AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ತಯಾರಾದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಒಟಿಟಿ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ಜೀ5 ಮೂಲಕ ಈ ಸಿನಿಮಾ ಪ್ರಸಾರ ಆಗಲಿದೆ.

ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕಲಾವಿದರು
Follow us
TV9 Web
| Updated By: ಮದನ್​ ಕುಮಾರ್​

Updated on: Apr 19, 2022 | 9:50 AM

ಈ ವರ್ಷ ಭಾರತೀಯ ಚಿತ್ರರಂಗದಲ್ಲಿ ಸೆನ್ಸೇಷನ್​ ಕ್ರಿಯೇಟ್​ ಮಾಡಿದ ಸಿನಿಮಾಗಳಲ್ಲಿ ಒಂದಾದ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಈಗ ಒಟಿಟಿಗೆ ಬರಲು ಸಜ್ಜಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡುವ ಕಾಲ ಹತ್ತಿರ ಆಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ತಯಾರಾದ ಈ ಚಿತ್ರಕ್ಕೆ ವಿವೇಕ್​ ಅಗ್ನಿಹೋತ್ರಿ (Vivek Agnihotri) ನಿರ್ದೇಶನ ಮಾಡಿದ್ದಾರೆ. ಕೊವಿಡ್​ ಬಳಿಕ ಮಂಕಾಗಿದ್ದ ಚಿತ್ರರಂಗಕ್ಕೆ ಈ ಸಿನಿಮಾದಿಂದ ದೊಡ್ಡ ಬೂಸ್ಟ್​ ಸಿಕ್ಕಿತು. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಸಂಪಾದನೆ ಮಾಡಿದ ಈ ಚಿತ್ರ ಅಂತಿಮವಾಗಿ 251 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವಲ್ಲಿ ಯಶಸ್ವಿ ಆಯಿತು. ಶೀಘ್ರದಲ್ಲೇ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಜೀ5 (Zee5) ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ. ವಿಶೇಷ ಏನೆಂದರೆ ಈ ಬಾರಿ ಬೇರೆ ಬೇರೆ ಭಾಷೆಗಳಿಗೆ ಡಬ್​ ಮಾಡಿ ಒಟಿಟಿಯಲ್ಲಿ ರಿಲೀಸ್​ ಮಾಡಲಾಗುತ್ತಿದೆ. ಮೂಲ ಹಿಂದಿಯಲ್ಲಿ ತಯಾರಾದ ಈ ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಗಳಿಗೆ ಡಬ್​ ಆಗಿದೆ.

ಒಂದು ಕಮರ್ಷಿಯಲ್​ ಸಿನಿಮಾದ ರೀತಿಯಲ್ಲೇ ಈ ಚಿತ್ರ ಗೆಲುವು ಕಂಡಿದೆ. ಈ ಸಿನಿಮಾದಲ್ಲಿ ಯಾವುದೇ ಸ್ಟಾರ್​ ಹೀರೋಗಳು ಅಭಿನಯಿಸಿಲ್ಲ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ವಿಥುನ್​ ಚಕ್ರವರ್ತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ತೆರೆಕಂಡಾಗ ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ರಾಜಕಾರಣಿಗಳು ಹೊಗಳಿದರು. ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಯಿತು. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಯಿತು.

ಮಚ್ಚುಗೆ ಪಡೆಯುವುದರ ಜೊತೆಗೆ ಹಲವರಿಂದ ಈ ಸಿನಿಮಾದ ಬಗ್ಗೆ ಟೀಕೆ ಕೂಡ ವ್ಯಕ್ತವಾಯಿತು. ಇದರಲ್ಲಿ ಹಿಂಸೆಯ ವೈಭವೀಕರಣ ಆಗಿದೆ, ಕೋಮು ಭಾವನೆ ಮೂಡಿಸುತ್ತೆ ಎಂಬಿತ್ಯಾದಿ ಅಭಿಪ್ರಾಯಗಳು ಕೆಲವರಿಂದ ವ್ಯಕ್ತವಾದವು. ಈ ಎಲ್ಲ ಕಾರಣಗಳಿಂದಾಗಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅನೇಕರಿಗೆ ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ಸಾಧ್ಯವಾಗಿಲ್ಲ. ಅವರೆಲ್ಲರೂ ಜೀ5 ಒಟಿಟಿ ಮೂಲಕ ವೀಕ್ಷಿಸಬಹುದು. ಯಾವ ದಿನಾಂಕದಲ್ಲಿ ಒಟಿಟಿ ಪ್ರೀಮಿಯರ್ ಆಗಲಿದೆ ಎಂಬ ಮಾಹಿತಿಯನ್ನು ಜೀ5 ಶೀಘ್ರದಲ್ಲೇ ಹಂಚಿಕೊಳ್ಳಲಿದೆ.

View this post on Instagram

A post shared by ZEE5 (@zee5)

ಸಿನಿಮಾ ನೋಡಿದ ಬಳಿಕ ‘ಇದು ನಮ್ಮ ಭಾಷೆಗೂ ಡಬ್​ ಆಗಬೇಕು’ ಎಂದು ಕನ್ನಡದ ಕೆಲವು ಪ್ರೇಕ್ಷಕರು ಅಪೇಕ್ಷಿಸಿದ್ದರು. ಡಬ್​ ಮಾಡಿದರೆ ಎಲ್ಲರಿಗೂ ಸುಲಭವಾಗಿ ಅರ್ಥ ಆಗುತ್ತದೆ ಹಾಗೂ ಹೆಚ್ಚು ಜನರನ್ನು ತಲುಪಬಹುದು ಎಂಬ ಕಾರಣದಿಂದ ಕನ್ನಡ ಮತ್ತು ಇತರೆ ಭಾಷೆಗಳಿಗೆ ಸಿನಿಮಾವನ್ನು ಡಬ್​ ಮಾಡಲಾಗಿದೆ. ಕನ್ನಡದಲ್ಲೇ ಈ ಚಿತ್ರವನ್ನು ನೋಡಬೇಕು ಎಂದುಕೊಂಡಿದ್ದ ಪ್ರೇಕ್ಷಕರಿಗೆ ಈ ಗುಡ್​ ನ್ಯೂಸ್​ ಸಿಕ್ಕಿದೆ.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ

‘ಉರಿ’ ಚಿತ್ರವನ್ನೂ ಬೀಟ್​ ಮಾಡಿದ ‘ದಿ ಕಾಶ್ಮೀರ್​ ಫೈಲ್ಸ್​’; ಈವರೆಗೂ ಆಗಿರುವ ಕಲೆಕ್ಷನ್​ ಎಷ್ಟು?

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ