AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್ ಆದ ಒಂದೇ ತಿಂಗಳಿಗೆ ಒಟಿಟಿಗೆ ಬಂದ ದಳಪತಿ ವಿಜಯ್ ನಟನೆಯ ‘GOAT’ ಸಿನಿಮಾ

ಭಾರತದಲ್ಲಿ ಸಿನಿಮಾ ಒಂದಕ್ಕೆ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಸಹ ಒಬ್ಬರು. ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಾ ಬಂದಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘GOAT’ ಚಿತ್ರ ರಿಲೀಸ್ ಆಗಿತ್ತು. ಈ ಚಿತ್ರ ಈಗ ಒಟಿಟಿಗೆ ಕಾಲಿಡುತ್ತಿದೆ.

ರಿಲೀಸ್ ಆದ ಒಂದೇ ತಿಂಗಳಿಗೆ ಒಟಿಟಿಗೆ ಬಂದ ದಳಪತಿ ವಿಜಯ್ ನಟನೆಯ ‘GOAT’ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Oct 01, 2024 | 2:28 PM

Share

ದಳಪತಿ ವಿಜಯ್ ನಟನೆಯ ‘GOAT’ ಸಿನಿಮಾ ಸೆಪ್ಟೆಂಬರ್ 5ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಆದರೆ, ಸಿನಿಮಾ ಹೈಪ್ ಸೃಷ್ಟಿ ಮಾಡುವಲ್ಲಿ ವಿಫಲವಾಯಿತು. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿಲ್ಲ ಅನ್ನೋದಕ್ಕೆ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವೇ ಸಾಕ್ಷಿ. ಈ ಚಿತ್ರ ಈಗ ಒಟಿಟಿಗೆ ಕಾಲಿಡೋಕೆ ರೆಡಿ ಆಗಿದೆ. ಅಕ್ಟೋಬರ್ 3ರಂದು ಸಿನಿಮಾ ನೆಟ್​ಫ್ಲಿಕ್ಸ್ ಮೂಲಕ ಬಿಡುಗಡೆ ಕಾಣುತ್ತಿದೆ. ಈ ಬಗ್ಗೆ ನೆಟ್​ಫ್ಲಿಕ್ಸ್ ಕಡೆಯಿಂದಲೇ ಮಾಹಿತಿ ಸಿಕ್ಕಿದೆ.

‘ಸಿಂಹ G.O.A.T ಆಗೋದನ್ನು ಯಾವಾಗಲೂ ನೋಡಿದ್ದೀರಾ? ದಳಪತಿ ವಿಜಯ್ G.O.A.T (ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಅಕ್ಟೋಬರ್ 3ರಂದು ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗುತ್ತಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಲಭ್ಯ’ ಎಂದು ಬರೆಯಲಾಗಿದೆ.

ವೆಂಕಟ್​ ಪ್ರಭು ಅವರು ‘ಗೋಟ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ವಿಮರ್ಶಕರಿಂದ ಒಳ್ಳೆಯ ರೀತಿಯಲ್ಲಿ ಪ್ರಕ್ರಿಯೆ ಬಂದಿಲ್ಲ. ಇದು ದಳಪತಿ ವಿಜಯ್ ಅವರ 68ನೇ ಸಿನಿಮಾ ಆಗಿದೆ. ಈ ಚಿತ್ರದಲ್ಲಿ ಪ್ರಶಾಂತ್, ಪ್ರಭುದೇವ, ಅಜ್ಮಲ್ ಅಮೀರ್, ಮೋಹನ್ ಮೊದಲಾದವರು ಪ್ರಮುಖ ಪಾತ್ರ ಮಾಡಿದ್ದಾರೆ. ಎಜಿಎಸ್​ ಎಂಟರ್​ಟೇನ್​ಮೆಂಟ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗಿದೆ.

ಇದನ್ನೂ ಓದಿ: ‘2026ಕ್ಕೆ ಸಿಎಂ’: ದಳಪತಿ ವಿಜಯ್ ಕಾರ್ ನಂಬರ್ ನೋಡಿದ್ರಾ?

ಸದ್ಯ ಎಲ್ಲರೂ ದಳಪತಿ ವಿಜಯ್ ಅವರ 69ನೇ ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರವನ್ನು ‘ಕೆವಿಎನ್​ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾದ ಟೈಟಲ್ ಇನ್ನಷ್ಟೇ ರಿವೀಲ್ ಆಗಬೇಕಿದೆ. ಸದ್ಯ ಮಂಜು ವಾರಿಯರ್ ಅವರು ಸಿನಿಮಾದ ತಂಡ ಸೇರಿದ್ದಾರೆ. ಅವರು ನಿರ್ದೇಶಕ ಎಚ್​. ವಿನೋದ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ತುನಿವು’ ರೀತಿಯ ಸಿನಿಮಾನ ಅವರು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್