AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Uninstall Hotstar’: ಬಾಬರ್​ ಕುರಿತು ವೆಬ್​ ಸೀರಿಸ್​ ರಿಲೀಸ್​ ಮಾಡಿ ಇಕ್ಕಟ್ಟಿಗೆ ಸಿಲುಕಿದ ಹಾಟ್​ಸ್ಟಾರ್​

The Empire: ನಿಖಿಲ್​ ಅಡ್ವಾಣಿ ನಿರ್ಮಾಣದ ‘ದಿ ಎಂಪೈರ್’​ ಶುಕ್ರವಾರ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ರಿಲೀಸ್​ ಆಗಿದೆ. ಈ ಸೀರಿಸ್​ನಲ್ಲಿ ದೊಡ್ಡ ಪಾತ್ರವರ್ಗವೇ ಇದೆ.

‘Uninstall Hotstar’: ಬಾಬರ್​ ಕುರಿತು ವೆಬ್​ ಸೀರಿಸ್​ ರಿಲೀಸ್​ ಮಾಡಿ ಇಕ್ಕಟ್ಟಿಗೆ ಸಿಲುಕಿದ ಹಾಟ್​ಸ್ಟಾರ್​
ಬಾಬರ್​ ಕುರಿತು ವೆಬ್​ ಸೀರಿಸ್​ ರಿಲೀಸ್​ ಮಾಡಿ ಇಕ್ಕಟ್ಟಿಗೆ ಸಿಲುಕಿದ ಹಾಟ್​ಸ್ಟಾರ್​
TV9 Web
| Edited By: |

Updated on: Aug 27, 2021 | 5:55 PM

Share

ಒಟಿಟಿ ವ್ಯಾಪ್ತಿ ಹೆಚ್ಚಿದಂತೆ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಸಾಕಷ್ಟು ವೆಬ್​ ಸೀರಿಸ್​ಗಳು ಈಗಾಗಲೇ ಸಿದ್ಧಗೊಂಡು ರಿಲೀಸ್​ ಆಗಿವೆ. ಈ ವೇಳೆ ಕೆಲವು ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಸಿವೆ. ಇದಕ್ಕೆ ಈಗ ಹೊಸ ಸೇರ್ಪಡೆ ‘ದಿ ಎಂಪೈರ್​’. ಬಾಬರ್​ ಜೀವನ ಕಥೆ ಆಧರಿಸಿ ಸಿದ್ಧಗೊಂಡಿರುವ ಈ ವೆಬ್​ ಸೀರಿಸ್ ಎಲ್ಲ ಕಡೆಗಳಿಂದ ವಿರೋಧ ಎದುರಿಸುತ್ತಿದೆ.

ನಿಖಿಲ್​ ಅಡ್ವಾಣಿ ನಿರ್ಮಾಣದ ‘ದಿ ಎಂಪೈರ್’​ ಶುಕ್ರವಾರ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ರಿಲೀಸ್​ ಆಗಿದೆ. ಈ ಸೀರಿಸ್​ನಲ್ಲಿ ದೊಡ್ಡ ಪಾತ್ರವರ್ಗವೇ ಇದೆ. ಅಲೆಕ್ಸ್​ ರುದರ್​ಫೋರ್ಡ್​ ಬರೆದ ‘ಎಂಪೈರ್​ ಆಫ್​ ದಿ ಮೊಘಲ್​; ರೈಡರ್ಸ್​ ಫ್ರಮ್​ ದಿ ನಾರ್ಥ್​’ ಪುಸ್ತಕ ಆಧರಿಸಿ ಈ ವೆಬ್​ ಸೀರಿಸ್​ ಸಿದ್ಧಗೊಂಡಿದೆ.

ಭಾರತದ ಇತಿಹಾಸದ ಪ್ರಕಾರ ಬಾಬರ್​ ಓರ್ವ ಆಕ್ರಮಣಕಾರ. ಆದರೆ, ಈ ವೆಬ್​ ಸೀರಿಸ್​ನಲ್ಲಿ ಆಕ್ರಮಣಕಾರನನ್ನು ವೈಭವೀಕರಿಸಲಾಗಿದೆ ಎಂಬುದು ಪ್ರೇಕ್ಷಕರ ಆರೋಪ. ಈ ಕಾರಣಕ್ಕೆ ವೆಬ್​ ಸೀರಿಸ್​ ಪ್ರಸಾರವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ಆದರೆ, ಇದಕ್ಕೆ ಹಾಟ್​ಸ್ಟಾರ್​ ಜಗ್ಗಿಲ್ಲ. ‘ದಿ ಎಂಪೈರ್​ನಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಇಲ್ಲಿ ಬಾಬರ್​ನನ್ನು ವೈಭವೀಕರಿಸಿಲ್ಲ’ ಎಂದು ಸ್ಪಷ್ಟನೆ ನೀಡಿದೆ.

ಹಾಟ್​ಸ್ಟಾರ್​ ಕಡೆಯಿಂದ ಬಂದ ಉತ್ತರ ಅನೇಕರ ಕೋಪಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ # UninstallHotstar ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಜನರು ಟ್ವೀಟ್​ ಮಾಡುತ್ತಿದ್ದಾರೆ. ಅಲ್ಲದೆ, ಹಾಟ್​ಸ್ಟಾರ್​ ಅನ್​ ಇನ್ಸ್ಟಾಲ್​ ಮಾಡುವಂತೆ ಆಗ್ರಹಿಸಲಾಗುತ್ತಿದೆ. ಇದು ಹಾಟ್​ಸ್ಟಾರ್​ ಸಂಸ್ಥೆಗೆ ತಲೆನೋವಾಗಿ ಪರಿಣಮಿಸಿದೆ. ಈ ಬೆಳವಣಿಗೆಯಿಂದ ಒಂದಷ್ಟು ಬಳಕೆದಾರರನ್ನು ಕಳೆದುಕೊಳ್ಳುವ ಭೀತಿ ಸಂಸ್ಥೆಗೆ ಎದುರಾಗಿದೆ.

ಮಾಹಿತಿ ತಂತ್ರಜ್ಞಾನ ನಿಯಮ 2021ರ ಅಡಿಯಲ್ಲಿ ನೇಮಕಗೊಂಡ ಕುಂದುಕೊರತೆ ಅಧಿಕಾರಿಗೆ ಈ ಸರಣಿ ಬಗ್ಗೆ ದೂರು ಬಂದಿತ್ತು. ಈ ದೂರಿನಲ್ಲಿ ಬಾಬರ್​ಅನ್ನು ವೈಭವೀಕರಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಅಧಿಕಾರಿಗಳು ಕೂಡ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಅಯೋಧ್ಯೆಯಲ್ಲಿದ್ದ ರಾಮ ಮಂದಿರವನ್ನು ಕೆಡವಿ ಅಲ್ಲಿ ಮಸೀದಿ ಕಟ್ಟಿದ್ದು ಬಾಬರ್​ ಎನ್ನುವುದನ್ನು ಇತಿಹಾಸದಲ್ಲಿ ಬರೆಯಲಾಗಿದೆ. ಇದಲ್ಲದೆ, ಭಾರತವನ್ನು ಅತಿಕ್ರಮಣ ಮಾಡಿ ಆತ ಭಾರತಕ್ಕೆ ಸಾಕಷ್ಟು ನಷ್ಟ ಉಂಟು ಮಾಡಿದ್ದಾನೆ ಎಂಬುದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: ‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​

ಈ ರಿಚಾರ್ಜ್ ಮಾಡಿದ್ರೆ ನಿಮಗೆ ಅಮೆಜಾನ್, ನೆಟ್​ಫ್ಲಿಕ್ಸ್, ಹಾಟ್​ಸ್ಟಾರ್ ಉಚಿತವಾಗಿ ಸಿಗಲಿದೆ

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​