್) ಪೊಲೀಸ್ ಟ್ರೇನಿಂಗ್ ಮುಗಿಸಿ ತನ್ನ ಹುಟ್ಟೂರಿನಲ್ಲೇ ಪೋಸ್ಟಿಂಗ್ ಹಾಕಿಸಿಕೊಳ್ಳುತ್ತಾನೆ. ಈ ರೀತಿ ಪೋಸ್ಟ್​ ಹಾಕಿಸಿಕೊಂಡಾಗ ಒಂದು ಪ್ರಕರಣದಲ್ಲಿ ಅವನು ವಿಚಾರಣೆ ನಡೆಸಬೇಕಾಗುತ್ತದೆ. ನಂತರ ಈ ಪ್ರಕರಣ ಹೇಗೆ ಭೇದಿಸುತ್ತಾನೆ ಎಂಬುದು ಚಿತ್ರದ ಕಥೆ.

ಇದನ್ನೂ ಓದಿ: ಮಲಯಾಳಂನ ಈ ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಒಟಿಟಿಗೆ; ಕನ್ನಡದಲ್ಲೂ ಲಭ್ಯ

ಇದನ್ನೂ ಓದಿ
Image
ಪತಿ ನಾಗ ಚೈತನ್ಯ ಜೊತೆ ಹನಿಮೂನ್ ತೆರೆಳಿದ ಶೋಭಿತಾ ಧುಲಿಪಾಲ್
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ಮಲಯಾಳಂನ ಈ ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಒಟಿಟಿಗೆ

ಎರಡನೇ ಸರಣಿ ಇತ್ತೀಚೆಗೆ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಆರಂಭಿಸಿದೆ. ಈ ಸರಣಿ ಕೂಡ ಒಂದು ಕೊಲೆ ಸುತ್ತ ಸಾಗುತ್ತದೆ. ಮೊದಲ ಸೀಸನ್​ ರೀತಿಯೇ ಈ ಸೀಸನ್​ನಲ್ಲೂ ಅನುಮಾನಗಳು ಎಲ್ಲರ ಮೇಲೂ ಸಾಗುತ್ತವೆ. ಕೊನೆಯಲ್ಲಿ ಕೊಲೆ ಮಾಡಿದ ವ್ಯಕ್ತಿ ಯಾರು? ಕೊಲೆ ಹಿಂದೆ ಯಾರಿದ್ದಾರೆ ಎಂಬುದು ತಿಳಿಯುತ್ತದೆ.

ಮೊದಲ ಸೀಸನ್ ನೋಡಲೇಬೇಕೆ?

‘ಸುಳಲ್’ ಮೊದಲ ಸೀಸನ್ ಹಾಗೂ ಎರಡನೇ ಸೀಸನ್​ಗೆ ಆರಂಭದಲ್ಲಿ ಕೆಲವು ಲಿಂಕ್​ಗಳು ಇವೆ. ಹೀಗಾಗಿ, ಮೊದಲ ಸೀಸನ್​ ವೀಕ್ಷಣೆ ಮಾಡಿದ್ದರೆ ಎರಡನೇ ಸೀಸನ್ ಅರ್ಥ ಮಾಡಿಕೊಳ್ಳೋದು, ಕಥಾ ನಾಯಕ ಯಾವ ರೀತಿಯಲ್ಲಿ ಆಲೋಚನೆ ಮಾಡುತ್ತಾನೆ ಎಂಬುದು ಸುಲಭದವಾಗಿ ಅರ್ಥವಾಗುತ್ತದೆ. ತಮಿಳಿನ ಜೊತೆಗೆ ಕನ್ನಡದಲ್ಲೂ ಈ ಸೀರಿಸ್ ವೀಕ್ಷಣೆಗೆ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:27 pm, Fri, 7 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ