AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಚೀಲದಿಂದ ಮಾನ ಮುಚ್ಚಿಕೊಂಡ ನಟಿ; ಬಿಗ್​ ಬಾಸ್​ ಮನೆಯಲ್ಲಿ ಯಾಕಿಂಥ ಪರಿಸ್ಥಿತಿ?

ಬಿಗ್​ ಬಾಸ್​ ಓಟಿಟಿ ಕೇವಲ ಆರು ವಾರಗಳ ಕಾಲ ನಡೆಯಲಿದೆ. ಹಾಗಾಗಿ ಇಲ್ಲಿ ಸ್ಪರ್ಧಿಗಳಿಗೆ ಗುರುತಿಸಿಕೊಳ್ಳಲು ಹೆಚ್ಚು ಸಮಯಾವಕಾಶ ಇಲ್ಲ. ಇರುವ ಸಮಯದಲ್ಲೇ ಏನಾದರೂ ಮಾಡಿ ಎಲಿಮಿನೇಷನ್​ನಿಂದ ಸೇವ್​ ಆಗಬೇಕಿದೆ.

ಕಸದ ಚೀಲದಿಂದ ಮಾನ ಮುಚ್ಚಿಕೊಂಡ ನಟಿ; ಬಿಗ್​ ಬಾಸ್​ ಮನೆಯಲ್ಲಿ ಯಾಕಿಂಥ ಪರಿಸ್ಥಿತಿ?
ಕಸದ ಚೀಲದಿಂದ ಮಾನ ಮುಚ್ಚಿಕೊಂಡ ನಟಿ; ಬಿಗ್​ ಬಾಸ್​ ಮನೆಯಲ್ಲಿ ಯಾಕಿಂಥ ಪರಿಸ್ಥಿತಿ?
TV9 Web
| Updated By: ಮದನ್​ ಕುಮಾರ್​|

Updated on:Aug 15, 2021 | 3:30 PM

Share

ಇಷ್ಟು ದಿನ ವೀಕ್ಷಕರು ನೋಡಿದ ಬಿಗ್​ ಬಾಸ್​ ಒಂದು ರೀತಿ ಇತ್ತು. ಆದರೆ ಈಗ ನೋಡುತ್ತಿರುವ ಬಿಗ್​ ಬಾಸ್​ ಬೇರೆ ರೀತಿ ಇದೆ. ಅಂದರೆ, ವೂಟ್​ನಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಓಟಿಟಿ’ (Bigg Boss OTT) ಕಾರ್ಯಕ್ರಮ ಸಿಕ್ಕಾಪಟ್ಟೆ ಭಿನ್ನವಾಗಿ ಮೂಡಿಬರುತ್ತಿದೆ. ಓಟಿಟಿ ಎಂದರೆ ಅಲ್ಲಿ ಸದ್ಯಕ್ಕೆ ಸೆನ್ಸಾರ್​ನ ಹಂಗಿಲ್ಲ. ಹಾಗಾಗಿ ಬಿಗ್​ ಬಾಸ್​ ಸ್ಪರ್ಧಿಗಳು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಹಿಂದೆಂದಿಗಿಂತಲೂ ಹೆಚ್ಚು ಹಾಟ್​ ಆಗಿ ಈ ಶೋ ಮೂಡಿಬರುತ್ತಿದೆ. ಅನೇಕ ವಿವಾದಾತ್ಮಕ ವ್ಯಕ್ತಿಗಳೇ ದೊಡ್ಮನೆಗೆ ಕಾಲಿಟ್ಟಿರುವುದರಿಂದ ಹಲವು ಟ್ವಿಸ್ಟ್​ಗಳು ಸಿಗುತ್ತಿವೆ. ಇತ್ತೀಚೆಗೆ ನಟಿ ಊರ್ಫಿ ಜಾವೇದ್​ (Urfi Javed) ತಮ್ಮ ವಿಚಿತ್ರ ಕಾಸ್ಟ್ಯೂಮ್​ ಮೂಲಕ ಗಮನ ಸೆಳೆದರು.

ತಮ್ಮ ಬಟ್ಟೆಗಳನ್ನು ನಾವೇ ಡಿಸೈನ್​ ಮಾಡಿಕೊಳ್ಳುವ ಮೂಲಕ ಊರ್ಫಿ ಜಾವೇದ್​ ಅವರು ಫೇಮಸ್​ ಆಗಿದ್ದರು. ಬಿಗ್​ ಬಾಸ್​ ಮನೆಯ ಒಳಗೂ ಅವರು ಅದನ್ನು ಮುಂದುವರಿಸಿದ್ದಾರೆ. ಆದರೆ ದೊಡ್ಮನೆಯೊಳಗೆ ತಮ್ಮ ಇಷ್ಟದ ಪ್ರಕಾರ ಕಾಸ್ಟ್ಯೂಮ್​ ಡಿಸೈನ್​ ಮಾಡಿಕೊಳ್ಳಲು ಅವರಿಗೆ ಎಲ್ಲ ಪರಿಕರಗಳು ಸಿಕ್ಕಿಲ್ಲ. ಹಾಗಾಗಿ ಇರುವ ಕೆಲವು ವಸ್ತುಗಳನ್ನೇ ಬಳಸಿಕೊಂಡು ಅವರು ತಮ್ಮ ಕ್ರಿಯೇಟಿವಿಟಿ ತೋರಿಸುತ್ತಿದ್ದಾರೆ. ಅಚ್ಚರಿ ಎಂದರೆ ಅವರು ಕಸದ ಚೀಲವನ್ನು ಬಳಸಿಕೊಂಡು ತಮ್ಮ ಹೊಸ ಕಾಸ್ಟ್ಯೂಮ್ ವಿನ್ಯಾಸ ಮಾಡಿದ್ದಾರೆ.

ಕಸವನ್ನು ಹಾಕಲು ಕಪ್ಪು ಬಣ್ಣ ಪ್ಲಾಸಿಕ್​ ಕವರ್​ ಬಳಸಲಾಗುತ್ತದೆ. ಅದನ್ನೇ ಇಟ್ಟುಕೊಂಡು ಹೊಸ ಬಗೆಯಲ್ಲಿ ಊರ್ಫಿ ಜಾವೇದ್​ ಅವರು ಕಾಸ್ಟ್ಯೂಮ್​ ವಿನ್ಯಾಸ ಮಾಡಿದ್ದೂ ಅಲ್ಲದೆ, ಅದನ್ನು ಧರಿಸಿಕೊಂಡು ವಿಂಚಿದ್ದಾರೆ. ಆ ಬಟ್ಟೆ ತುಂಬ ಗ್ಲಾಮರಸ್​ ಆಗಿಯೂ ಕಾಣಿಸಿತು ಎಂಬುದು ವಿಶೇಷ. ಊರ್ಫಿಯ ಪ್ರತಿಭೆ ಕಂಡು ಇನ್ನುಳಿದ ಸದಸ್ಯರೆಲ್ಲ ಮೆಚ್ಚುಗೆ ಸೂಚಿಸಿದ್ದಾರೆ. ಬಿಗ್​ ಬಾಸ್​ಗೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಊರ್ಫಿ ಇಷ್ಟೆಲ್ಲ ಕ್ರಿಯೇಟಿವಿಟಿ ತೋರಿಸುತ್ತಿದ್ದಾರೆ. ಮುಂದೆ ಅವರು ಏನೆಲ್ಲ ಮಾಡಬಹುದು ಎಂಬ ಕೌತುಕ ಮೂಡಿದೆ.

View this post on Instagram

A post shared by Voot (@voot)

ಬಿಗ್​ ಬಾಸ್​ ಓಟಿಟಿ ಕೇವಲ ಆರು ವಾರಗಳ ಕಾಲ ನಡೆಯಲಿದೆ. ಹಾಗಾಗಿ ಇಲ್ಲಿ ಸ್ಪರ್ಧಿಗಳಿಗೆ ಗುರುತಿಸಿಕೊಳ್ಳಲು ಹೆಚ್ಚು ಸಮಯಾವಕಾಶ ಇಲ್ಲ. ಇರುವ ಸಮಯದಲ್ಲೇ ಏನಾದರೂ ಮಾಡಿ ಎಲಿಮಿನೇಷನ್​ನಿಂದ ಸೇವ್​ ಆಗಬೇಕಿದೆ. ಇತ್ತೀಚೆಗೆ ಗಾಯಕಿ ನೇಹಾ ಭಾಸಿನ್​ ಅವರು ನಟಿ ರಿಧಿಮಾ ಪಂಡಿತ್​ ತುಟಿಗೆ ಮುತ್ತಿಟ್ಟು ಹೈಪ್ ಸೃಷ್ಟಿಸಿದ್ದರು. ಈಗ ಕಸದ ಬ್ಯಾಗ್​ನಿಂದ ಊರ್ಫಿ ಜಾವೇದ್​ ಕಾಸ್ಟ್ಯೂಮ್​ ಮಾಡಿ ಹಾಕಿಕೊಂಡಿರುವುದು ಚರ್ಚೆ ಆಗುತ್ತಿದೆ.

ಇದನ್ನೂ ಓದಿ:

‘ಒಮ್ಮೆ ಅವನು ನನ್ನ ಜತೆ ಲಿಮಿಟ್​ ಕ್ರಾಸ್​ ಮಾಡಿದ್ದ’; ರಹಸ್ಯ ತೆರೆದಿಟ್ಟ ರಾಜ್​ ಕುಂದ್ರಾ ನಾದಿನಿ ಶಮಿತಾ ಶೆಟ್ಟಿ

ನೈತಿಕತೆ ಬಿಟ್ಟು ಮಹಿಳಾ ಸ್ಪರ್ಧಿಗೆ ಲಿಪ್​ ಕಿಸ್​ ಮಾಡಿದ ಗಾಯಕಿ; ಎತ್ತ ಸಾಗುತ್ತಿದೆ ಬಿಗ್​ ಬಾಸ್​?

Published On - 3:29 pm, Sun, 15 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ