AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆದ ಶ್ರೀಕಾಂತ್ ತಿವಾರಿ; ಜೈದೀಪ್ ವಿಲನ್

ಟ್ರೇಲರ್​ನಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡಲಾಗಿದೆ. ಶ್ರೀಕಾಂತ್ ತಿವಾರಿ ಈಗ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೂಡ ಹೌದು. ಈ ರೀತಿಯ ಪರಿಸ್ಥಿತಿ ಬರಲು ಕಾರಣ ಏನು ಎಂಬುದಕ್ಕೆ ವೆಬ್ ಸೀರಿಸ್​ನಲ್ಲೇ ಉತ್ತರ ಕಂಡುಕೊಳ್ಳಬೇಕಿದೆ. ಇಡೀ ಸರಣಿಯ ಕಥೆ ಈಶಾನ್ಯ ಭಾರತದಲ್ಲಿ ಸಾಗುತ್ತದೆ. ಸಾಕಷ್ಟು ಆ್ಯಕ್ಷನ್​ಗಳು ಕೂಡ ಇವೆ.

ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆದ ಶ್ರೀಕಾಂತ್ ತಿವಾರಿ; ಜೈದೀಪ್ ವಿಲನ್
ಫ್ಯಾಮಿಲಿ ಮ್ಯಾನ್ 3
ರಾಜೇಶ್ ದುಗ್ಗುಮನೆ
|

Updated on:Nov 07, 2025 | 2:50 PM

Share

ಅತ್ಯಂತ ಯಶಸ್ವಿ ಸೀರಿಸ್​ಗಳಲ್ಲಿ ಮನೋಜ್​ ಬಾಜ್​ಪಾಯಿ ನಟನೆಯ ‘ದಿ ಫ್ಯಾಮಿಲಿ ಮ್ಯಾನ್’ ಕೂಡ ಒಂದು. ಈಗಾಗಲೇ ಎರಡು ಸರಣಿಗಳು ಇದರಲ್ಲಿ ಬಂದಿವೆ. ಈಗ ಮೂರನೇ ಸರಣಿ ಬರೋಕೆ ರೆಡಿ ಆಗಿದೆ. ನವೆಂಬರ್ 21ರಂದು ‘ಫ್ಯಾಮಿಲಿ ಮ್ಯಾನ್ 3’ ಬರಲಿದೆ. ಅದಕ್ಕೂ ಮೊದಲು ವೆಬ್ ಸೀರಿಸ್​ನ ಟ್ರೇಲರ್ ರಿಲೀಸ್ ಆಗಿದ್ದು, ಗಮನ ಸೆಳೆಯುವ ರೀತಿಯಲ್ಲಿ ಇದೆ. ಜೈದೀಪ್ ವಿಲನ್ ಪಾತ್ರ ಮಾಡುತ್ತಿದ್ದಾರೆ.

ಶ್ರೀಕಾಂತ್ ತಿವಾರಿ (ಮನೋಜ್​) ತಾನು ಮಾಡುತ್ತಿರುವ ಕೆಲಸ ಏನು ಎಂಬುದನ್ನು ಮನೆಯವರಿಂದ ಮುಚ್ಚಿಟ್ಟಿದ್ದ. ಈಗ ಅನಿವಾರ್ಯವಾಗಿ ಅದನ್ನು ಹೇಳಲೇಬೇಕಾಗಿದೆ. ‘ನಾನೋರ್ವ ಏಜೆಂಟ್’ ಎಂದು ಹೇಳಿದಾಗ ‘ಟ್ರಾವೆಲ್ ಏಜೆಂಟ್ ಅಲ್ವ’ ಎಂಬ ಪ್ರಶ್ನೆ ಮಗನಿಂದ ಬರುತ್ತದೆ. ಇದನ್ನು ಕೇಳಿ ನಗಬೇಕೋ ಅಥವಾ ಅಳಬೇಕೋ ಎಂಬುದು ಶ್ರೀಕಾಂತ್​ಗೆ ಗೊತ್ತಾಗೋದಿಲ್ಲ.

ಟ್ರೇಲರ್​ನಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡಲಾಗಿದೆ. ಶ್ರೀಕಾಂತ್ ತಿವಾರಿ ಈಗ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೂಡ ಹೌದು. ಈ ರೀತಿಯ ಪರಿಸ್ಥಿತಿ ಬರಲು ಕಾರಣ ಏನು ಎಂಬುದಕ್ಕೆ ವೆಬ್ ಸೀರಿಸ್​ನಲ್ಲೇ ಉತ್ತರ ಕಂಡುಕೊಳ್ಳಬೇಕಿದೆ. ಇಡೀ ಸರಣಿಯ ಕಥೆ ಈಶಾನ್ಯ ಭಾರತದಲ್ಲಿ ಸಾಗುತ್ತದೆ. ಸಾಕಷ್ಟು ಆ್ಯಕ್ಷನ್​ಗಳು ಕೂಡ ಇವೆ.

‘ಪಾತಾಳ್ ಲೋಕ್’ ರೀತಿಯ ವೆಬ್ ಸೀರಿಸ್​ಗಳಲ್ಲಿ ನಟಿಸಿದ್ದ ಜೈದೀಪ್ ಅಹ್ಲಾವತ್ ಅವರು ‘ದಿ ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಉದ್ದನೆಯ ಕೂದಲು ಬಿಟ್ಟು ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಪ್ರಿಯಾಮಣಿ, ಶರೀಬ್ ಹಷ್ಮಿ ಸೇರಿದಂತೆ ಅನೇಕ ಕಲಾವಿದರು ಈ ಸರಣಿಯಲ್ಲೂ ಮುಂದುವರಿದಿದ್ದಾರೆ. ಈ ಸರಣಿಗೆ ರಾಜ್ ಹಾಗೂ ಡಿಕೆ ನಿರ್ದೇಶನ ಇದೆ.

ಇದನ್ನೂ ಓದಿ: ಮತ್ತೆ ಬರ್ತಿದ್ದಾನೆ ಶ್ರೀಕಾಂತ್ ತಿವಾರಿ; ‘ಫ್ಯಾಮಿಲಿ ಮ್ಯಾನ್ 3’ ರಿಲೀಸ್ ಡೇಟ್ ರಿವೀಲ್

‘ಫ್ಯಾಮಿಲಿ ಮ್ಯಾನ್’ ಸರಣಿಯಲ್ಲಿ ಶ್ರೀಕಾಂತ್ ತಿವಾರಿ ಪಡೋ ಕಷ್ಟಗಳು ಒಂದೆರಡಲ್ಲ. ಅದು ಈ ಸರಣಿಯಲ್ಲೂ ಮುಂದುವರಿದಿದೆ. ಶ್ರೀಕಾಂತ್ ಹಾಗೂ ಜೆಕೆ ನಡುವಿನ ಕೆಮಿಸ್ಟ್ರಿ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Fri, 7 November 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್