AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

OTT Release this week: ಈ ವಾರ ಚಿತ್ರಮಂದಿರದಲ್ಲಿ ‘ಟಾಕ್ಸಿಕ್’ ಅಬ್ಬರಿಸುತ್ತಿದೆ. ಜೊತೆಗೆ ತೆಲುಗಿನ ‘ಇರುಮುಡಿ’ ಸಹ ಇದೆ. ಚಿತ್ರಮಂದಿರಗಳ ರೀತಿಯಲ್ಲೇ ಒಟಿಟಿಗೂ ಸಹ ಕೆಲವು ಸೂಪರ್ ಹಿಟ್ ಸಿನಿಮಾಗಳು ಈ ವಾರ ಲಗ್ಗೆ ಇಟ್ಟಿವೆ. ಅದರಲ್ಲೂ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಬರೆದ ಸಿನಿಮಾ ಒಂದು ಈ ವಾರ ಒಟಿಟಿಗೆ ಬಂದಿದೆ. ಈ ವಾರ ಒಟಿಟಿಗೆ ಬಂದಿರುವ ಹೊಸ ಸಿನಿಮಾ ಯಾವುವು? ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ನೋಡಿ ಮಾಹಿತಿ...

ಮಂಜುನಾಥ ಸಿ.
|

Updated on: Aug 29, 2026 | 3:04 PM

Share
ಪಾಪ್ ಲಿಜೆಂಡ್ ಮೈಖಲ್ ಜಾಕ್ಸನ್ ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯಿತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಮೈಖಲ್’ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನ ಪಿಕಾಕ್ ಹಬ್​​ನಲ್ಲಿ ವೀಕ್ಷಿಸಬಹುದಾಗಿದೆ.

ಪಾಪ್ ಲಿಜೆಂಡ್ ಮೈಖಲ್ ಜಾಕ್ಸನ್ ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯಿತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಮೈಖಲ್’ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನ ಪಿಕಾಕ್ ಹಬ್​​ನಲ್ಲಿ ವೀಕ್ಷಿಸಬಹುದಾಗಿದೆ.

1 / 6
ರಾಜ್ ಬಿ ಶೆಟ್ಟಿ ನಟಿಸಿರುವ ಮೊದಲ ಹಿಂದಿ ಸಿನಿಮಾ ‘ಬಂದರ್’ ಈ ವಾರ ಒಟಿಟಿಗೆ ಬಂದಿದೆ. ಬಾಬಿ ಡಿಯೋಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಅನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಒಂದು ಹಾಡಂತೂ ದೊಡ್ಡ ಹಿಟ್ ಆಗಿದೆ. ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ರಾಜ್ ಬಿ ಶೆಟ್ಟಿ ನಟಿಸಿರುವ ಮೊದಲ ಹಿಂದಿ ಸಿನಿಮಾ ‘ಬಂದರ್’ ಈ ವಾರ ಒಟಿಟಿಗೆ ಬಂದಿದೆ. ಬಾಬಿ ಡಿಯೋಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಅನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಒಂದು ಹಾಡಂತೂ ದೊಡ್ಡ ಹಿಟ್ ಆಗಿದೆ. ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
ಕೆಲಸದಿಂದ ಅಮಾನತ್ತಾಗಿರುವ ಎಎಸ್​​ಐ ಬಬಿತಾ ಸಿಂಗ್, ತನ್ನ ಸಹೋದರಿಯ ಸೀಮಂತದಲ್ಲಿ ಪಾಲ್ಗೊಳ್ಳಲು ಹಳ್ಳಿಗೆ ಹೋಗುತ್ತಾಳೆ. ಅಲ್ಲಿ ಆಕೆಯ ಬಾಲ್ಯದ ಗೆಳೆಯನ ಕೊಲೆ ಆಗುತ್ತದೆ. ಅಮಾನತ್ತಿನಲ್ಲಿದ್ದರೂ ಆ ಕೇಸಿನ ತನಿಖೆಯನ್ನು ಬಬಿತಾ ಮಾಡುತ್ತಾಳೆ ಆ ಹಾದಿಯಲ್ಲಿ ಎದುರಾಗುವ ಕಷ್ಟಗಳ ಕತೆಯನ್ನು ‘ಬಬಿತಾ ಸಿಂಗ್ ರಿಪೋರ್ಟಿಂಗ್’ ಸಿನಿಮಾ ಒಳಗೊಂಡಿದೆ. ನಿಮಿಷಾ ಸಜಯನ್ ಸಿನಿಮಾದ ನಾಯಕಿ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಲಭ್ಯವಿದೆ.

ಕೆಲಸದಿಂದ ಅಮಾನತ್ತಾಗಿರುವ ಎಎಸ್​​ಐ ಬಬಿತಾ ಸಿಂಗ್, ತನ್ನ ಸಹೋದರಿಯ ಸೀಮಂತದಲ್ಲಿ ಪಾಲ್ಗೊಳ್ಳಲು ಹಳ್ಳಿಗೆ ಹೋಗುತ್ತಾಳೆ. ಅಲ್ಲಿ ಆಕೆಯ ಬಾಲ್ಯದ ಗೆಳೆಯನ ಕೊಲೆ ಆಗುತ್ತದೆ. ಅಮಾನತ್ತಿನಲ್ಲಿದ್ದರೂ ಆ ಕೇಸಿನ ತನಿಖೆಯನ್ನು ಬಬಿತಾ ಮಾಡುತ್ತಾಳೆ ಆ ಹಾದಿಯಲ್ಲಿ ಎದುರಾಗುವ ಕಷ್ಟಗಳ ಕತೆಯನ್ನು ‘ಬಬಿತಾ ಸಿಂಗ್ ರಿಪೋರ್ಟಿಂಗ್’ ಸಿನಿಮಾ ಒಳಗೊಂಡಿದೆ. ನಿಮಿಷಾ ಸಜಯನ್ ಸಿನಿಮಾದ ನಾಯಕಿ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಲಭ್ಯವಿದೆ.

3 / 6
ಆಲಿಯಾ ಭಟ್, ಶರ್ವರಿ ವಾಘ್ ನಟನೆಯ ‘ಆಲ್ಫಾ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಯಶ್ ರಾಜ್ ಫಿಲಮ್ಸ್ ಅವರ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿತ್ತು. ಇದೊಂದು ಸ್ಪೈ ಯೂನಿವರ್ಸ್ ಕತೆಯನ್ನು ಒಳಗೊಂಡಿರುವ ಸಿನಿಮಾ ಆಗಿದೆ. ಈ ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಆಲಿಯಾ ಭಟ್, ಶರ್ವರಿ ವಾಘ್ ನಟನೆಯ ‘ಆಲ್ಫಾ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಯಶ್ ರಾಜ್ ಫಿಲಮ್ಸ್ ಅವರ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿತ್ತು. ಇದೊಂದು ಸ್ಪೈ ಯೂನಿವರ್ಸ್ ಕತೆಯನ್ನು ಒಳಗೊಂಡಿರುವ ಸಿನಿಮಾ ಆಗಿದೆ. ಈ ಸಿನಿಮಾವನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಹಾಸ್ಯಮಯ ಲವ್ ಸ್ಟೋರಿ ಸಿನಿಮಾ ‘ಅನ್ಬೆ ಡಯಾನ’. ಚೆನ್ನೈನಲ್ಲಿ ವಾಸವಾಗಿರುವ ತೆಲುಗು ಕುಟುಂಬದ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಸೋನಿ ಲಿವ್​​ನಲ್ಲಿ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ಗಮನ ಸೆಳೆದಿದೆ.

ಹಾಸ್ಯಮಯ ಲವ್ ಸ್ಟೋರಿ ಸಿನಿಮಾ ‘ಅನ್ಬೆ ಡಯಾನ’. ಚೆನ್ನೈನಲ್ಲಿ ವಾಸವಾಗಿರುವ ತೆಲುಗು ಕುಟುಂಬದ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಸೋನಿ ಲಿವ್​​ನಲ್ಲಿ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ಗಮನ ಸೆಳೆದಿದೆ.

5 / 6
ಪೃಥ್ವಿರಾಜ್ ಸುಕುಮಾರನ್ ಹಾಗೂ ಪಾರ್ವತಿ ಮೆನನ್ ಒಟ್ಟಿಗೆ ನಟಿಸಿರುವ ಮಲಯಾಳಿ ಸಿನಿಮಾ ‘ಐ ನೋಬಡಿ’ ಈ ವಾರ ಒಟಿಟಿಗೆ ಬಂದಿದೆ. ಸಾಮಾನ್ಯ ವ್ಯಕ್ತಿಯೊಬ್ಬ ಅಸಾಮಾನ್ಯ ಸನ್ನಿವೇಶದಲ್ಲಿ ಸಿಲುಕಿಕೊಂಡ ಮೇಲೆ ಅವನ ಬದುಕೇ ಬದಲಾಗಿ ಹೋಗುತ್ತದೆ. ಸಾಮಾನ್ಯನೊಬ್ಬನ ಅಸಾಮಾನ್ಯ ಕತೆ ‘ಐ ನೋಬಡಿ’. ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಪೃಥ್ವಿರಾಜ್ ಸುಕುಮಾರನ್ ಹಾಗೂ ಪಾರ್ವತಿ ಮೆನನ್ ಒಟ್ಟಿಗೆ ನಟಿಸಿರುವ ಮಲಯಾಳಿ ಸಿನಿಮಾ ‘ಐ ನೋಬಡಿ’ ಈ ವಾರ ಒಟಿಟಿಗೆ ಬಂದಿದೆ. ಸಾಮಾನ್ಯ ವ್ಯಕ್ತಿಯೊಬ್ಬ ಅಸಾಮಾನ್ಯ ಸನ್ನಿವೇಶದಲ್ಲಿ ಸಿಲುಕಿಕೊಂಡ ಮೇಲೆ ಅವನ ಬದುಕೇ ಬದಲಾಗಿ ಹೋಗುತ್ತದೆ. ಸಾಮಾನ್ಯನೊಬ್ಬನ ಅಸಾಮಾನ್ಯ ಕತೆ ‘ಐ ನೋಬಡಿ’. ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

6 / 6
Follow Us
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು