AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?

The Kerala Story OTT Release: ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಯಾವುದೇ ಒಟಿಟಿ ಸಂಸ್ಥೆಯಿಂದ ಬೇಡಿಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕ ಸುದೀಪ್ತೋ ಸೇನ್​ ಅವರೇ ವಿವರಿಸಿದ್ದಾರೆ.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?
ದಿ ಕೇರಳ ಸ್ಟೋರಿ
ಮದನ್​ ಕುಮಾರ್​
|

Updated on: Jun 25, 2023 | 7:46 AM

Share

ಈ ವರ್ಷ ತೆರೆಕಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಚರ್ಚೆ ಹುಟ್ಟುಹಾಕಿದ ಚಿತ್ರ ಎಂದರೆ ಅದು ‘ದಿ ಕೇರಳ ಸ್ಟೋರಿ’. ನಿರ್ದೇಶಕ ಸುದೀಪ್ತೋ ಸೇನ್ (Sudipto Sen)​ ಅವರು ಆ್ಯಕ್ಷನ್​-ಕಟ್​ ಹೇಳಿದ ಈ ಸಿನಿಮಾದಲ್ಲಿ ಒಂದಷ್ಟು ವಿವಾದಾತ್ಮಕ ಅಂಶವನ್ನು ತೋರಿಸಲಾಗಿದೆ. ನಟಿ ಅದಾ ಶರ್ಮಾ ಅವರಿಗೆ ಈ ಚಿತ್ರದಿಂದ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರು ಭಾರಿ ಲಾಭ ಮಾಡಿಕೊಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 242 ಕೋಟಿ ರೂಪಾಯಿ ಕಮಾಯಿ ಮಾಡಿ ಬೀಗಿದೆ. ಸಣ್ಣ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಈ ಪರಿ ಕಲೆಕ್ಷನ್​ ಮಾಡಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. ಈಗ ಒಂದು ಶಾಕಿಂಗ್ ನ್ಯೂಸ್​ ಕೇಳಿಬಂದಿದೆ. ಇಷ್ಟೆಲ್ಲ ಸದ್ದು ಮಾಡಿದ ಸಿನಿಮಾವನ್ನು ಕೊಂಡುಕೊಳ್ಳಲು ಯಾವುದೇ ಒಟಿಟಿ (OTT) ಸಂಸ್ಥೆ ಕೂಡ ಮುಂದೆ ಬರುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಯಾವುದೇ ಒಟಿಟಿ ಸಂಸ್ಥೆಯಿಂದ ಬೇಡಿಕೆ ಬಂದಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರಿಯರಿಗೆ ಅಚ್ಚರಿ ಆಗಿದೆ. ಈ ರೀತಿ ಆಗಿದ್ದಕ್ಕೆ ಮೂವೀ ಮಾಫಿಯಾ ಕಾರಣ ಎಂದು ಹೇಳಲಾಗುತ್ತಿದೆ. ಈ ಸಿನಿಮಾದ ಯಶಸ್ಸನ್ನು ಸಹಿಸಿಕೊಳ್ಳಲು ಅನೇಕರಿಗೆ ಸಾಧ್ಯವಾಗಿಲ್ಲ. ಅಂಥವರೆಲ್ಲ ಒಟ್ಟಾಗಿ ಒಟಿಟಿ ಸಂಸ್ಥೆಗಳಿಗೆ ಚಾಡಿ ಹೇಳಿದ್ದಾರೆ. ಹಾಗಾಗಿ ಯಾರೂ ಕೂಡ ಈ ಸಿನಿಮಾವನ್ನು ಖರೀದಿಸಲು ಸಿದ್ಧರಿಲ್ಲ. ಈ ಬಗ್ಗೆ ಚಿತ್ರತಂಡದವರು ವಿಚಾರಿಸಿದಾಗ, ‘ರಾಜಕೀಯವಾಗಿ ಕಾಂಟ್ರವರ್ಸಿ ಹೊಂದಿರುವ ಚಿತ್ರ ನಮಗೆ ಬೇಡ’ ಎಂಬ ಉತ್ತರ ಒಟಿಟಿ ಸಂಸ್ಥೆಗಳ ಕಡೆಯಿಂದ ಬಂದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Vipul Shah: ಅಕ್ಷಯ್​ ಕುಮಾರ್​ ಜತೆ ಸಿನಿಮಾ ಮಾಡೋದು ನಿಲ್ಲಿಸಿದ್ದೇಕೆ ‘ದಿ ಕೇರಳ ಸ್ಟೋರಿ’ ನಿರ್ಮಾಪಕ? ಬಯಲಾಯ್ತು ಸತ್ಯ

ಒಟಿಟಿಗಳಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಸಖತ್​ ಡಿಮ್ಯಾಂಡ್​ ಬಂದಿದೆಯಂತೆ, ಪ್ರಸಾರ ಹಕ್ಕುಗಳು ಅಷ್ಟಕ್ಕೆ ಸೇಲ್​ ಆಯ್ತಂತೆ, ಈ ದಿನಾಂಕದಿಂದ ಸ್ಟ್ರೀಮಿಂಗ್​ ಆರಂಭ ಆಗಲಿದೆಂತೆ, ಅದಂತೆ, ಇದಂತೆ ಅಂತ ಹಲವಾರು ಸುದ್ದಿಗಳು ಹರಿದಾಡಿವೆ. ಆದರೆ ಅದೆಲ್ಲವೂ ಶುದ್ಧ ಸುಳ್ಳು ಎಂದು ಸ್ವತಃ ನಿರ್ದೇಶಕ ಸುದೀಪ್ತೋ ಸೇನ್​ ಅವರೇ ‘ಬಾಲಿವುಡ್​ ಹಂಗಾಮಾ’ಗೆ ತಿಳಿಸಿದ್ದಾರೆ. ಒಟಿಟಿ ಸಂಸ್ಥೆಗಳು ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ತಿರಸ್ಕರಿಸಿದ್ದಕ್ಕೆ ಬಾಲಿವುಡ್​ನ ಕೆಲವರ ಷಡ್ಯಂತ್ರ ಕಾರಣ ಎಂದು ಸುದೀಪ್ತೋ ಸೇನ್​ ಭಾವಿಸಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್

ಕೇರಳದಲ್ಲಿ ನಡೆದಿತ್ತು ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಪ್ರಕರಣಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಡಿಬಂದಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಲು ಸಾಧ್ಯವಾಗದೇ ಇರುವವರು ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದಾರೆ. ಆದರೆ ಹಲವು ಕಾರಣಗಳಿಂದಾಗಿ ಇದರ ಒಟಿಟಿ ರಿಲೀಸ್​ ತಡವಾಗುತ್ತಿದೆ. ‘ಯಾವ ಒಟಿಟಿ ಸಂಸ್ಥೆಗಳಿಂದಲೂ ನಮಗೆ ಒಳ್ಳೆಯ ಆಫರ್​ ಬಂದಿಲ್ಲ’ ಎಂದು ಚಿತ್ರತಂಡದವರೇ ಹೇಳಿರುವುದರಿಂದ ಪ್ರೇಕ್ಷಕರಿಗೆ ನಿರಾಸೆ ಆಗಿದೆ. ಇನ್ನೂ ಕೆಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್