Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ದಿ ಕೇರಳ ಸ್ಟೋರಿ’

ವಿವಾದದ ಮೂಲಕವೇ ಹೆಚ್ಚು ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಈಗ ಮತ್ತೆ ಚರ್ಚೆ ಆಗುತ್ತಿದೆ. ಕಳೆದ ವರ್ಷ ಥಿಯೇಟರ್​ನಲ್ಲಿ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿದ್ದ ಈ ಸಿನಿಮಾ ಈಗ ಒಟಿಟಿಯಲ್ಲಿ ವೀಕ್ಷಣಗೆ ಲಭ್ಯವಾಗಿದೆ. ಒಟಿಟಿಯಲ್ಲೂ ದಾಖಲೆ ಪ್ರಮಾಣದಲ್ಲಿ ವೀಕ್ಷಣೆ ಕಾಣುತ್ತಿದೆ. ಈ ಚಿತ್ರಕ್ಕೆ ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ್ದಾರೆ.

ಚಿತ್ರಮಂದಿರದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ದಿ ಕೇರಳ ಸ್ಟೋರಿ’
ಅದಾ ಶರ್ಮಾ
Follow us
ಮದನ್​ ಕುಮಾರ್​
|

Updated on: Feb 20, 2024 | 8:00 AM

ನಟಿ ಅದಾ ಶರ್ಮಾ (Adah Sharma) ಅವರು ಮುಖ್ಯ ಭೂಮಿಕೆ ನಿಭಾಯಿಸಿರುವ ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು. 2023ರ ಮೇ 5ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ರೀತಿಯೇ ಒಟಿಟಿಯಲ್ಲೂ ಈ ಸಿನಿಮಾ ಧೂಳೆಬ್ಬಿಸುತ್ತಿದೆ. ‘ಜೀ5’  (Zee5) ಒಟಿಟಿ ಮೂಲಕ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ವಿವಾದಾತ್ಮಕ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಆ ಕಾರಣದಿಂದ ಪ್ರೇಕ್ಷಕರು ಕುತೂಹಲದಿಂದ ವೀಕ್ಷಿಸಿದ್ದಾರೆ.

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಸಾಕಷ್ಟು ಕಷ್ಟ ಅನುಭವಿಸುವ ಹುಡುಗಿಯ ಪಾತ್ರದಲ್ಲಿ ಅದಾ ಶರ್ಮಾ ನಟಿಸಿದ್ದಾರೆ. ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಕೆಲವರು ಈ ಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕ ‘ದಿ ಕೇರಳ ಸ್ಟೋರಿ’ ಬಗ್ಗೆ ಮತ್ತೆ ಚರ್ಚೆ ಜೋರಾಗಿದೆ.

ಇದನ್ನೂ ಓದಿ: ಚರ್ಮದ ಸಮಸ್ಯೆಯಿಂದ ಬಳಲುತ್ತಿರುವ ‘ದಿ ಕೇರಳ ಸ್ಟೋರಿ ಖ್ಯಾತಿ’ಯ ಅದಾ ಶರ್ಮ

‘ದಿ ಕೇರಳ ಸ್ಟೋರಿ’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ್ದು ಬರೋಬ್ಬರಿ 242 ಕೋಟಿ ರೂಪಾಯಿ. ವಿದೇಶದ ಕಲೆಕ್ಷನ್ ಸೇರಿದರೆ ಅಂದಾಜು 303 ಕೋಟಿ ರೂಪಾಯಿ ಆಗಲಿದೆ. ಅದೇ ರೀತಿ ಒಟಿಟಿಯಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಮೊದಲ ವೀಕೆಂಡ್​ನಲ್ಲಿ 150 ಮಿಲಿಯನ್​ ನಿಮಿಷಗಳ ವೀಕ್ಷಣೆ ಕಂಡಿದೆ. ಇದು ದಾಖಲೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಚಿತ್ರಮಂದಿರದಲ್ಲಿ 9 ತಿಂಗಳ ಹಿಂದೆಯೇ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದ್ದರೂ ಕೂಡ ಒಟಿಟಿಗೆ ಬರಲು ತಡವಾಯಿತು. ಇದರಲ್ಲಿ ಕಾಂಟ್ರವರ್ಸಿ ಇದೆ ಎಂಬ ಕಾರಣಕ್ಕೆ ಅನೇಕ ಒಟಿಟಿ ಪ್ಲಾಟ್​ಫಾರ್ಮ್​ಗಳು ಈ ಸಿನಿಮಾವನ್ನು ಪ್ರಸಾರ ಮಾಡಲು ಹಿಂದೇಟು ಹಾಕಿದ್ದವು. ಅಂತಿಮವಾಗಿ ‘ಜೀ5’ ಮೂಲಕ ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಆಗುತ್ತಿದೆ. ಈ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಟಿ ಅದಾ ಶರ್ಮಾ ಅವರ ಬೇಡಿಕೆ ಹೆಚ್ಚಾಗಿದೆ. ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್