AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ

‘ದಿ ಕಾಶ್ಮೀರ್ ಫೈಲ್ಸ್’ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಂದಿ ತಿಳಿಯದೇ ಇರುವ ಪ್ರೇಕ್ಷಕರಿಗೆ ಈ ಸಿನಿಮಾ ಪೂರ್ತಿಯಾಗಿ ಅರ್ಥವಾಗಿರಲಿಲ್ಲ. ಈಗ ಒಟಿಟಿಯಲ್ಲಿ ಕನ್ನಡ ಸೇರಿ ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯ ಆಗುತ್ತಿದೆ.

ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ
ದಿ ಕಾಶ್ಮೀರ್ ಫೈಲ್ಸ್
TV9 Web
| Updated By: ಮದನ್​ ಕುಮಾರ್​|

Updated on:Apr 29, 2022 | 3:07 PM

Share

‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಬಾಲಿವುಡ್​ನಲ್ಲಿ ಸಂಚಲನ ಸೃಷ್ಟಿಸಿದ ಸಿನಿಮಾ. ಕಾಶ್ಮೀರಿ ಪಂಡಿತರ (Kashmiri Pandits) ಹತ್ಯೆ ಮತ್ತು ವಲಸೆ ಆಧರಿಸಿ ಸಿದ್ಧಗೊಂಡ ಈ ಚಿತ್ರ ಭಾರತದ ಭಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೊದಲ ದಿನ ನಾಲ್ಕು ಕೋಟಿ ರೂಪಾಯಿಗೂ ಕಡಿಮೆ ಕಲೆಕ್ಷನ್ ಮಾಡಿದ ಸಿನಿಮಾ ನಂತರ 250 ಕೋಟಿ ರೂಪಾಯಿ ಕ್ಲಬ್ ಸೇರುತ್ತದೆ ಎಂದರೆ ಅದು ನಿಜಕ್ಕೂ ಸಾಧನೆಯೇ ಸರಿ. ಈಗ ಈ ಸಿನಿಮಾ ಒಟಿಟಿಗೆ ಬರೋಕೆ ರೆಡಿ ಆಗಿದೆ. ಜೀ5 ಆ್ಯಪ್​ ಮೂಲಕ ಸಿನಿಮಾ ಪ್ರಸಾರ ಆಗುತ್ತಿದೆ.

ವಿವೇಕ್ ಅಗ್ನಿಹೋತ್ರಿ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮಾರ್ಚ್​ 11ರಂದು ತೆರೆಗೆ ಬಂದಿತ್ತು. ಈ ಚಿತ್ರವನ್ನು ನೋಡಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಅನೇಕ ರಾಜಕೀಯ ನಾಯಕರು ಈ ಸಿನಿಮಾಗೆ ಬೆಂಬಲ ನೀಡಿದ್ದರು. ಇದರಿಂದ ಚಿತ್ರದ ಮೈಲೇಜ್ ಹೆಚ್ಚಿತ್ತು. ಸೆಲೆಬ್ರಿಟಿ ವಲಯದಿಂದಲೂ ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಈ ಮಧ್ಯೆ, ಕೆಲವರು ಈ ಸಿನಿಮಾ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಚಿತ್ರ ಗೆದ್ದು ಬೀಗಿದೆ. ಈಗ ಸಿನಿಮಾ ಮೇ 13ರಂದು ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ.

‘ದಿ ಕಾಶ್ಮೀರ್ ಫೈಲ್ಸ್’ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಂದಿ ತಿಳಿಯದೇ ಇರುವ ಪ್ರೇಕ್ಷಕರಿಗೆ ಈ ಸಿನಿಮಾ ಪೂರ್ತಿಯಾಗಿ ಅರ್ಥವಾಗಿರಲಿಲ್ಲ. ಈಗ ಒಟಿಟಿಯಲ್ಲಿ ಈ ಸಿನಿಮಾ ನಾಲ್ಕು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಇದು ಹಲವರಿಗೆ ಖುಷಿ ನೀಡಿದೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾದ ಬಜೆಟ್ ಕೇವಲ 15 ಕೋಟಿ ರೂಪಾಯಿ. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. 1991ರ ಸಮಯದಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಸಿನಿಮಾದಲ್ಲಿ ತೋರಿಸುವ ಪ್ರಯತ್ನ ನಡೆದಿದೆ. ಈ ಚಿತ್ರವನ್ನು ಕೆಲವರು ವಿರೋಧಿಸಿದ್ದಾರೆ. ಈ ಚಿತ್ರದಿಂದ ಶಾಂತಿ ಕದಡುವ ಪ್ರಯತ್ನ ಆಗಿದೆ ಎಂದು ಆರೋಪಿಸಿದವರು ಇದ್ದಾರೆ.

ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಯಶಸ್ಸಿನ ಬೆನ್ನಲ್ಲೇ ಇತಿಹಾಸದಲ್ಲಿ ದಾಖಲಾಗದ ಮತ್ತೆರಡು ಕತೆಗಳನ್ನು ಹೇಳಲು ಮುಂದಾದ ವಿವೇಕ್ ಅಗ್ನಿಹೋತ್ರಿ

‘ದಿ ಕಾಶ್ಮೀರ್ ಫೈಲ್ಸ್’ ಯಶಸ್ಸಿನ ಬೆನ್ನಲ್ಲೇ ಇತಿಹಾಸದಲ್ಲಿ ದಾಖಲಾಗದ ಮತ್ತೆರಡು ಕತೆಗಳನ್ನು ಹೇಳಲು ಮುಂದಾದ ವಿವೇಕ್ ಅಗ್ನಿಹೋತ್ರಿ

Published On - 7:54 pm, Mon, 25 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!