AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಒಟಿಟಿಗೆ ಬಂತು ಈ ಥ್ರಿಲ್ಲರ್ ಚಿತ್ರ

ಥಿಯೇಟರ್ನಲ್ಲಿ ಸಿನಿಮಾ ರಿಲೀಸ್ ಆದರೂ ಒಟಿಟಿಯಲ್ಲಿ ಬಂದಾಗ ನೋಡಿಕೊಳ್ಳೋಣ ಎಂಬ ಮನಸ್ಥಿತಿಯವರೇ ಈಗ ಹೆಚ್ಚಿದ್ದಾರೆ. ಹೀಗಿರುವಾಗ ಸಿನಿಮಾ ರಿಲೀಸ್ ಆದ ಒಂದೇ ದಿನಕ್ಕೆ ಒಟಿಟಿಗೆ ಬರುತ್ತದೆ ಎಂದರೆ ಯಾರು ತಾನೇ ಸಿನಿಮಾ ನೋಡಲು ಥಿಯೇಟರ್ಗೆ ಹೋಗುತ್ತಾರೆ ಹೇಳಿ. ಈಗ ಅಂಥದ್ದೇ ಒಂದು ಘಟನೆ ನಡೆಯುತ್ತಿದೆ.

ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಒಟಿಟಿಗೆ ಬಂತು ಈ ಥ್ರಿಲ್ಲರ್ ಚಿತ್ರ
ಡಿಎನ್​ಎ
ರಾಜೇಶ್ ದುಗ್ಗುಮನೆ
|

Updated on: Jul 18, 2025 | 7:03 AM

Share

ಥ್ರಿಲ್ಲರ್ ಸಿನಿಮಾಗಳನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ? ಅನೇಕ ಥ್ರಿಲ್ಲರ್ ಸಿನಿಮಾಗಳು ಅಭಿಮಾನಿಗಳ ಮೆಚ್ಚುಗೆ ಪಡೆದ ಉದಾಹರಣೆ ಇದೆ. ಈಗ ಈ ಸಾಲಿಗೆ ‘ಡಿಎನ್​ಎ’ ಸಿನಿಮಾ ಕೂಡ ಸೇರಿದೆ. ವಿಶೇಷ ಎಂದರೆ ಈ ಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಒಟಿಟಿಗೆ (OTT) ಬರುತ್ತಿದೆ. ನೆಲ್ಸನ್ ವೆಂಕಟೇಶನ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಥರ್ವ ಮುರುಳಿ ಹಾಗೂ ನಿಮಿಷಾ ಸಜಯನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ಒಂದೇ ದಿನಕ್ಕೆ ಈ ಚಿತ್ರ ಒಟಿಟಿಗೆ ಬರೋಕೆ ಕಾರಣವೇನು? ಆ ಪ್ರಶ್ನೆಗೂ ಉತ್ತರವಿದೆ. ಅಸಲಿಗೆ ಈ ಸಿನಿಮಾದ ಮೂಲ ಭಾಷೆ ತಮಿಳು. ಈ ಚಿತ್ರ ಕಳೆದ ತಿಂಗಳು ತಮಿಳಿನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ತೆಲುಗಿನಲ್ಲಿ ಇಂದು (ಜುಲೈ 18) ತೆರೆ ಕಾಣುತ್ತಿದೆ. ಶನಿವಾರ (ಜುಲೈ 19)  ಸಿನಿಮಾ ಒಟಿಟಿಗೆ ಬರಲಿದೆ.

‘ಡಿಎನ್​ಎ’ ಚಿತ್ರವನ್ನು ಎಲ್ಲಾ ಭಾಷೆಗಳಲ್ಲಿ ಒಟ್ಟಿಗೆ ರಿಲೀಸ್ ಮಾಡುವ ಆಲೋಚನೆ ಇತ್ತು. ಆದರೆ, ತೆಲುಗು ಸಿನಿಮಾ ರಿಲೀಸ ಮುಂದಕ್ಕೆ ಹೋಯಿತು. ಈ ಚಿತ್ರದ ಒಟಿಟಿ ಬಿಡುಗಡೆ ಜುಲೈ 25ಕ್ಕೆ ಆಗಬೇಕಿತ್ತು. ಆದರೆ, ನಿರ್ಮಾಪಕರು ಇದನ್ನು ಆರು ದಿನ ಹಿಂದಕ್ಕೆ ತಂದಿದ್ದಾರೆ. ಈ ಚಿತ್ರದ ತೆಲುಗು ವರ್ಷನ್ ಕಳೆದ ವಾರವರೇ ಬಿಡುಗಡೆ ಕಾಣಬೇಕಿತ್ತು. ಆದರೆ, ಅದನ್ನು ಒಂದು ವಾರ ಮುಂದಕ್ಕೆ ಹಾಕಲಾಯಿತು. ಈ ಎಲ್ಲಾ ಕಲಸುಮೇಲೋಗರದಿಂದ ಸಿನಿಮಾ ತೆಲುಗಿನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಒಟಿಟಿಗೆ ಬರುತ್ತಿದೆ.

ಇದನ್ನೂ ಓದಿ
Image
ನಯನತಾರ ಜೊತೆ ಚಿರಂಜೀವಿ ರೊಮ್ಯಾನ್ಸ್ ; 29 ವರ್ಷ ವಯಸ್ಸಿನ ಅಂತರ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 
Image
ಪವನ್ ಕಲ್ಯಾಣ್ ಚಿತ್ರ ‘ಹರಿ ಹರ ವೀರ ಮಲ್ಲು’ಗೆ ಶುರುವಾಗಿದೆ ಕರ್ನಾಟಕದ ಭಯ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ಇದನ್ನೂ ಓದಿ:  ಈ ವಾರ ಒಟಿಟಿಗೆ ಬಂದಿವೆ ಬೊಂಬಾಟ್ ಸಿನಿಮಾಗಳು

ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್ ಆದರೂ ಒಟಿಟಿಯಲ್ಲಿ ಬಂದಾಗ ನೋಡಿಕೊಳ್ಳೋಣ ಎಂಬ ಮನಸ್ಥಿತಿಯವರೇ ಈಗ ಹೆಚ್ಚಿದ್ದಾರೆ. ಹೀಗಿರುವಾಗ ಸಿನಿಮಾ ರಿಲೀಸ್ ಆದ ಒಂದೇ ದಿನಕ್ಕೆ ಒಟಿಟಿಗೆ ಬರುತ್ತದೆ ಎಂದರೆ ಯಾರು ತಾನೇ ಸಿನಿಮಾ ನೋಡಲು ಥಿಯೇಟರ್​ಗೆ ಹೋಗುತ್ತಾರೆ ಹೇಳಿ. ಹೀಗಾಗಿ, ಈ ಚಿತ್ರ ಥಿಯೇಟರ್​ನಲ್ಲಿ ಹೆಚ್ಚು ಕಲೆಕ್ಷನ್ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ. ತೆಲುಗು ಮಂದಿ ಇದನ್ನು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು