AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾಸ್ತವತೆ ತಿರುಚಲಾಗಿದೆ​’; ನಸೀರುದ್ದೀನ್​ ಷಾ ನಟನೆಯ ‘ತಾಜ್: ಡಿವೈಡೆಡ್ ಬೈ ಬ್ಲಡ್​’ ಸೀರಿಸ್​ಗೆ ಮಿಶ್ರ ಪ್ರತಿಕ್ರಿಯೆ

ಅಕ್ಬರ್​ಗೆ ಮೂವರು ಮಕ್ಕಳು. ಈ ಪೈಕಿ ಸಿಂಹಾಸನದ ಜವಾಬ್ದಾರಿ ಹೊರುವವರು ಯಾರು ಎಂಬುದನ್ನು ನಿರ್ಧರಿಸುವ ಸಮಯ ಬರುತ್ತದೆ. ಇದೇ ವಿಚಾರ ಇಟ್ಟುಕೊಂಡು ‘ತಾಜ್​: ಡಿವೈಡೆಡ್​ ಬೈ ಬ್ಲಡ್​​’ ವೆಬ್​ ಸೀರಿಸ್​ ಸಿದ್ಧಗೊಂಡಿದೆ.

‘ವಾಸ್ತವತೆ ತಿರುಚಲಾಗಿದೆ​’; ನಸೀರುದ್ದೀನ್​ ಷಾ ನಟನೆಯ ‘ತಾಜ್: ಡಿವೈಡೆಡ್ ಬೈ ಬ್ಲಡ್​’ ಸೀರಿಸ್​ಗೆ ಮಿಶ್ರ ಪ್ರತಿಕ್ರಿಯೆ
‘ತಾಜ್: ಡಿವೈಡೆಡ್ ಬೈ ಬ್ಲಡ್’ ತಂಡ
ರಾಜೇಶ್ ದುಗ್ಗುಮನೆ
|

Updated on:Mar 03, 2023 | 1:22 PM

Share

ಒಟಿಟಿ (OTT) ವ್ಯಾಪ್ತಿ ಹೆಚ್ಚಿದೆ. ಹಾಗೆಯೇ ಒಟಿಟಿ ಪ್ಲಾಟ್​ಫಾರ್ಮ್​ಗಳ ಮಧ್ಯೆ ಸ್ಪರ್ಧೆ ಕೂಡ ಹಿರಿದಾಗಿದೆ. ಈ ರೇಸ್​ನಲ್ಲಿ ಗೆಲ್ಲಲು ಹಲವು ರೀತಿಯ ವೆಬ್​ ಸೀರಿಸ್​ಗಳನ್ನು ಸಿದ್ಧಪಡಿಸಿ ವೀಕ್ಷಕರ ಮುಂದಿಡುವ ಪ್ರಯತ್ನ ಒಟಿಟಿ ಪ್ಲಾಟ್​ಫಾರ್ಮ್​​ಗಳಿಂದ ಆಗುತ್ತಿದೆ. ಕೆಲವು ಸಿನಿಮಾ/ಸೀರಿಸ್​​ಗಳು ನೈಜ ಘಟನೆ ಆಧರಿಸಿ ಸಿದ್ಧಗೊಂಡರೆ, ಇನ್ನೂ ಕೆಲವು ಕಾಲ್ಪನಿಕ ಕಥೆಗಳು. ಈಗ ಐತಿಹಾಸಿಕ ಘಟನೆ ಆಧರಿಸಿ ಸಿದ್ಧಗೊಂಡ ನಸೀರುದ್ದೀನ್ ಷಾ ನಟನೆಯ ‘ತಾಜ್: ಡಿವೈಡೆಡ್ ಬೈ ಬ್ಲಡ್’ (Taj: Divided By Blood) ವೆಬ್ ಸೀರಿಸ್ ಜೀ5 ಮೂಲಕ ಪ್ರಸಾರ ಕಂಡಿದೆ. ಇದಕ್ಕೆ ಎಲ್ಲ ಕಡೆಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಕ್ಬರ್​ಗೆ ಮೂವರು ಮಕ್ಕಳು. ಈ ಪೈಕಿ ಸಿಂಹಾಸನದ ಜವಾಬ್ದಾರಿ ಹೊರುವವರು ಯಾರು ಎಂಬುದನ್ನು ನಿರ್ಧರಿಸುವ ಸಮಯ ಬರುತ್ತದೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಅಧಿಕಾರ ಸಿಗುತ್ತದೆ ಎಂದು ಎಲ್ಲರೂ ಭಾವಿಸಿರುತ್ತಾರೆ. ಆದರೆ, ಸಾಮರ್ಥ್ಯದ ಆಧಾರದಲ್ಲಿ ಉತ್ತಾಧಿಕಾರಿಯನ್ನು ​ಆಯ್ಕೆ ಮಾಡಲು ಅಕ್ಬರ್​ ಮುಂದಾಗುತ್ತಾನೆ. ಅಲ್ಲಿಂದ ಸಿಂಹಾಸನಕ್ಕಾಗಿ ಕಿತ್ತಾಟ ಆರಂಭ ಆಗುತ್ತದೆ. ಇದೇ ವಿಚಾರ ಇಟ್ಟುಕೊಂಡು ‘ತಾಜ್​: ಡಿವೈಡೆಡ್​ ಬೈ ಬ್ಲಡ್​​’ ವೆಬ್​ ಸೀರಿಸ್​ ಸಿದ್ಧಗೊಂಡಿದೆ.

ಮಾರ್ಚ್​ 3ಕ್ಕೆ ‘ತಾಜ್: ಡಿವೈಡೆಡ್ ಬೈ ಬ್ಲಡ್’ ರಿಲೀಸ್ ಆಗಲಿದೆ ಎಂದು ಜೀ5 ಕಡೆಯಿಂದ ಘೋಷಣೆ ಆಗಿತ್ತು. ಮಾರ್ಚ್​ 2ರ ತಡರಾತ್ರಿಯಿಂದಲೇ ಈ ವೆಬ್ ಸೀರಿಸ್ ವೀಕ್ಷಣೆಗೆ ಲಭ್ಯವಾಗಿದೆ. ಇದನ್ನು ನೋಡಿದ ಅನೇಕರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ನಸೀರುದ್ದೀನ್​ ಷಾ ಅವರು ಅಕ್ಬರ್ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಅನಾರ್ಕಲಿ ಆಗಿ ಅದಿತಿ ರಾವ್ ಹೈದರಿ ಗಮನ ಸೆಳೆದಿದ್ದಾರೆ ಎನ್ನುವ ಮಾತು ವೀಕ್ಷಕರ ವಲಯದಲ್ಲಿ ಕೇಳಿ ಬಂದಿದೆ. ಈ ಸೀರಿಸ್​ನಲ್ಲಿ 10 ಎಪಿಸೋಡ್​ಗಳಿವೆ. ಮೊಘಲರು ಹೇಗೆ ಅವನತಿ ಕಂಡರು ಎಂಬುದನ್ನು ವಿವರಿಸಲಾಗಿದೆ.

ಇದನ್ನೂ ಓದಿ
Image
ಮಿತಿ ಮೀರಿದ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ ಈ ನಟಿಯರು; ಇಲ್ಲಿದೆ ವೆಬ್​ ಸೀರಿಸ್ ಹೆಸರು
Image
‘ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜತೆ ಸಮಂತಾ ಮತ್ತೊಂದು ವೆಬ್​ ಸೀರಿಸ್​; ಆ್ಯಕ್ಷನ್​ನಲ್ಲಿ ಮಿಂಚಲಿದ್ದಾರೆ ಸ್ಯಾಮ್
Image
ವೆಬ್​ ಸೀರಿಸ್​ ನಿರ್ಮಾಣ ಮಾಡಲಿದ್ದಾರೆ ವಿಜಯ್​ ದೇವರಕೊಂಡ; ಹೊಸ ವಿಚಾರ ಬಿಚ್ಚಿಟ್ಟ ನಟ
Image
Web Series : ಈ ವೆಬ್​ ಸೀರೀಸ್​ಗಳು ಎಲ್ಲಿಗೆ ಹೋಗಿ ತಲುಪುತ್ತವೆಯೋ…

ಇದನ್ನೂ ಓದಿ:  ‘ಮೊಘಲರು ಲೂಟಿ ಮಾಡಲು ಬಂದವರಲ್ಲ, ಭಾರತಕ್ಕೆ ಅವರ ಕೊಡುಗೆಯೂ ಇದೆ’: ನಸೀರುದ್ದೀನ್​ ಷಾ

ಐತಿಹಾಸಿಕ ಘಟನೆಗಳನ್ನು ಹೇಳುವಾಗ ನೈಜತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆದರೆ, ಈ ಸೀರಿಸ್​ನಲ್ಲಿ ವಿಚಾರಗಳನ್ನು ತಿರುಚಲಾಗಿದೆ ಎನ್ನುವ ಆರೋಪ ವೀಕ್ಷಕರಿಂದ ಬಂದಿದೆ. ‘ಶೋ ಚೆನ್ನಾಗಿದೆ. ಆದರೆ, ಇಲ್ಲಿ ವಾಸ್ತವ ಹುಡುಕಲು ಹೋಗಬೇಡಿ. ಕಥೆ ಮತ್ತು ಕಲ್ಪನೆಯ ಮಿಶ್ರಣ ಈ ಸೀರಿಸ್. ಇದು ಭಾರತದ ಗೇಮ್ ಆಫ್ ಥ್ರೋನ್ಸ್​’ ಎಂದು ಅನೇಕರು ಹೇಳಿದ್ದಾರೆ.  ಇನ್ನೂ ಕೆಲವರು ಈ ಸೀರಿಸ್​ನ ಮೇಕಿಂಗ್ ಹಾಗೂ ಪಾತ್ರಗಳ ಆಯ್ಕೆ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Fri, 3 March 23

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ