AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?

The Kerala Story OTT Release: ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಯಾವುದೇ ಒಟಿಟಿ ಸಂಸ್ಥೆಯಿಂದ ಬೇಡಿಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕ ಸುದೀಪ್ತೋ ಸೇನ್​ ಅವರೇ ವಿವರಿಸಿದ್ದಾರೆ.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?
ದಿ ಕೇರಳ ಸ್ಟೋರಿ
ಮದನ್​ ಕುಮಾರ್​
|

Updated on: Jun 25, 2023 | 7:46 AM

Share

ಈ ವರ್ಷ ತೆರೆಕಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಚರ್ಚೆ ಹುಟ್ಟುಹಾಕಿದ ಚಿತ್ರ ಎಂದರೆ ಅದು ‘ದಿ ಕೇರಳ ಸ್ಟೋರಿ’. ನಿರ್ದೇಶಕ ಸುದೀಪ್ತೋ ಸೇನ್ (Sudipto Sen)​ ಅವರು ಆ್ಯಕ್ಷನ್​-ಕಟ್​ ಹೇಳಿದ ಈ ಸಿನಿಮಾದಲ್ಲಿ ಒಂದಷ್ಟು ವಿವಾದಾತ್ಮಕ ಅಂಶವನ್ನು ತೋರಿಸಲಾಗಿದೆ. ನಟಿ ಅದಾ ಶರ್ಮಾ ಅವರಿಗೆ ಈ ಚಿತ್ರದಿಂದ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರು ಭಾರಿ ಲಾಭ ಮಾಡಿಕೊಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 242 ಕೋಟಿ ರೂಪಾಯಿ ಕಮಾಯಿ ಮಾಡಿ ಬೀಗಿದೆ. ಸಣ್ಣ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಈ ಪರಿ ಕಲೆಕ್ಷನ್​ ಮಾಡಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. ಈಗ ಒಂದು ಶಾಕಿಂಗ್ ನ್ಯೂಸ್​ ಕೇಳಿಬಂದಿದೆ. ಇಷ್ಟೆಲ್ಲ ಸದ್ದು ಮಾಡಿದ ಸಿನಿಮಾವನ್ನು ಕೊಂಡುಕೊಳ್ಳಲು ಯಾವುದೇ ಒಟಿಟಿ (OTT) ಸಂಸ್ಥೆ ಕೂಡ ಮುಂದೆ ಬರುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಯಾವುದೇ ಒಟಿಟಿ ಸಂಸ್ಥೆಯಿಂದ ಬೇಡಿಕೆ ಬಂದಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರಿಯರಿಗೆ ಅಚ್ಚರಿ ಆಗಿದೆ. ಈ ರೀತಿ ಆಗಿದ್ದಕ್ಕೆ ಮೂವೀ ಮಾಫಿಯಾ ಕಾರಣ ಎಂದು ಹೇಳಲಾಗುತ್ತಿದೆ. ಈ ಸಿನಿಮಾದ ಯಶಸ್ಸನ್ನು ಸಹಿಸಿಕೊಳ್ಳಲು ಅನೇಕರಿಗೆ ಸಾಧ್ಯವಾಗಿಲ್ಲ. ಅಂಥವರೆಲ್ಲ ಒಟ್ಟಾಗಿ ಒಟಿಟಿ ಸಂಸ್ಥೆಗಳಿಗೆ ಚಾಡಿ ಹೇಳಿದ್ದಾರೆ. ಹಾಗಾಗಿ ಯಾರೂ ಕೂಡ ಈ ಸಿನಿಮಾವನ್ನು ಖರೀದಿಸಲು ಸಿದ್ಧರಿಲ್ಲ. ಈ ಬಗ್ಗೆ ಚಿತ್ರತಂಡದವರು ವಿಚಾರಿಸಿದಾಗ, ‘ರಾಜಕೀಯವಾಗಿ ಕಾಂಟ್ರವರ್ಸಿ ಹೊಂದಿರುವ ಚಿತ್ರ ನಮಗೆ ಬೇಡ’ ಎಂಬ ಉತ್ತರ ಒಟಿಟಿ ಸಂಸ್ಥೆಗಳ ಕಡೆಯಿಂದ ಬಂದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Vipul Shah: ಅಕ್ಷಯ್​ ಕುಮಾರ್​ ಜತೆ ಸಿನಿಮಾ ಮಾಡೋದು ನಿಲ್ಲಿಸಿದ್ದೇಕೆ ‘ದಿ ಕೇರಳ ಸ್ಟೋರಿ’ ನಿರ್ಮಾಪಕ? ಬಯಲಾಯ್ತು ಸತ್ಯ

ಒಟಿಟಿಗಳಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಸಖತ್​ ಡಿಮ್ಯಾಂಡ್​ ಬಂದಿದೆಯಂತೆ, ಪ್ರಸಾರ ಹಕ್ಕುಗಳು ಅಷ್ಟಕ್ಕೆ ಸೇಲ್​ ಆಯ್ತಂತೆ, ಈ ದಿನಾಂಕದಿಂದ ಸ್ಟ್ರೀಮಿಂಗ್​ ಆರಂಭ ಆಗಲಿದೆಂತೆ, ಅದಂತೆ, ಇದಂತೆ ಅಂತ ಹಲವಾರು ಸುದ್ದಿಗಳು ಹರಿದಾಡಿವೆ. ಆದರೆ ಅದೆಲ್ಲವೂ ಶುದ್ಧ ಸುಳ್ಳು ಎಂದು ಸ್ವತಃ ನಿರ್ದೇಶಕ ಸುದೀಪ್ತೋ ಸೇನ್​ ಅವರೇ ‘ಬಾಲಿವುಡ್​ ಹಂಗಾಮಾ’ಗೆ ತಿಳಿಸಿದ್ದಾರೆ. ಒಟಿಟಿ ಸಂಸ್ಥೆಗಳು ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ತಿರಸ್ಕರಿಸಿದ್ದಕ್ಕೆ ಬಾಲಿವುಡ್​ನ ಕೆಲವರ ಷಡ್ಯಂತ್ರ ಕಾರಣ ಎಂದು ಸುದೀಪ್ತೋ ಸೇನ್​ ಭಾವಿಸಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್

ಕೇರಳದಲ್ಲಿ ನಡೆದಿತ್ತು ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಪ್ರಕರಣಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಡಿಬಂದಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಲು ಸಾಧ್ಯವಾಗದೇ ಇರುವವರು ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದಾರೆ. ಆದರೆ ಹಲವು ಕಾರಣಗಳಿಂದಾಗಿ ಇದರ ಒಟಿಟಿ ರಿಲೀಸ್​ ತಡವಾಗುತ್ತಿದೆ. ‘ಯಾವ ಒಟಿಟಿ ಸಂಸ್ಥೆಗಳಿಂದಲೂ ನಮಗೆ ಒಳ್ಳೆಯ ಆಫರ್​ ಬಂದಿಲ್ಲ’ ಎಂದು ಚಿತ್ರತಂಡದವರೇ ಹೇಳಿರುವುದರಿಂದ ಪ್ರೇಕ್ಷಕರಿಗೆ ನಿರಾಸೆ ಆಗಿದೆ. ಇನ್ನೂ ಕೆಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು