AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OTT Movies This Week: ಈ ವಾರ ಒಟಿಟಿಯಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ

Varisu | Waltair Veerayya: ಚಿರಂಜೀವಿಯ ‘ವಾಲ್ತೇರು ವೀರಯ್ಯ’, ನಂದಮೂರಿ ಬಾಲಕೃಷ್ಣ ನಟನೆಯ ‘ವೀರ ಸಿಂಹ ರೆಡ್ಡಿ’, ವಿಜಯ್ ನಟನೆಯ ‘ವಾರಿಸು’ ಇನ್ನಿತರ ಸಿನಿಮಾಗಳು ಈ ವಾರ ಒಟಿಟಿಗೆ ಬರುತ್ತಿವೆ.

OTT Movies This Week: ಈ ವಾರ ಒಟಿಟಿಯಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ
ದಳಪತಿ ವಿಜಯ್​, ಚಿರಂಜೀವಿ, ಬಾಲಯ್ಯ
ಮದನ್​ ಕುಮಾರ್​
|

Updated on: Feb 22, 2023 | 6:46 PM

Share

ಚಿತ್ರಮಂದಿರಗಳಿಗೆ ಪ್ರಬಲ ಸ್ಪರ್ಧೆ ಒಡ್ಡುತ್ತಾ ಗಟ್ಟಿನೆಲೆ ಕಂಡುಕೊಳ್ಳುತ್ತಿರುವ ಒಟಿಟಿ (OTT) ಸಂಸ್ಥೆಗಳು ಪ್ರೇಕ್ಷಕನಿಗೆ ಮನರಂಜನೆಯನ್ನು, ಸಿನಿಮಾ ರಂಗಕ್ಕೆ ಹೊಸದೊಂದು ಮಾರುಕಟ್ಟೆ ಅವಕಾಶವನ್ನು ಏಕಕಾಲದಲ್ಲಿ ಕಲ್ಪಿಸಿವೆ. ಪ್ರತಿ ಶುಕ್ರವಾರ ಯಾವ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿವೆ ಎಂದು ಸಿನಿ ಪ್ರೇಮಿಗಳು ಗಮನಿಸುವಂತೆಯೇ, ಈ ವಾರ ಒಟಿಟಿಗೆ ಯಾವ ಸಿನಿಮಾಗಳು ಬರುತ್ತಿವೆ ಎಂದೂ ಸಹ ಗಮನಿಸುತ್ತಿದ್ದಾರೆ. ಅಂತೆಯೇ ಈ ವಾರವೂ ಸಿನಿ ಪ್ರೇಮಿಗಳಿಗೆ ನಿರಾಸೆ ಮೂಡಿಸದ ಒಟಿಟಿ, ಕೆಲವು ದೊಡ್ಡ ಸ್ಟಾರ್ ನಟರ ಸಿನಿಮಾಗಳನ್ನು ಸ್ಟ್ರೀಮ್ ಮಾಡಲು ಸಿದ್ಧವಾಗಿದ್ದು, ಅದರಲ್ಲಿಯೂ ಈ ವಾರ ದಕ್ಷಿಣ ಭಾರತದ ಕೆಲವು ದೊಡ್ಡ ನಟರ ಹಿಟ್ ಸಿನಿಮಾಗಳು ವೀಕ್ಷಣೆಗೆ ಲಭ್ಯವಾಗುತ್ತಿವೆ. ಚಿರಂಜೀವಿಯ ‘ವಾಲ್ತೇರು ವೀರಯ್ಯ’ (Waltair Veerayya), ನಂದಮೂರಿ ಬಾಲಕೃಷ್ಣ ನಟನೆಯ ‘ವೀರ ಸಿಂಹ ರೆಡ್ಡಿ’, ದಳಪತಿ ವಿಜಯ್ ನಟನೆಯ ‘ವಾರಿಸು’ (Varisu) ಇನ್ನಿತರ ಸಿನಿಮಾಗಳು ಈ ವಾರ ಒಟಿಟಿಗೆ ಬರುತ್ತಿವೆ.

ವಾಲ್ತೇರು ವೀರಯ್ಯ

ಜನವರಿ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಅಬ್ಬರಿಸಿದ್ದ ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟನೆಯ ‘ವಾಲ್ತೇರು ವೀರಯ್ಯ’ ಸಿನಿಮಾ ಫೆಬ್ರವರಿ 27 ರಂದು ನೆಟ್ ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ಚಿರಂಜೀವಿ ಜೊತೆಗೆ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದರು, ಮಾಸ್ ಮಹಾರಾಜ ರವಿತೇಜ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಒಟಿಟಿಯಲ್ಲಿ ಪ್ರಸಾರವಾಗಲಿದೆ ಹನ್ಸಿಕಾ ಮದುವೆ ಝಲಕ್; ಫಸ್ಟ್ ಪೋಸ್ಟರ್ ರಿಲೀಸ್​ 

ಇದನ್ನೂ ಓದಿ
Image
Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
Image
ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ವೀರ ಸಿಂಹ ರೆಡ್ಡಿ

ನಂದಮೂರಿ ಬಾಲಕೃಷ್ಣ ನಟಿಸಿರುವ ‘ವೀರ ಸಿಂಹ ರೆಡ್ಡಿ’ ಸಿನಿಮಾ ಸಹ ಇದೇ ವಾರ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಚಿರಂಜೀವಿಯ ‘ವಾಲ್ತೇರು ವೀರಯ್ಯ’ಗೆ ಎದುರಾಗಿ ಜನವರಿ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದ್ದ ಈ ಸಿನಿಮಾ ಇದೀಗ ಫೆಬ್ರವರಿ 23 ರಂದು ‘ಡಿಸ್ನಿ ಹಾಟ್ ಸ್ಟಾರ್’ನಲ್ಲಿ ತೆರೆ ಕಾಣುತ್ತಿದೆ. ಈ ಸಿನಿಮಾದಲ್ಲಿಯೂ ಶ್ರುತಿ ಹಾಸನ್ ಅವರೇ ನಾಯಕಿ. ಕನ್ನಡ ಚಿತ್ರರಂಗದ ದುನಿಯಾ ವಿಜಯ್ ವಿಲನ್.

ಇದನ್ನೂ ಓದಿ: Veera Simha Reddy Review: ಬಾಲಯ್ಯ ಸಿನಿಮಾದಲ್ಲಿ ಅಲ್ಪ ಸ್ವಲ್ಪ ಎಮೋಷನ್​; ಮಿಕ್ಕಿದ್ದೆಲ್ಲವೂ ಆ್ಯಕ್ಷನ್​

ವಾರಿಸು

ಬಿಡುಗಡೆ ಸಮಯದಲ್ಲಿ ಭಾರಿ ಹವಾ ಎಬ್ಬಿಸಿದ್ದ ತಮಿಳು ನಟ ವಿಜಯ್ ಅವರ ಇತ್ತೀಚೆಗಿನ ಸಿನಿಮಾ ‘ವಾರಿಸು’ ಸಹ ಇದೇ ವಾರ ಒಟಿಟಿಗೆ ಬರುತ್ತಿದೆ. ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ ಈ ಸಿನಿಮಾ ಜನವರಿ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಈ ಸಿನಿಮಾವು ಇಂದೇ ಅಂದರೆ ಫೆಬ್ರವರಿ 22ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಕಂಡಿದೆ.

ಇದನ್ನೂ ಓದಿ: ‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ

ಮೈಖಲ್

ಯುವನಟ ಸಂದೀಪ್ ಕೃಷ್ಣನ್ ನಟಿಸಿದ್ದ ‘ಮೈಖಲ್’ ಸಿನಿಮಾ ಸಹ ಇದೇ ವಾರ ಒಟಿಟಿಗೆ ಲಗ್ಗೆ ಇಟ್ಟಿದೆ. ಭಾರಿ ನಿರೀಕ್ಷೆ ಮೂಡಿಸಿ ಫೆಬ್ರವರಿ 03ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ತಮಿಳು ಸಿನಿಮಾ ಹೆಚ್ಚೇನೂ ಗಮನ ಸೆಳೆಯದೆ ಕೇವಲ ಎರಡು ವಾರಕ್ಕೆ ಒಟಿಟಿಗೆ ಬಂದಿದೆ. ಈ ಸಿನಿಮಾವು ‘ಆಹಾ’ ಒಟಿಟಿಯಲ್ಲಿ ಫೆಬ್ರವರಿ 24ರಿಂದ ಸ್ಟ್ರೀಂ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ