ತಮಿಳಿನ ‘ಕೆಜಿಎಫ್’ ಕತೆ ‘ತಂಗಲಾನ್’ ಒಟಿಟಿ ಬಿಡುಗಡೆ ಯಾವಾಗ?

Tangalaan on OTT: ಚಿಯಾನ್ ವಿಕ್ರಂ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ತಂಗಲಾನ್’ ಕೆಜಿಎಫ್ ಚಿನ್ನದ ಗಣಿಯ ಕತೆ ಒಳಗೊಂಡಿದೆ ಎಂದು ಪ್ರಚಾರ ಮಾಡಲಾಗಿತ್ತು. ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ.

ತಮಿಳಿನ ‘ಕೆಜಿಎಫ್’ ಕತೆ ‘ತಂಗಲಾನ್’ ಒಟಿಟಿ ಬಿಡುಗಡೆ ಯಾವಾಗ?
Follow us
|

Updated on: Sep 10, 2024 | 12:21 PM

ಒಟಿಟಿಯಲ್ಲಿ ಕಳೆದ ವಾರದಿಂದ ಕೆಲವು ಒಳ್ಳೆಯ ಸಿನಿಮಾಗಳು ಬಿಡುಗಡೆ ಆಗಿವೆ. ಕನ್ನಡದ ಹಿಟ್ ಸಿನಿಮಾ ‘ಭೀಮ’ ಸೇರಿದಂತೆ ಬಾಲಿವುಡ್​ನ ‘ಕಿಲ್’, ಮಲಯಾಳಂನ ಸದಭಿರುಚಿಯ ಹಾಸ್ಯಪ್ರಧಾನ ಸಿನಿಮಾ ‘ಅಡಿಯೋಸ್ ಅಮಿಗೊ’ ಇನ್ನೂ ಕೆಲವು ಬಹಳ ಉತ್ತಮ ಸಿನಿಮಾಗಳು ಒಟಿಟಿಗೆ ಲಗ್ಗೆ ಇಟ್ಟಿವೆ. ಆದರೆ ಸಿನಿಮಾ ಪ್ರೇಮಿಗಳು ವಿಕ್ರಂ ನಟನೆಯ ‘ತಂಗಲಾನ್’ ಸಿನಿಮಾ ಏಕಿನ್ನೂ ಒಟಿಟಿಗೆ ಬಂದಿಲ್ಲ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ನಿರೀಕ್ಷೆಗೆ ಬ್ರೇಕ್ ಬೀಳುವ ಸಮಯ ಬಂದಿದೆ. ‘ತಂಗಲಾನ್’ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಪ್ರಕಟವಾಗಿದೆ.

ತಮಿಳಿನ ‘ಕೆಜಿಎಫ್’ ಕತೆ ಎಂದೇ ಪ್ರಚಾರ ಮಾಡಲಾಗಿದ್ದ ಕರ್ನಾಟಕದ ಕೋಲಾರ ಮತ್ತಿತರೆ ಭಾಗಗಳಲ್ಲಿ ಚಿತ್ರೀಕರಣಗೊಂಡಿರುವ ‘ತಂಗಲಾನ್’ ಸಿನಿಮಾ ಕಳೆದ ತಿಂಗಳು ಪ್ಯಾನ್ ಇಂಡಿಯಾ ಸಿನಿಮಾ ಆಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾವನ್ನು ಪಾ ರಂಜಿತ್ ನಿರ್ದೇಶನ ಮಾಡಿದ್ದರು. ಚಿಯಾನ್ ವಿಕ್ರಂ, ಪಾರ್ವತಿ ಮೆನನ್ ಸೇರಿದಂತೆ ಇನ್ನೂ ಕೆಲವು ಜನಪ್ರಿಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದರು. ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿತು. ಜೊತೆಗೆ ವಿಮರ್ಶಕರಿಂದಲೂ ಮೆಚ್ಚುಗೆ ಗಳಿಸಿತ್ತು.

ಇದನ್ನೂ ಓದಿ:ರವಿಚಂದ್ರನ್ ಹುಟ್ಟುಹಬ್ಬಕ್ಕೆ ಏನು ಉಡುಗೊರೆ ಕೊಡುತ್ತಾರೆ ಮಗ ವಿಕ್ರಂ ರವಿಚಂದ್ರನ್

ಇದೀಗ ‘ತಂಗಲಾನ್’ ಸಿನಿಮಾ ಸೆಪ್ಟೆಂಬರ್ 20ಕ್ಕೆ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಒಟಿಟಿ ದೈತ್ಯ ನೆಟ್​ಫ್ಲಿಕ್ಸ್​ನಲ್ಲಿ ‘ತಂಗಲಾನ್’ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಈ ಹಿಂದೆ ಈ ಸಿನಿಮಾವನ್ನು ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಮಾತ್ರವೇ ಬಿಡುಗಡೆ ಮಾಡಲಾಗಿತ್ತು. ಅದಾದ ಬಳಿಕ ಬೇಡಿಕೆ ಬಂದ ಕಾರಣ ಹಿಂದಿಗೂ ಡಬ್ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಾಗಿತ್ತು. ಅದಾದ ಕೆಲವೇ ವಾರಗಳ ಬಳಿಕ ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ.

ವಿಕ್ರಂ ನಟನೆಯ ‘ತಂಗಲಾನ್’ ಸಿನಿಮಾ ಕೆಜಿಎಫ್ ಕತೆ ಹೊಂದಿದೆ. ಕೆಜಿಎಫ್​ನಲ್ಲಿ ಚಿನ್ನದ ಗಣಿಗಾರಿಕೆ ಪ್ರಾರಂಭವಾದ ಸಂಘರ್ಷದ ಕತೆಯನ್ನು ಸಿನಿಮಾ ಹೇಳುತ್ತಿದೆ. ಚಿನ್ನದ ಗಣಿಗಾರಿಕೆ ಆರಂಭಕ್ಕೂ ಮುನ್ನ ಸ್ಥಳೀಯರ ಜೀವನ ಇದ್ದ ರೀತಿ, ಗಣಿಗಾರಿಕೆ ಉದ್ದೇಶದಿಂದ ಬಂದ ಬ್ರಿಟೀಷರ ಎದುರು ಅವರ ಹೋರಾಟ ಇನ್ನಿತರೆ ವಿಷಯಗಳನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾವನ್ನು ಪಾ ರಂಜಿತ್ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು