ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು

Bigg Boss OTT: ‘ಈ ಎಲಿಮಿನೇಷನ್​ನಿಂದ ನನಗೆ ಶಾಕ್​ ಆಗಿದೆ. ನನ್ನನ್ನು ಯಾಕೆ ಎಲಿಮಿನೇಟ್​ ಮಾಡಲಾಗಿದೆ ಎಂಬುದೇ ತಿಳಿಯುತ್ತಿಲ್ಲ. ಈಗಲೂ ನಾನು ಅಳುತ್ತಿದ್ದೇನೆ’ ಎಂದು ಊರ್ಫಿ ಜಾವೇದ್​ ಪ್ರತಿಕ್ರಿಯೆ ನೀಡಿದ್ದಾರೆ.

ಕಸದ ಚೀಲವನ್ನೇ ಕಾಸ್ಟ್ಯೂಮ್​ ಮಾಡಿಕೊಂಡಿದ್ದ ನಟಿ ಊರ್ಫಿ ಬಿಗ್​ ಬಾಸ್​ನಿಂದ ಔಟ್​; ನಿಲ್ಲದ ಕಣ್ಣೀರು
ಉರ್ಫಿ ಜಾವೇದ್
Follow us
| Updated By: ಮದನ್​ ಕುಮಾರ್​

Updated on: Aug 17, 2021 | 2:00 PM

ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ನಡೆಸಿಕೊಡುತ್ತಿರುವ ‘ಬಿಗ್​ ಬಾಸ್​ ಓಟಿಟಿ’ (Bigg Boss OTT) ಕಾರ್ಯಕ್ರಮ ಸಿಕ್ಕಾಪಟ್ಟೆ ಹೈಪ್​ ಪಡೆದುಕೊಂಡಿದೆ. ಇದರಲ್ಲಿ ವಿವಾದಗಳೇ ಹೆಚ್ಚು ಸೌಂಡು ಮಾಡುತ್ತಿವೆ. ಆರು ವಾರಗಳ ಕಾಲ ಓಟಿಟಿಯಲ್ಲಿ ಪ್ರಸಾರವಾಗಲಿರುವ ಈ ಶೋನಲ್ಲೀಗ ಮೊದಲ ಎಲಿಮಿನೇಷನ್​ ನಡೆದಿದೆ. ನಟಿ ಊರ್ಫಿ ಜಾವೇದ್​ (Urfi Javed) ಅವರನ್ನು ಡೊಡ್ಮನೆಯಿಂದ ಹೊರಗೆ ಕಳಿಸಲಾಗಿದೆ. ಈ ಶೋನಲ್ಲಿ ಮುಂದುವರಿಯಬೇಕು ಎಂದು ಅವರು ಮಾಡಿದ ಎಲ್ಲ ಪ್ರಯತ್ನಗಳು ವ್ಯರ್ಥ ಆಗಿವೆ. ಕಣ್ಣೀರು ಹಾಕುತ್ತಲೇ ಅವರು ಬಿಗ್​ ಬಾಸ್​ನಿಂದ ಹೊರಬಂದಿದ್ದಾರೆ.

ಬಿಗ್​ ಬಾಸ್​ನಲ್ಲಿ ತಾವು ಇನ್ನಷ್ಟು ದಿನಗಳ ಕಾಲ ಮುಂದುವರಿಯುವ ಬಗ್ಗೆ ಊರ್ಫಿ ಜಾವೇದ್​ ಅವರಿಗೆ ಬಹಳ ಭರವಸೆ ಇತ್ತು. ಆದರೆ ಕೊನೇ ಕ್ಷಣದಲ್ಲಿ ಅವರ ನಂಬಿಕೆ ಹುಸಿ ಆಯಿತು. ಸ್ನೇಹಿತ ಜೀಶಾನ್​ ಖಾನ್​ ಜೊತೆ ಅವರ ಆಪ್ತವಾಗಿದ್ದರು. ಆದರೆ ಜೀಶಾನ್​ ಅವರಿಂದಲೇ ಊರ್ಫಿಗೆ ಬೆಂಬಲ ಸಿಗಲಿಲ್ಲ. ಹಾಗಾಗಿ ಅವರು ಎಲಿಮಿಮೇಟ್​ ಆಗಬೇಕಾಯಿತು. ಬಿಗ್​ ಬಾಸ್​ನಿಂದ ಹೊರ ಬರುವುದಕ್ಕೂ ಮುನ್ನ ಅವರು ಜೀಶಾನ್​ಗೆ ಹಿಗ್ಗಾಮುಗ್ಗ ಬೈಯ್ದು ಕೋಪ ತೀರಿಸಿಕೊಂಡರು.

‘ಈ ಎಲಿಮಿನೇಷನ್​ನಿಂದ ನನಗೆ ಶಾಕ್​ ಆಗಿದೆ. ನನ್ನನ್ನು ಯಾಕೆ ಎಲಿಮಿನೇಟ್​ ಮಾಡಲಾಗಿದೆ ಎಂಬುದೇ ತಿಳಿಯುತ್ತಿಲ್ಲ. ಎಲ್ಲರೂ ನನಗೆ ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಈಗಲೂ ನಾನು ಅಳುತ್ತಿದ್ದೇನೆ. ಎಲಿಮಿನೇಟ್​ ಆದಾಗಿನಿಂದ ಇಲ್ಲಿಯವರೆಗೆ ಅಳು ನಿಲ್ಲಿಸಿಲ್ಲ’ ಎಂದು ಮಾಧ್ಯಮಗಳಿಗೆ ಊರ್ಫಿ ಜಾವೇದ್​ ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್​ನಿಂದ ಹೊರಬಂದು ಅವರು ಎಲ್ಲರ ಮೇಲೂ ಸಿಟ್ಟು ಪ್ರದರ್ಶಿಸುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಾಗ ಅವರು ಕಸದ ಚೀಲವನ್ನೇ ಬಳಸಿಕೊಂಡು ಹೊಸ ಕಾಸ್ಟ್ಯೂಮ್​ ತಯಾರಿಸಿ, ಅದರಿಂದ ಮಾನ ಮುಚ್ಚಿಕೊಂಡಿದ್ದರು. ಆ ಬಟ್ಟೆ ತುಂಬ ಗ್ಲಾಮರಸ್​ ಆಗಿಯೂ ಕಾಣಿಸಿತ್ತು. ಊರ್ಫಿಯ ಪ್ರತಿಭೆ ಕಂಡು ಇನ್ನುಳಿದ ಸದಸ್ಯರೆಲ್ಲ ಮೆಚ್ಚುಗೆ ಸೂಚಿಸಿದ್ದರು. ಬಿಗ್​ ಬಾಸ್​ಗೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಊರ್ಫಿ ಇಷ್ಟೆಲ್ಲ ಕ್ರಿಯೇಟಿವಿಟಿ ತೋರಿಸಿದ್ದರು. ಮುಂದೆ ಅವರು ಏನೆಲ್ಲ ಮಾಡಬಹುದು ಎಂಬ ಕೌತುಕ ವೀಕ್ಷಕರಲ್ಲಿ ಮೂಡಿತ್ತು. ಆದರೆ ಬಹಳ ಬೇಗ ಊರ್ಫಿಗೆ ಅದೃಷ್ಟ ಕೈ ಕೊಟ್ಟಿದ್ದರಿಂದ ಅವರು ಎಲಿಮಿನೇಟ್​ ಆಗಬೇಕಾಯಿತು. ನೇಹಾ ಭಾಸಿನ್​, ರಿಧಿಮಾ ಪಂಡಿತ್​, ನಿಶಾಂತ್​ ಭಟ್​, ದಿವ್ಯಾ ಅಗರ್​ವಾಲ್​, ಶಮಿತಾ ಶೆಟ್ಟಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ನಡುವೆ ಪೈಪೋಟಿ ಮುಂದುವರಿದಿದೆ.

ಇದನ್ನೂ ಓದಿ:

ನೈತಿಕತೆ ಬಿಟ್ಟು ಮಹಿಳಾ ಸ್ಪರ್ಧಿಗೆ ಲಿಪ್​ ಕಿಸ್​ ಮಾಡಿದ ಗಾಯಕಿ; ಎತ್ತ ಸಾಗುತ್ತಿದೆ ಬಿಗ್​ ಬಾಸ್​?

ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ