AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು

Bigg Boss OTT: ‘ಈ ಎಲಿಮಿನೇಷನ್​ನಿಂದ ನನಗೆ ಶಾಕ್​ ಆಗಿದೆ. ನನ್ನನ್ನು ಯಾಕೆ ಎಲಿಮಿನೇಟ್​ ಮಾಡಲಾಗಿದೆ ಎಂಬುದೇ ತಿಳಿಯುತ್ತಿಲ್ಲ. ಈಗಲೂ ನಾನು ಅಳುತ್ತಿದ್ದೇನೆ’ ಎಂದು ಊರ್ಫಿ ಜಾವೇದ್​ ಪ್ರತಿಕ್ರಿಯೆ ನೀಡಿದ್ದಾರೆ.

ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು
ಉರ್ಫಿ ಜಾವೇದ್
TV9 Web
| Edited By: |

Updated on: Aug 17, 2021 | 2:00 PM

Share

ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ನಡೆಸಿಕೊಡುತ್ತಿರುವ ‘ಬಿಗ್​ ಬಾಸ್​ ಓಟಿಟಿ’ (Bigg Boss OTT) ಕಾರ್ಯಕ್ರಮ ಸಿಕ್ಕಾಪಟ್ಟೆ ಹೈಪ್​ ಪಡೆದುಕೊಂಡಿದೆ. ಇದರಲ್ಲಿ ವಿವಾದಗಳೇ ಹೆಚ್ಚು ಸೌಂಡು ಮಾಡುತ್ತಿವೆ. ಆರು ವಾರಗಳ ಕಾಲ ಓಟಿಟಿಯಲ್ಲಿ ಪ್ರಸಾರವಾಗಲಿರುವ ಈ ಶೋನಲ್ಲೀಗ ಮೊದಲ ಎಲಿಮಿನೇಷನ್​ ನಡೆದಿದೆ. ನಟಿ ಊರ್ಫಿ ಜಾವೇದ್​ (Urfi Javed) ಅವರನ್ನು ಡೊಡ್ಮನೆಯಿಂದ ಹೊರಗೆ ಕಳಿಸಲಾಗಿದೆ. ಈ ಶೋನಲ್ಲಿ ಮುಂದುವರಿಯಬೇಕು ಎಂದು ಅವರು ಮಾಡಿದ ಎಲ್ಲ ಪ್ರಯತ್ನಗಳು ವ್ಯರ್ಥ ಆಗಿವೆ. ಕಣ್ಣೀರು ಹಾಕುತ್ತಲೇ ಅವರು ಬಿಗ್​ ಬಾಸ್​ನಿಂದ ಹೊರಬಂದಿದ್ದಾರೆ.

ಬಿಗ್​ ಬಾಸ್​ನಲ್ಲಿ ತಾವು ಇನ್ನಷ್ಟು ದಿನಗಳ ಕಾಲ ಮುಂದುವರಿಯುವ ಬಗ್ಗೆ ಊರ್ಫಿ ಜಾವೇದ್​ ಅವರಿಗೆ ಬಹಳ ಭರವಸೆ ಇತ್ತು. ಆದರೆ ಕೊನೇ ಕ್ಷಣದಲ್ಲಿ ಅವರ ನಂಬಿಕೆ ಹುಸಿ ಆಯಿತು. ಸ್ನೇಹಿತ ಜೀಶಾನ್​ ಖಾನ್​ ಜೊತೆ ಅವರ ಆಪ್ತವಾಗಿದ್ದರು. ಆದರೆ ಜೀಶಾನ್​ ಅವರಿಂದಲೇ ಊರ್ಫಿಗೆ ಬೆಂಬಲ ಸಿಗಲಿಲ್ಲ. ಹಾಗಾಗಿ ಅವರು ಎಲಿಮಿಮೇಟ್​ ಆಗಬೇಕಾಯಿತು. ಬಿಗ್​ ಬಾಸ್​ನಿಂದ ಹೊರ ಬರುವುದಕ್ಕೂ ಮುನ್ನ ಅವರು ಜೀಶಾನ್​ಗೆ ಹಿಗ್ಗಾಮುಗ್ಗ ಬೈಯ್ದು ಕೋಪ ತೀರಿಸಿಕೊಂಡರು.

‘ಈ ಎಲಿಮಿನೇಷನ್​ನಿಂದ ನನಗೆ ಶಾಕ್​ ಆಗಿದೆ. ನನ್ನನ್ನು ಯಾಕೆ ಎಲಿಮಿನೇಟ್​ ಮಾಡಲಾಗಿದೆ ಎಂಬುದೇ ತಿಳಿಯುತ್ತಿಲ್ಲ. ಎಲ್ಲರೂ ನನಗೆ ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಈಗಲೂ ನಾನು ಅಳುತ್ತಿದ್ದೇನೆ. ಎಲಿಮಿನೇಟ್​ ಆದಾಗಿನಿಂದ ಇಲ್ಲಿಯವರೆಗೆ ಅಳು ನಿಲ್ಲಿಸಿಲ್ಲ’ ಎಂದು ಮಾಧ್ಯಮಗಳಿಗೆ ಊರ್ಫಿ ಜಾವೇದ್​ ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್​ನಿಂದ ಹೊರಬಂದು ಅವರು ಎಲ್ಲರ ಮೇಲೂ ಸಿಟ್ಟು ಪ್ರದರ್ಶಿಸುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಾಗ ಅವರು ಕಸದ ಚೀಲವನ್ನೇ ಬಳಸಿಕೊಂಡು ಹೊಸ ಕಾಸ್ಟ್ಯೂಮ್​ ತಯಾರಿಸಿ, ಅದರಿಂದ ಮಾನ ಮುಚ್ಚಿಕೊಂಡಿದ್ದರು. ಆ ಬಟ್ಟೆ ತುಂಬ ಗ್ಲಾಮರಸ್​ ಆಗಿಯೂ ಕಾಣಿಸಿತ್ತು. ಊರ್ಫಿಯ ಪ್ರತಿಭೆ ಕಂಡು ಇನ್ನುಳಿದ ಸದಸ್ಯರೆಲ್ಲ ಮೆಚ್ಚುಗೆ ಸೂಚಿಸಿದ್ದರು. ಬಿಗ್​ ಬಾಸ್​ಗೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಊರ್ಫಿ ಇಷ್ಟೆಲ್ಲ ಕ್ರಿಯೇಟಿವಿಟಿ ತೋರಿಸಿದ್ದರು. ಮುಂದೆ ಅವರು ಏನೆಲ್ಲ ಮಾಡಬಹುದು ಎಂಬ ಕೌತುಕ ವೀಕ್ಷಕರಲ್ಲಿ ಮೂಡಿತ್ತು. ಆದರೆ ಬಹಳ ಬೇಗ ಊರ್ಫಿಗೆ ಅದೃಷ್ಟ ಕೈ ಕೊಟ್ಟಿದ್ದರಿಂದ ಅವರು ಎಲಿಮಿನೇಟ್​ ಆಗಬೇಕಾಯಿತು. ನೇಹಾ ಭಾಸಿನ್​, ರಿಧಿಮಾ ಪಂಡಿತ್​, ನಿಶಾಂತ್​ ಭಟ್​, ದಿವ್ಯಾ ಅಗರ್​ವಾಲ್​, ಶಮಿತಾ ಶೆಟ್ಟಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ನಡುವೆ ಪೈಪೋಟಿ ಮುಂದುವರಿದಿದೆ.

ಇದನ್ನೂ ಓದಿ:

ನೈತಿಕತೆ ಬಿಟ್ಟು ಮಹಿಳಾ ಸ್ಪರ್ಧಿಗೆ ಲಿಪ್​ ಕಿಸ್​ ಮಾಡಿದ ಗಾಯಕಿ; ಎತ್ತ ಸಾಗುತ್ತಿದೆ ಬಿಗ್​ ಬಾಸ್​?

ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ