‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

Beast Movie OTT: ದಳಪತಿ ವಿಜಯ್​ ನಟನೆಯ ‘ಬೀಸ್ಟ್​’ ಚಿತ್ರಕ್ಕೆ ಥಿಯೇಟರ್​ನಲ್ಲಿ ನಿರೀಕ್ಷಿತ ಮಟ್ಟದ ರೆಸ್ಪಾನ್ಸ್​ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಮಾಪಕರು ಒಟಿಟಿ ಕಡೆಗೆ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?
ಯಶ್-ವಿಜಯ್​
Follow us
| Updated By: ಮದನ್​ ಕುಮಾರ್​

Updated on: Apr 17, 2022 | 8:25 AM

ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್ 2’ (KGF: Chapter 2) ಸಿನಿಮಾದ ಎದುರಿನಲ್ಲಿ ಬಿಡುಗಡೆ ಆಗುವ ಯಾವುದೇ ಚಿತ್ರ ಕೂಡ ಕಷ್ಟ ಅನುಭವಿಸಬೇಕಾಗುತ್ತದೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇತ್ತು. ಆ ಎಚ್ಚರಿಕೆಯನ್ನು ‘ಬೀಸ್ಟ್​’ ಸಿನಿಮಾ (Beast Movie) ಗಂಭೀರವಾಗಿ ಪರಿಗಣಿಸಲಿಲ್ಲ. ‘ಕೆಜಿಎಫ್​ 2’ ರಿಲೀಸ್​ ಆಗುವುದಕ್ಕಿಂತ ಒಂದು ದಿನ ಮುಂಚೆ ಅಂದರೆ, ಏ.13ರಂದು ದಳಪತಿ ವಿಜಯ್​ (Thalapathy Vijay) ಅಭಿನಯದ ‘ಬೀಸ್ಟ್​’ ಸಿನಿಮಾ ತೆರೆಕಂಡಿತು. ನಿರೀಕ್ಷೆಯಂತೆಯೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಪೈಪೋಟಿ ನೀಡುವಲ್ಲಿ ಈ ಸಿನಿಮಾ ಸೋತಿದೆ. ಇದು ತಮಿಳಿನ ಸಿನಿಮಾ ಆಗಿದ್ದರೂ ಕೂಡ ತಮಿಳಿನಾಡಿನಲ್ಲೇ ‘ಕೆಜಿಎಫ್​ 2’ ಎದುರು ನಿಲ್ಲಲ್ಲು ಇದಕ್ಕೆ ಸಾಧ್ಯವಾಗಿಲ್ಲ. ಪರಿಣಾಮವಾಗಿ ಈಗ ಒಟಿಟಿಯಲ್ಲಿ ಪ್ರಸಾರ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಚಿತ್ರಮಂದಿರದಲ್ಲಿ ಯಶಸ್ವಿ ಆಗದ ಈ ಚಿತ್ರ ಕಡೇ ಪಕ್ಷ ಒಟಿಟಿ ಪ್ಲಾಟ್​ಫಾರ್ಮ್​ ಮೂಲಕವಾದರೂ ಲಾಭ ಮಾಡಬಹುದಾ ಎಂಬ ಪ್ರಶ್ನೆ ಮೂಡಿದೆ. ಈ ಸಿನಿಮಾಗೆ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ದಳಪತಿ ವಿಜಯ್​ಗೆ ಜೋಡಿಯಾಗಿ ಬಹುಭಾಷಾ ನಟಿ ಪೂಜಾ ಹೆಗ್ಡೆ ನಟಿಸಿದ್ದಾರೆ.

‘ಬೀಸ್ಟ್​’ ಸಿನಿಮಾಗೆ ‘ಸನ್​ ಪಿಕ್ಚರ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಲಾಭ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ದೇಶಾದ್ಯಂತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾವನ್ನೇ ಪ್ರೇಕ್ಷಕರು ಮುಗಿಬಿದ್ದು ನೋಡುತ್ತಿರುವುದರಿಂದ ‘ಬೀಸ್ಟ್​’ಗೆ ಹಿನ್ನಡೆ ಆಗಿದೆ. ಹಲವು ಭಾಷೆಗಳಲ್ಲಿ ರಿಲೀಸ್​ ಆಗಿದ್ದರೂ ಕೂಡ ಏನೂ ಪ್ರಯೋಜನ ಆಗಿಲ್ಲ. ಸ್ವತಃ ತಮಿಳು ಪ್ರೇಕ್ಷಕರೇ ‘ಬೀಸ್ಟ್​ ಚಿತ್ರಕ್ಕಿಂತಲೂ ಕೆಜಿಎಫ್​ 2 ಸಿನಿಮಾ ಚೆನ್ನಾಗಿದೆ’ ಎಂದು ವಿಮರ್ಶೆ ನೀಡುತ್ತಿದ್ದಾರೆ. ಹಾಗಾಗಿ ಚಿತ್ರಮಂದಿರದಲ್ಲಿ ಇನ್ನೂ ಹೆಚ್ಚು ದಿನಗಳ ಕಾಲ ಈ ಸಿನಿಮಾ ಪ್ರದರ್ಶನ ಕಾಣಲು ಸಾಧ್ಯವಿಲ್ಲ ಎಂಬುದು ಸ್ಪಷ್ಟ.

ಥಿಯೇಟರ್​ನಲ್ಲಿ ಚೆನ್ನಾಗಿ ಲಾಭ ಮಾಡಲು ಸಾಧ್ಯವಾಗದ ಯಾವುದೇ ಸಿನಿಮಾ ಕೂಡ ಬೇಗನೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬಂದು ಬಿಡುತ್ತವೆ. ‘ಬೀಸ್ಟ್​’ ಕೂಡ ಅದೇ ರೀತಿ ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಸನ್​ ನೆಕ್ಸ್ಟ್​ ಮತ್ತು ನೆಟ್​ಫ್ಲಿಕ್ಸ್​ ಮೂಲಕ ಈ ಸಿನಿಮಾ ಪ್ರಸಾರ ಆಗಲಿದೆ. ನಾಲ್ಕು ವಾರಗಳ ಬಳಿಕ ಒಟಿಟಿಯಲ್ಲಿ ‘ಬೀಸ್ಟ್​’ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಕೆಲವೆಡೆ ವರದಿ ಆಗಿದೆ. ಆದರೆ ನಿರ್ಮಾಪಕರು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದು ಇನ್ನೂ ಬಾಕಿ ಇದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಎದುರು ‘ಬೀಸ್ಟ್​’ ಚಿತ್ರ ಸೋಲಲು ಅನೇಕ ಕಾರಣಗಳಿವೆ. ಹಿಂದಿಗೆ ಡಬ್​ ಆಗಿ ಈ ಎರಡೂ ಸಿನಿಮಾಗಳು ಬಿಡುಗಡೆ ಆಗಿವೆ. ಆದರೆ ಉತ್ತರ ಭಾರತದಲ್ಲಿ ‘ಕೆಜಿಎಫ್​ 2’ ತಂಡ ಪ್ರಚಾರ ಮಾಡಿದ ರೀತಿಯಲ್ಲಿ ‘ಬೀಸ್ಟ್​’ ಚಿತ್ರತಂಡ ಪ್ರಮೋಷನ್​ ಮಾಡಲಿಲ್ಲ. ಹೀರೋ ದಳಪತಿ ವಿಜಯ್​ ಅವರು ಕೇವಲ ಒಂದು ಮಾಧ್ಯಮಕ್ಕೆ ಹೊರತುಪಡಿಸಿ ಬೇರೆ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ. ಸಿನಿಮಾದ ಕಥೆ ಕೂಡ ಸವಕಲು ಆಗಿದೆ. ಅನೇಕ ದೃಶ್ಯಗಳಲ್ಲಿ ಲಾಜಿಕ್​ ಇಲ್ಲ. ದ್ವಿತೀಯಾರ್ಧ ತುಂಬ ಸ್ಲೋ ಆಗಿದೆ. ಖಡಕ್​ ವಿಲನ್​ಗಳು ಇಲ್ಲ ಎಂಬ ನೆಗೆಟಿವ್​ ವಿಮರ್ಶೆ ಸಿಕ್ಕಿದೆ. ಇಂಥ ಹತ್ತು ಹಲವು ಕಾರಣಗಳಿಂದಾಗಿ ‘ಬೀಸ್ಟ್’ ಸಿನಿಮಾ ನೆಲಕಚ್ಚಿದೆ. ಈ ನಡುವೆ ದಳಪತಿ ವಿಜಯ್​ ಪುತ್ರ ಸಂಜಯ್​ ಕೂಡ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಆ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ:

ಬೆಂಗಳೂರಲ್ಲಿ ‘ಬೀಸ್ಟ್​’ ನೋಡಿ ಜನ ಏನಂದ್ರು? ಫ್ಯಾನ್ಸ್​ ಸೂಪರ್​ ಅಂದ್ರು, ಕೆಲವರು ಮುಖ ಹಿಂಡಿದ್ರು

‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು