ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್

|

Updated on: Mar 06, 2025 | 12:39 PM

ಉಪೇಂದ್ರ ನಟನೆಯ ಹಾಗೂ ನಿರ್ದೇಶನದ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿತು. ಈಗ ಒಟಿಟಿ ರಿಲೀಸ್ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಮಾರ್ಚ್ ಅಂತ್ಯಕ್ಕೆ ಜೀ5 ನಲ್ಲಿ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ, ಆದರೆ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.

ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್
ಉಪೇಂದ್ರ
Follow us on

ಉಪೇಂದ್ರ ನಟನೆಯ ಸಿನಿಮಾಗಳು ತಲೆಗೆ ಹುಳ ಬಿಡೋದು ಜಾಸ್ತಿ. ಅದೇ ರೀತಿ ಕಳೆದ ವರ್ಷ ಡಿಸೆಂಬರ್ 20ರಂದು ಥಿಯೇಟರ್​​ನಲ್ಲಿ ರಿಲೀಸ್ ಆದ ‘ಯುಐ’ ಸಿನಿಮಾ (UI Movie) ಸಾಕಷ್ಟು ಸದ್ದು ಮಾಡಿತು. ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಕಾದವರಿಗೆ ನಿರಾಸೆ ಉಂಟಾಗಿದೆ. ಈಗ ಕೊನೆಗೂ ಈ ವಿಚಾರದಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ ‘ಯುಐ’ ಒಟಿಟಿಯಲ್ಲಿ ಬರಲಿದೆ ಎನ್ನಲಾಗುತ್ತಿದೆ.

ಜಗತ್ತು ಯಾವ ರೀತಿ ಆಗಿದೆ ಹಾಗೂ ಮುಂದೆ ಯಾವ ರೀತಿ ಆಗಬಹುದು ಎಂಬುದರ ಝಲಕ್ ‘ಯುಐ’ನಲ್ಲಿ ಇತ್ತು. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡರು. ಈ ಸಿನಿಮಾ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಆದರೆ, ಸಿನಿಮಾ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈಗ ಈ ಬಗ್ಗೆ ವರದಿಗಳು ಹುಟ್ಟಿಕೊಂಡಿವೆ.

‘ಯುಐ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರ ಮಾರ್ಚ್ 30ರ ಸಮಯದಲ್ಲಿ ಜೀ5 ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಇಂಗ್ಲಿಷ್ ವೆಬ್​ಸೈಟ್​ಗಳಲ್ಲಿ ವರದಿ ಆಗಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಈ ಮೊದಲು ಕೂಡ ಇದೇ ರೀತಿಯ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ತಂಡ ಅಲ್ಲ ಗಳೆದಿತ್ತು.

ಇದನ್ನೂ ಓದಿ
ಉಪೇಂದ್ರ ಮೆಚ್ಚಿದ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ಮಾರ್ಚ್​ 6ಕ್ಕೆ ಬಿಡುಗಡೆ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
ಟೆಲಿವಿಷನ್ ಪ್ರೀಮೀಯರ್​ಗೆ ‘ಮ್ಯಾಕ್ಸ್’ ಹಾಗೂ ‘ಯುಐ’ ರೆಡಿ; TRP ಕ್ಲ್ಯಾಶ್

‘ಯುಐ’ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರವನ್ನು ಜೀ ಕನ್ನಡ ವಾಹಿನಿಯವರು ಅಧಿಕೃತವಾಗಿ ಹಂಚಿಕೊಂಡಿದ್ದರು. ಆದರೆ, ಈವರೆಗೆ ಸಿನಿಮಾ ಟಿವಿಯಲ್ಲಿ ಪ್ರಸಾರ ಕಂಡಿಲ್ಲ. ಯುಗಾದಿ ಸಂದರ್ಭದಲ್ಲಿ ‘ಯುಐ’ ಚಿತ್ರ ಟಿವಿಯಲ್ಲಿ ಪ್ರಸಾರ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ

ಈ ಚಿತ್ರದಲ್ಲಿ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಪೇಂದ್ರ ಅವರದ್ದೇ ನಿರ್ದೇಶನ ಚಿತ್ರಕ್ಕೆ ಇದೆ. ಜಿ.ಮನೋಹರನ್, ಕೆಪಿ ಶ್ರೀಕಾಂತ್ ಮತ್ತು ಭೂಮಿಕಾ ಗೊಂಡಾಲಿಯಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಚ್​ಸಿ ವೇಣುಗೋಪಾಲ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಚಿತ್ರದ ಹಾಡುಗಳು ಹಿಟ್ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:39 pm, Thu, 6 March 25