Sign In

By signing in or creating an account, you agree with Associated Broadcasting Company's Terms & Conditions and Privacy Policy.

The Romantics: ಶಾರುಖ್​ ಖಾನ್​ ಮನೆಗೆ ಶೂಟಿಂಗ್​ ಮಾಡಲು ಹೋದಾಗ ಆದ ಅನುಭವ ವಿವರಿಸಿದ ನಿರ್ದೇಶಕಿ

Smriti Mundhra | Shah Rukh Khan: ‘ಶಾರುಖ್​ ಖಾನ್​ ಅವರು ಎಂತಹ ವ್ಯಕ್ತಿ ಎಂಬುದನ್ನು ಈ ಘಟನೆ ವಿವರಿಸುತ್ತದೆ. ನಾವು ಇರುವ ರೂಮಿನ ಒಳಗೆ ಅವರು ಬಂದಾಗ ನನಗೆ ಅಚ್ಚರಿ ಕಾದಿತ್ತು’ ಎಂದು ನಿರ್ದೇಶಕಿ ಸ್ಮೃತಿ ಮುಂದ್ರಾ ಹೇಳಿದ್ದಾರೆ.

The Romantics: ಶಾರುಖ್​ ಖಾನ್​ ಮನೆಗೆ ಶೂಟಿಂಗ್​ ಮಾಡಲು ಹೋದಾಗ ಆದ ಅನುಭವ ವಿವರಿಸಿದ ನಿರ್ದೇಶಕಿ
ಸ್ಮೃತಿ ಮುಂದ್ರಾ, ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on: Feb 27, 2023 | 3:50 PM

ನಟ ಶಾರುಖ್​ ಖಾನ್​ (Shah Rukh Khan) ಅವರು ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ನಟಿಸಿದ ಕಮ್​ ಬ್ಯಾಕ್​ ಸಿನಿಮಾ ‘ಪಠಾಣ್​’ ವಿಶ್ವಾದ್ಯಂತ ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಬೀಗುತ್ತಿದೆ. ಈ ನಡುವೆ ಶಾರುಖ್​ ಖಾನ್​ ಅವರ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಲಾಗುತ್ತಿದೆ. ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ‘ದಿ ರೊಮ್ಯಾಂಟಿಕ್ಸ್​’ (The Romantics) ಸೀರಿಸ್​ ಬಿಡುಗಡೆ ಆಗಿದೆ. ಇದರಲ್ಲಿ ಬಾಲಿವುಡ್​ನ ಅನೇಕರ ಸಂದರ್ಶನ ಇದೆ. ಸ್ಮೃತಿ ಮುಂದ್ರಾ (Smriti Mundhra) ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​, ಅಮಿತಾಭ್​ ಬಚ್ಚನ್​, ಮಾಧುರಿ ದೀಕ್ಷಿತ್​, ಆಮಿರ್​ ಖಾನ್​ ಮುಂತಾದವರನ್ನು ಸಂದರ್ಶಿಸುವ ಅವಕಾಶ ಅವರಿಗೆ ಸಿಕ್ಕಿದೆ. ಈ ಅನುಭವದ ಕುರಿತು ಅವರು ಅನೇಕ ಕಡೆಗಳಲ್ಲಿ ಮಾತನಾಡುತ್ತಿದ್ದಾರೆ. ವಿಶೇಷವಾಗಿ, ಶಾರುಖ್​ ಖಾನ್​ ಮನೆಗೆ ಹೋದಾಗ ಏನಾಯಿತು ಎಂಬುದನ್ನು ಸ್ಮೃತಿ ಮುಂದ್ರಾ ವಿವರಿಸಿದ್ದಾರೆ.

ಮುಂಬೈನಲ್ಲಿ ಶಾರುಖ್​ ಖಾನ್ ಅವರ ಐಷಾರಾಮಿ ಬಂಗಲೆ ಇದೆ. ಇದಕ್ಕೆ ‘ಮನ್ನತ್​’ ಎಂದು ಹೆಸರು. ‘ಮನ್ನತ್​’ಗೆ ಬರುವ ಎಲ್ಲ ಅತಿಥಿಗಳನ್ನು ಶಾರುಖ್ ಖಾನ್​ ಅವರು ತುಂಬ ಆತ್ಮೀಯವಾಗಿ ಉಪಚರಿಸುತ್ತಾರೆ. ಅದರ ಅನುಭವ ಹಲವರಿಗೆ ಆಗಿದೆ. ಈಗ ‘ದಿ ರೊಮ್ಯಾಂಟಿಕ್ಸ್​’ ನಿರ್ದೇಶಕಿ ಸ್ಮೃತಿ ಮುಂದ್ರಾ ಕೂಡ ಆ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ಶಾರುಖ್​ ಖಾನ್​ ಅವರು ಎಂತಹ ವ್ಯಕ್ತಿ ಎಂಬುದನ್ನು ಈ ಘಟನೆ ವಿವರಿಸುತ್ತದೆ. ಅವರು ನೀಡಿದ ಆತಿಥ್ಯ ಅತ್ಯುನ್ನತವಾಗಿತ್ತು. ತಮ್ಮ ತಂಡದಲ್ಲಿ ತುಂಬ ಜನರು ಇದ್ದೆವು. ಎಲ್ಲರಿಗೂ ಶಾರುಖ್​ ಖಾನ್​ ಮನೆಯಲ್ಲಿ ಚಹ ಮತ್ತು ತಿಂಡಿಯ ವ್ಯವಸ್ಥೆ ಮಾಡಲಾಗಿತ್ತು. ನಾವು ಇರುವ ರೂಮಿನ ಒಳಗೆ ಅವರು ಬಂದರು. ಆಗ ನನಗೆ ಅಚ್ಚರಿ ಕಾದಿತ್ತು. ನಮ್ಮ ತಂಡದ ಪ್ರತಿಯೊಬ್ಬರ ಹೆಸರನ್ನೂ ಶಾರುಖ್​ ಖಾನ್​ ತಿಳಿದುಕೊಂಡಿದ್ದರು. ಎಲ್ಲರ ಹೆಸರು ಕರೆದು ಮಾತನಾಡಿಸಿದರು. ಪ್ರತಿಯೊಬ್ಬರ ಕೆಲಸ ಮತ್ತು ಸಮಯಕ್ಕೆ ಗೌರವ ನೀಡಿದರು’ ಎಂದು ಸ್ಮೃತಿ ಮುಂದ್ರಾ ಹೇಳಿದ್ದಾರೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ನೋಡಲು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಶಾರುಖ್​ ಖಾನ್​ ಅಭಿಮಾನಿಗಳು

ಹಿಂದಿ ಚಿತ್ರರಂಗದ ಪ್ರತಿಷ್ಠಿಯ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಸಲುವಾಗಿ ‘ದಿ ರೊಮ್ಯಾಂಟಿಕ್ಸ್​’ ಸೀರಿಸ್​ ಸಿದ್ಧಪಡಿಸಲಾಗಿದೆ. ಈ ಬ್ಯಾನರ್​ನಲ್ಲಿ ನಟಿಸಿದ ಹಲವು ನಟ-ನಟಿಯರ ಸಂದರ್ಶನ ಇದರಲ್ಲಿ ಇದೆ. ಹಿಂದಿ ಚಿತ್ರರಂಗದ ಬಗ್ಗೆ ಎಲ್ಲರೂ ಮಾತನಾಡಿದ್ದಾರೆ.

ಹಲವು ಡ್ಯಾಕ್ಯುಮೆಂಟರಿಗಳನ್ನು ಮಾಡಿದ ಅನುಭವ ಸ್ಮೃತಿ ಮುಂದ್ರಾ ಅವರಿಗೆ ಇದೆ. ಈಗ ಅವರು ಮಾಡಿರುವ ‘ದಿ ರೊಮ್ಯಾಂಟಿಕ್ಸ್​’ ಸೀರಿಸ್​ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಲಿವುಡ್​ನ ಅನೇಕ ಸೂಪರ್​ ಸ್ಟಾರ್​ಗಳನ್ನು ಸಂದರ್ಶಿಸುವ ಅವಕಾಶ ಅವರಿಗೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?