AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆದ ಶ್ರೀಕಾಂತ್ ತಿವಾರಿ; ಜೈದೀಪ್ ವಿಲನ್

ಟ್ರೇಲರ್​ನಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡಲಾಗಿದೆ. ಶ್ರೀಕಾಂತ್ ತಿವಾರಿ ಈಗ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೂಡ ಹೌದು. ಈ ರೀತಿಯ ಪರಿಸ್ಥಿತಿ ಬರಲು ಕಾರಣ ಏನು ಎಂಬುದಕ್ಕೆ ವೆಬ್ ಸೀರಿಸ್​ನಲ್ಲೇ ಉತ್ತರ ಕಂಡುಕೊಳ್ಳಬೇಕಿದೆ. ಇಡೀ ಸರಣಿಯ ಕಥೆ ಈಶಾನ್ಯ ಭಾರತದಲ್ಲಿ ಸಾಗುತ್ತದೆ. ಸಾಕಷ್ಟು ಆ್ಯಕ್ಷನ್​ಗಳು ಕೂಡ ಇವೆ.

ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆದ ಶ್ರೀಕಾಂತ್ ತಿವಾರಿ; ಜೈದೀಪ್ ವಿಲನ್
ಫ್ಯಾಮಿಲಿ ಮ್ಯಾನ್ 3
ರಾಜೇಶ್ ದುಗ್ಗುಮನೆ
|

Updated on:Nov 07, 2025 | 2:50 PM

Share

ಅತ್ಯಂತ ಯಶಸ್ವಿ ಸೀರಿಸ್​ಗಳಲ್ಲಿ ಮನೋಜ್​ ಬಾಜ್​ಪಾಯಿ ನಟನೆಯ ‘ದಿ ಫ್ಯಾಮಿಲಿ ಮ್ಯಾನ್’ ಕೂಡ ಒಂದು. ಈಗಾಗಲೇ ಎರಡು ಸರಣಿಗಳು ಇದರಲ್ಲಿ ಬಂದಿವೆ. ಈಗ ಮೂರನೇ ಸರಣಿ ಬರೋಕೆ ರೆಡಿ ಆಗಿದೆ. ನವೆಂಬರ್ 21ರಂದು ‘ಫ್ಯಾಮಿಲಿ ಮ್ಯಾನ್ 3’ ಬರಲಿದೆ. ಅದಕ್ಕೂ ಮೊದಲು ವೆಬ್ ಸೀರಿಸ್​ನ ಟ್ರೇಲರ್ ರಿಲೀಸ್ ಆಗಿದ್ದು, ಗಮನ ಸೆಳೆಯುವ ರೀತಿಯಲ್ಲಿ ಇದೆ. ಜೈದೀಪ್ ವಿಲನ್ ಪಾತ್ರ ಮಾಡುತ್ತಿದ್ದಾರೆ.

ಶ್ರೀಕಾಂತ್ ತಿವಾರಿ (ಮನೋಜ್​) ತಾನು ಮಾಡುತ್ತಿರುವ ಕೆಲಸ ಏನು ಎಂಬುದನ್ನು ಮನೆಯವರಿಂದ ಮುಚ್ಚಿಟ್ಟಿದ್ದ. ಈಗ ಅನಿವಾರ್ಯವಾಗಿ ಅದನ್ನು ಹೇಳಲೇಬೇಕಾಗಿದೆ. ‘ನಾನೋರ್ವ ಏಜೆಂಟ್’ ಎಂದು ಹೇಳಿದಾಗ ‘ಟ್ರಾವೆಲ್ ಏಜೆಂಟ್ ಅಲ್ವ’ ಎಂಬ ಪ್ರಶ್ನೆ ಮಗನಿಂದ ಬರುತ್ತದೆ. ಇದನ್ನು ಕೇಳಿ ನಗಬೇಕೋ ಅಥವಾ ಅಳಬೇಕೋ ಎಂಬುದು ಶ್ರೀಕಾಂತ್​ಗೆ ಗೊತ್ತಾಗೋದಿಲ್ಲ.

ಟ್ರೇಲರ್​ನಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡಲಾಗಿದೆ. ಶ್ರೀಕಾಂತ್ ತಿವಾರಿ ಈಗ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೂಡ ಹೌದು. ಈ ರೀತಿಯ ಪರಿಸ್ಥಿತಿ ಬರಲು ಕಾರಣ ಏನು ಎಂಬುದಕ್ಕೆ ವೆಬ್ ಸೀರಿಸ್​ನಲ್ಲೇ ಉತ್ತರ ಕಂಡುಕೊಳ್ಳಬೇಕಿದೆ. ಇಡೀ ಸರಣಿಯ ಕಥೆ ಈಶಾನ್ಯ ಭಾರತದಲ್ಲಿ ಸಾಗುತ್ತದೆ. ಸಾಕಷ್ಟು ಆ್ಯಕ್ಷನ್​ಗಳು ಕೂಡ ಇವೆ.

‘ಪಾತಾಳ್ ಲೋಕ್’ ರೀತಿಯ ವೆಬ್ ಸೀರಿಸ್​ಗಳಲ್ಲಿ ನಟಿಸಿದ್ದ ಜೈದೀಪ್ ಅಹ್ಲಾವತ್ ಅವರು ‘ದಿ ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಉದ್ದನೆಯ ಕೂದಲು ಬಿಟ್ಟು ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಪ್ರಿಯಾಮಣಿ, ಶರೀಬ್ ಹಷ್ಮಿ ಸೇರಿದಂತೆ ಅನೇಕ ಕಲಾವಿದರು ಈ ಸರಣಿಯಲ್ಲೂ ಮುಂದುವರಿದಿದ್ದಾರೆ. ಈ ಸರಣಿಗೆ ರಾಜ್ ಹಾಗೂ ಡಿಕೆ ನಿರ್ದೇಶನ ಇದೆ.

ಇದನ್ನೂ ಓದಿ: ಮತ್ತೆ ಬರ್ತಿದ್ದಾನೆ ಶ್ರೀಕಾಂತ್ ತಿವಾರಿ; ‘ಫ್ಯಾಮಿಲಿ ಮ್ಯಾನ್ 3’ ರಿಲೀಸ್ ಡೇಟ್ ರಿವೀಲ್

‘ಫ್ಯಾಮಿಲಿ ಮ್ಯಾನ್’ ಸರಣಿಯಲ್ಲಿ ಶ್ರೀಕಾಂತ್ ತಿವಾರಿ ಪಡೋ ಕಷ್ಟಗಳು ಒಂದೆರಡಲ್ಲ. ಅದು ಈ ಸರಣಿಯಲ್ಲೂ ಮುಂದುವರಿದಿದೆ. ಶ್ರೀಕಾಂತ್ ಹಾಗೂ ಜೆಕೆ ನಡುವಿನ ಕೆಮಿಸ್ಟ್ರಿ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Fri, 7 November 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ