AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್

ಉಪೇಂದ್ರ ನಟನೆಯ ಹಾಗೂ ನಿರ್ದೇಶನದ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿತು. ಈಗ ಒಟಿಟಿ ರಿಲೀಸ್ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಮಾರ್ಚ್ ಅಂತ್ಯಕ್ಕೆ ಜೀ5 ನಲ್ಲಿ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ, ಆದರೆ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.

ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Mar 06, 2025 | 12:39 PM

Share

ಉಪೇಂದ್ರ ನಟನೆಯ ಸಿನಿಮಾಗಳು ತಲೆಗೆ ಹುಳ ಬಿಡೋದು ಜಾಸ್ತಿ. ಅದೇ ರೀತಿ ಕಳೆದ ವರ್ಷ ಡಿಸೆಂಬರ್ 20ರಂದು ಥಿಯೇಟರ್​​ನಲ್ಲಿ ರಿಲೀಸ್ ಆದ ‘ಯುಐ’ ಸಿನಿಮಾ (UI Movie) ಸಾಕಷ್ಟು ಸದ್ದು ಮಾಡಿತು. ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಕಾದವರಿಗೆ ನಿರಾಸೆ ಉಂಟಾಗಿದೆ. ಈಗ ಕೊನೆಗೂ ಈ ವಿಚಾರದಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ ‘ಯುಐ’ ಒಟಿಟಿಯಲ್ಲಿ ಬರಲಿದೆ ಎನ್ನಲಾಗುತ್ತಿದೆ.

ಜಗತ್ತು ಯಾವ ರೀತಿ ಆಗಿದೆ ಹಾಗೂ ಮುಂದೆ ಯಾವ ರೀತಿ ಆಗಬಹುದು ಎಂಬುದರ ಝಲಕ್ ‘ಯುಐ’ನಲ್ಲಿ ಇತ್ತು. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡರು. ಈ ಸಿನಿಮಾ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಆದರೆ, ಸಿನಿಮಾ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈಗ ಈ ಬಗ್ಗೆ ವರದಿಗಳು ಹುಟ್ಟಿಕೊಂಡಿವೆ.

‘ಯುಐ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರ ಮಾರ್ಚ್ 30ರ ಸಮಯದಲ್ಲಿ ಜೀ5 ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಇಂಗ್ಲಿಷ್ ವೆಬ್​ಸೈಟ್​ಗಳಲ್ಲಿ ವರದಿ ಆಗಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಈ ಮೊದಲು ಕೂಡ ಇದೇ ರೀತಿಯ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ತಂಡ ಅಲ್ಲ ಗಳೆದಿತ್ತು.

ಇದನ್ನೂ ಓದಿ
Image
ಉಪೇಂದ್ರ ಮೆಚ್ಚಿದ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ಮಾರ್ಚ್​ 6ಕ್ಕೆ ಬಿಡುಗಡೆ
Image
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Image
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
Image
ಟೆಲಿವಿಷನ್ ಪ್ರೀಮೀಯರ್​ಗೆ ‘ಮ್ಯಾಕ್ಸ್’ ಹಾಗೂ ‘ಯುಐ’ ರೆಡಿ; TRP ಕ್ಲ್ಯಾಶ್

‘ಯುಐ’ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರವನ್ನು ಜೀ ಕನ್ನಡ ವಾಹಿನಿಯವರು ಅಧಿಕೃತವಾಗಿ ಹಂಚಿಕೊಂಡಿದ್ದರು. ಆದರೆ, ಈವರೆಗೆ ಸಿನಿಮಾ ಟಿವಿಯಲ್ಲಿ ಪ್ರಸಾರ ಕಂಡಿಲ್ಲ. ಯುಗಾದಿ ಸಂದರ್ಭದಲ್ಲಿ ‘ಯುಐ’ ಚಿತ್ರ ಟಿವಿಯಲ್ಲಿ ಪ್ರಸಾರ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ

ಈ ಚಿತ್ರದಲ್ಲಿ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಪೇಂದ್ರ ಅವರದ್ದೇ ನಿರ್ದೇಶನ ಚಿತ್ರಕ್ಕೆ ಇದೆ. ಜಿ.ಮನೋಹರನ್, ಕೆಪಿ ಶ್ರೀಕಾಂತ್ ಮತ್ತು ಭೂಮಿಕಾ ಗೊಂಡಾಲಿಯಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಚ್​ಸಿ ವೇಣುಗೋಪಾಲ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಚಿತ್ರದ ಹಾಡುಗಳು ಹಿಟ್ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:39 pm, Thu, 6 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​