AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OTT: ಈ ವಾರ ಗಂಧದ ಗುಡಿ ಜೊತೆಗೆ ಇನ್ನೂ ಹಲವು ಸಿನಿಮಾಗಳು ಒಟಿಟಿಗೆ

ಪುನೀತ್ ರಾಜ್​ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾ ಈ ವಾರ ಒಟಿಟಿಗೆ ಬಂದಿರುವುದು ಮಾತ್ರವೇ ಅಲ್ಲದೆ ಇನ್ನೂ ಹಲವು ಆಸಕ್ತಿಕರ, ಜನಪ್ರಿಯ ಸಿನಿಮಾಗಳು ಈ ವಾರ ಒಟಿಟಿಗೆ ಬಂದಿವೆ. ಕೆಲವು ಪ್ರಮುಖ ಸಿನಿಮಾ ಹಾಗೂ ವೆಬ್ ಸರಣಿಗಳ ಪಟ್ಟಿ ಇಲ್ಲಿದೆ.

OTT: ಈ ವಾರ ಗಂಧದ ಗುಡಿ ಜೊತೆಗೆ ಇನ್ನೂ ಹಲವು ಸಿನಿಮಾಗಳು ಒಟಿಟಿಗೆ
ಈ ವಾರ ಒಟಿಟಿಗೆ ಬಂದ ಸಿನಿಮಾಗಳು
ಮಂಜುನಾಥ ಸಿ.
|

Updated on: Mar 18, 2023 | 6:47 PM

Share

ಚಿತ್ರಮಂದಿರಗಳಲ್ಲಿ ಕಬ್ಜ (Kabzaa) ಸಿನಿಮಾ ಅಬ್ಬರಿಸುತ್ತಿರುವಾಗಲೇ ಒಟಿಟಿಯಲ್ಲಿಯೂ (OTT) ಹಲವು ಸಿನಿಮಾಗಳು ದಾಂಗುಡಿ ಇಟ್ಟಿವೆ. ಅದರಲ್ಲಿಯೂ ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ಗಂಧದ ಗುಡಿ ಸಿನಿಮಾ ಈ ವಾರ ಒಟಿಟಿಗೆ ಬಂದಿರುವುದು ಮಾತ್ರವೇ ಅಲ್ಲದೆ ಇನ್ನೂ ಹಲವು ಆಸಕ್ತಿಕರ, ಜನಪ್ರಿಯ ಸಿನಿಮಾಗಳು ಈ ವಾರ ಒಟಿಟಿಗೆ ಬಂದಿವೆ. ಕೆಲವು ಪ್ರಮುಖ ಸಿನಿಮಾ ಹಾಗೂ ವೆಬ್ ಸರಣಿಗಳ ಪಟ್ಟಿ ಇಲ್ಲಿದೆ.

ಗಂಧದ ಗುಡಿ ಪುನೀತ್ ರಾಜ್​ಕುಮಾರ್ ಅವರು ಕೊನೆಯ ಬಾರಿ ಅವರು ಅವರಾಗಿಯೇ ತೆರೆಯ ಮೇಲೆ ಕಾಣಿಸಿಕೊಂಡಿರು ಡಾಕ್ಯುಡ್ರಾಮಾ ಗಂಧದ ಗುಡಿ ಅಮೆಜಾನ್ ಪ್ರೈಂಗೆ ಬಿಡುಗಡೆ ಆಗಿದೆ. ಮಾರ್ಚ್ 17 ರಂದು ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದೇ ಈ ಡಾಕ್ಯುಡ್ರಾಮಾ ಒಟಿಟಿಗೆ ಬಂದಿದೆ.

ಒನ್ಸ್​ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಡಾಲಿ ಧನಂಜಯ್, ಅದಿತಿ ಪ್ರಭುದೇವ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ಒನ್ಸ್​ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾ ಇದೇ ವಾರ ಸನ್​ ನೆಕ್ಸ್ಟ್ ಒಟಿಟಿಯಲ್ಲಿ ತೆರೆ ಕಂಡಿದೆ. ಈ ಸಿನಿಮಾವು ಕಳೆದ ವರ್ಷಾಂತ್ಯದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಂಡಿತ್ತು. ಡಾಲಿ ನಟನೆ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು.

ವಾತಿ ಫೆಬ್ರವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ನಟ ಧನುಶ್ ಮುಖ್ಯ ಪಾತ್ರದಲ್ಲಿ ನಟಿಸಿರುವ ತಮಿಳು ಸಿನಿಮಾ ವಾತಿ ಇದೇ ವಾರ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಈ ಸಿನಿಮಾ ಸ್ಟ್ರೀಮ್ ಆಗುತ್ತಿದ್ದು, ಚಿತ್ರಮಂದಿರಗಳಲ್ಲಿ ತೆರೆ ಕಂಡಾಗ ಸೂಪರ್ ಹಿಟ್ ಎನಿಸಿಕೊಂಡಿತ್ತು. ನೂರು ಕೋಟಿಗೂ ಹೆಚ್ಚು ಗಳಿಕೆ ಮಾಡಿತ್ತು. ಶಿಕ್ಷಣ ವ್ಯವಸ್ಥೆಯ ಹುಳುಕುಗಳ ಮೇಲೆ ಬೆಳಕು ಚೆಲ್ಲುವ ಸಿನಿಮಾ ಇದಾಗಿದೆ.

ರೈಟರ್ ಪದ್ಮಭೂಷಣ್ ಹಾಸ್ಯನಟ ಸುಹಾನ್ ನಾಯಕ ನಟನಾಗಿ ನಟಿಸುತ್ತಿರುವ ಎರಡನೇ ಸಿನಿಮಾ ರೈಟರ್ ಪದ್ಮಭೂಷಣ್ ಸಿನಿಮಾ ಫೆಬ್ರವರಿ 3 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಕತೆಗಾರನಾಗುವ ಕನಸು ಕಂಡ ಯುವಕನೊಬ್ಬನ ನವಿರು ಪ್ರೇಮಕತೆಯನ್ನು ಒಳಗೊಂಡ ಈ ಸಿನಿಮಾ ಇದೀಗ ಜೀ5 ನಲ್ಲಿ ಸ್ಟ್ರೀಮ್ ಆಗುತ್ತಿದೆ.

ಕುತ್ತೆ ಬಾಲಿವುಡ್​ನ ಆಕ್ಷನ್ ಥ್ರಿಲ್ಲರ್ ಕಾಮಿಡಿ ಸಿನಿಮಾ ಕುತ್ತೆ ಈ ವಾರ ನೆಟ್​ಫ್ಲಿಕ್ಸ್​ಗೆ ಬಂದಿದೆ. ಜನವರಿ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಹಾಗೆ ಬಂದು ಹೀಗೆ ಹೋಗಿಬಿಟ್ಟಿತ್ತು. ಆದರೆ ವಿಮರ್ಶಕರಿಂದ ತುಸು ಉತ್ತಮ ವಿಮರ್ಶೆಯನ್ನೇ ಗಳಿಸಿತ್ತು. ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಪರಸ್ಪರರ ಮೇಲೆ ನಂಬಿಕೆ ಇಲ್ಲದವರು ತಂಡವಾಗಿ ಹಣ ಮಾಡಲು ಹೋಗುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಬ್ಲಾಕ್ ಆಡಮ್ ದಿ ರಾಕ್ ಅಡ್ಡನಾಮದ ನಟ ಡ್ವೇನ್ ಜೋನ್ಸ್ ನಟಿಸಿರುವ ಸೂಪರ್ ಹೀರೋ ಸಿನಿಮಾ ಬ್ಲಾಕ್ ಆಡಮ್ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮ್ ಆಗುತ್ತಿದೆ. ಇದಕ್ಕೂ ಮೊದಲೇ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿತ್ತಾದರೂ ಹಣ ಕೊಟ್ಟು ನೋಡಬೇಕಿತ್ತು. ಆದರೆ ಈಗ ಚಂದಾದಾರರಾಗಿರುವವನ್ನು ಉಚಿತವಾಗಿ ನೋಡಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!