The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?

|

Updated on: Jun 25, 2023 | 7:46 AM

The Kerala Story OTT Release: ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಯಾವುದೇ ಒಟಿಟಿ ಸಂಸ್ಥೆಯಿಂದ ಬೇಡಿಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕ ಸುದೀಪ್ತೋ ಸೇನ್​ ಅವರೇ ವಿವರಿಸಿದ್ದಾರೆ.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?
ದಿ ಕೇರಳ ಸ್ಟೋರಿ
Follow us on

ಈ ವರ್ಷ ತೆರೆಕಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಚರ್ಚೆ ಹುಟ್ಟುಹಾಕಿದ ಚಿತ್ರ ಎಂದರೆ ಅದು ‘ದಿ ಕೇರಳ ಸ್ಟೋರಿ’. ನಿರ್ದೇಶಕ ಸುದೀಪ್ತೋ ಸೇನ್ (Sudipto Sen)​ ಅವರು ಆ್ಯಕ್ಷನ್​-ಕಟ್​ ಹೇಳಿದ ಈ ಸಿನಿಮಾದಲ್ಲಿ ಒಂದಷ್ಟು ವಿವಾದಾತ್ಮಕ ಅಂಶವನ್ನು ತೋರಿಸಲಾಗಿದೆ. ನಟಿ ಅದಾ ಶರ್ಮಾ ಅವರಿಗೆ ಈ ಚಿತ್ರದಿಂದ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರು ಭಾರಿ ಲಾಭ ಮಾಡಿಕೊಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 242 ಕೋಟಿ ರೂಪಾಯಿ ಕಮಾಯಿ ಮಾಡಿ ಬೀಗಿದೆ. ಸಣ್ಣ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಈ ಪರಿ ಕಲೆಕ್ಷನ್​ ಮಾಡಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. ಈಗ ಒಂದು ಶಾಕಿಂಗ್ ನ್ಯೂಸ್​ ಕೇಳಿಬಂದಿದೆ. ಇಷ್ಟೆಲ್ಲ ಸದ್ದು ಮಾಡಿದ ಸಿನಿಮಾವನ್ನು ಕೊಂಡುಕೊಳ್ಳಲು ಯಾವುದೇ ಒಟಿಟಿ (OTT) ಸಂಸ್ಥೆ ಕೂಡ ಮುಂದೆ ಬರುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಯಾವುದೇ ಒಟಿಟಿ ಸಂಸ್ಥೆಯಿಂದ ಬೇಡಿಕೆ ಬಂದಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರಿಯರಿಗೆ ಅಚ್ಚರಿ ಆಗಿದೆ. ಈ ರೀತಿ ಆಗಿದ್ದಕ್ಕೆ ಮೂವೀ ಮಾಫಿಯಾ ಕಾರಣ ಎಂದು ಹೇಳಲಾಗುತ್ತಿದೆ. ಈ ಸಿನಿಮಾದ ಯಶಸ್ಸನ್ನು ಸಹಿಸಿಕೊಳ್ಳಲು ಅನೇಕರಿಗೆ ಸಾಧ್ಯವಾಗಿಲ್ಲ. ಅಂಥವರೆಲ್ಲ ಒಟ್ಟಾಗಿ ಒಟಿಟಿ ಸಂಸ್ಥೆಗಳಿಗೆ ಚಾಡಿ ಹೇಳಿದ್ದಾರೆ. ಹಾಗಾಗಿ ಯಾರೂ ಕೂಡ ಈ ಸಿನಿಮಾವನ್ನು ಖರೀದಿಸಲು ಸಿದ್ಧರಿಲ್ಲ. ಈ ಬಗ್ಗೆ ಚಿತ್ರತಂಡದವರು ವಿಚಾರಿಸಿದಾಗ, ‘ರಾಜಕೀಯವಾಗಿ ಕಾಂಟ್ರವರ್ಸಿ ಹೊಂದಿರುವ ಚಿತ್ರ ನಮಗೆ ಬೇಡ’ ಎಂಬ ಉತ್ತರ ಒಟಿಟಿ ಸಂಸ್ಥೆಗಳ ಕಡೆಯಿಂದ ಬಂದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Vipul Shah: ಅಕ್ಷಯ್​ ಕುಮಾರ್​ ಜತೆ ಸಿನಿಮಾ ಮಾಡೋದು ನಿಲ್ಲಿಸಿದ್ದೇಕೆ ‘ದಿ ಕೇರಳ ಸ್ಟೋರಿ’ ನಿರ್ಮಾಪಕ? ಬಯಲಾಯ್ತು ಸತ್ಯ

ಒಟಿಟಿಗಳಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಸಖತ್​ ಡಿಮ್ಯಾಂಡ್​ ಬಂದಿದೆಯಂತೆ, ಪ್ರಸಾರ ಹಕ್ಕುಗಳು ಅಷ್ಟಕ್ಕೆ ಸೇಲ್​ ಆಯ್ತಂತೆ, ಈ ದಿನಾಂಕದಿಂದ ಸ್ಟ್ರೀಮಿಂಗ್​ ಆರಂಭ ಆಗಲಿದೆಂತೆ, ಅದಂತೆ, ಇದಂತೆ ಅಂತ ಹಲವಾರು ಸುದ್ದಿಗಳು ಹರಿದಾಡಿವೆ. ಆದರೆ ಅದೆಲ್ಲವೂ ಶುದ್ಧ ಸುಳ್ಳು ಎಂದು ಸ್ವತಃ ನಿರ್ದೇಶಕ ಸುದೀಪ್ತೋ ಸೇನ್​ ಅವರೇ ‘ಬಾಲಿವುಡ್​ ಹಂಗಾಮಾ’ಗೆ ತಿಳಿಸಿದ್ದಾರೆ. ಒಟಿಟಿ ಸಂಸ್ಥೆಗಳು ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ತಿರಸ್ಕರಿಸಿದ್ದಕ್ಕೆ ಬಾಲಿವುಡ್​ನ ಕೆಲವರ ಷಡ್ಯಂತ್ರ ಕಾರಣ ಎಂದು ಸುದೀಪ್ತೋ ಸೇನ್​ ಭಾವಿಸಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್

ಕೇರಳದಲ್ಲಿ ನಡೆದಿತ್ತು ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಪ್ರಕರಣಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಡಿಬಂದಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಲು ಸಾಧ್ಯವಾಗದೇ ಇರುವವರು ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದಾರೆ. ಆದರೆ ಹಲವು ಕಾರಣಗಳಿಂದಾಗಿ ಇದರ ಒಟಿಟಿ ರಿಲೀಸ್​ ತಡವಾಗುತ್ತಿದೆ. ‘ಯಾವ ಒಟಿಟಿ ಸಂಸ್ಥೆಗಳಿಂದಲೂ ನಮಗೆ ಒಳ್ಳೆಯ ಆಫರ್​ ಬಂದಿಲ್ಲ’ ಎಂದು ಚಿತ್ರತಂಡದವರೇ ಹೇಳಿರುವುದರಿಂದ ಪ್ರೇಕ್ಷಕರಿಗೆ ನಿರಾಸೆ ಆಗಿದೆ. ಇನ್ನೂ ಕೆಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.