AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಿಸು’, ‘ತುನಿವು’ ಒಟಿಟಿ ರಿಲೀಸ್ ದಿನಾಂಕ ರಿವೀಲ್​; ಇಲ್ಲಿದೆ ಮಾಹಿತಿ

‘ತುನಿವು’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಮೊದಲೇ ಒಟಿಟಿಯತ್ತ ಹೆಜ್ಜೆ ಇಟ್ಟರೆ ‘ವಾರಿಸು’ 40 ದಿನಗಳ ಬಳಿಕ ಒಟಿಟಿಗೆ ಕಾಲಿಡಲಿದೆ.

‘ವಾರಿಸು’, ‘ತುನಿವು’ ಒಟಿಟಿ ರಿಲೀಸ್ ದಿನಾಂಕ ರಿವೀಲ್​; ಇಲ್ಲಿದೆ ಮಾಹಿತಿ
ದಳಪತಿ ವಿಜಯ್-ಅಜಿತ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Feb 03, 2023 | 2:48 PM

Share

ಸಂಕ್ರಾಂತಿ ಹಬ್ಬಕ್ಕೆ ದಳಪತಿ ವಿಜಯ್ (Thalapathy Vijay) ನಟನೆಯ ‘ವಾರಿಸು’ ಸಿನಿಮಾ ಹಾಗೂ ಅಜಿತ್ ಕುಮಾರ್ ನಟನೆಯ ‘ತುನಿವು’ ಸಿನಿಮಾಗಳು ತೆರೆಗೆ ಬಂದವು. ಎರಡೂ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿವೆ. ಈ ಎರಡೂ ಚಿತ್ರಗಳು ತಮಿಳುನಾಡಿನ ಹಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿವೆ. ಈಗ ಈ ಚಿತ್ರಗಳು ಒಟಿಟಿಗೆ ಕಾಲಿಡೋಕೆ ರೆಡಿ ಆಗಿವೆ. ತುನಿವು’ ಸಿನಿಮಾ (Thunivu Movie) ರಿಲೀಸ್ ಆಗಿ ಒಂದು ತಿಂಗಳು ಮೊದಲೇ ಒಟಿಟಿಯತ್ತ ಹೆಜ್ಜೆ ಇಟ್ಟರೆ ‘ವಾರಿಸು’ 40 ದಿನಗಳ ಬಳಿಕ ಒಟಿಟಿಗೆ ಕಾಲಿಡಲಿದೆ.

ಫೆಬ್ರವರಿ 8ಕ್ಕೆ ‘ತುನಿವು’

ಅಜಿತ್ ಕುಮಾರ್ ಹಾಗೂ ಎಚ್​. ವಿನೋದ್ ಕಾಂಬಿನೇಷನ್​ನಲ್ಲಿ ‘ತುನಿವು’ ಸಿನಿಮಾ ಮೂಡಿಬಂತು. ಇವರ ಕಾಂಬಿನೇಷನ್​ನಲ್ಲಿ ಮೂಡಿಬಂದ ಮೂರನೇ ಚಿತ್ರ ಇದಾಗಿದೆ. ‘ನೇರ್ಕೊಂಡ ಪಾರ್ವೈ’, ‘ವಲಿಮೈ’ ಹಾಗೂ ‘ತುನಿವು’ ಚಿತ್ರಗಳು ಇವರ ಕಾಂಬಿನೇಷನ್​ನಲ್ಲಿ ಮೂಡಿ ಬಂದಿವೆ. ‘ತುನಿವು’ ಚಿತ್ರದಲ್ಲಿ ಮಂಜು ವಾರಿಯರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಫೆಬ್ರವರಿ 8ಕ್ಕೆ ಒಟಿಟಿಗೆ ಕಾಲಿಡುತ್ತಿರುವ ಬಗ್ಗೆ ನೆಟ್​ಫ್ಲಿಕ್ಸ್​ ತನ್ನ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಪ್ರಸಾರ ಕಾಣುತ್ತಿದೆ.

ವಾರಿಸು ಯಾವಾಗ?

‘ವಾರಿಸು’ ಸಿನಿಮಾ ಕೂಡ ಜನವರಿ 11ರಂದು ತೆರೆಗೆ ಬಂದಿತ್ತು. ಈ ಚಿತ್ರ ಸುಮಾರು 40 ದಿನಗಳ ಬಳಿಕ ಅಂದರೆ ಫೆಬ್ರವರಿ 22ರಂದು ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗುತ್ತಿದೆ. ‘ವಾರಿಸು’ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದರು. ಪಕ್ಕಾ ಫ್ಯಾಮಿಲಿ ಎಂಟರ್​ಟೇನ್ ಮಾದರಿಯಲ್ಲಿ ಸಿನಿಮಾ ಮೂಡಿ ಬಂದಿತ್ತು.

ಇದನ್ನೂ ಓದಿ
Image
ಪೊಲೀಸ್ ಅಧಿಕಾರಿಯಾಗಿ ವಿಜಯ್ ದೇವರಕೊಂಡ ಕಂಬ್ಯಾಕ್; ಖ್ಯಾತ ನಿರ್ದೇಶಕನ ಜತೆ ಸಿನಿಮಾ
Image
Sapthami Gowda: ಬಾಲಿವುಡ್​ಗೆ ಕಾಲಿಟ್ಟ ಸಪ್ತಮಿ ಗೌಡ; ವಿವೇಕ್​ ಅಗ್ನಿಹೋತ್ರಿಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದಲ್ಲಿ ‘ಕಾಂತಾರ’ ನಟಿ
Image
ಬಾಕ್ಸ್ ಆಫೀಸ್​​ನಲ್ಲಿ ‘ತುನಿವು’ ಚಿತ್ರ ಹಿಂದಿಕ್ಕಿದ ವಿಜಯ್ ಸಿನಿಮಾ ‘ವಾರಿಸು’

ಉಳಿದ ಚಿತ್ರಗಳು ಯಾವಾಗ?

ಸಂಕ್ರಾಂತಿ ಸಮಯದಲ್ಲಿ ತೆಲುಗಿನಲ್ಲಿ ‘ವೀರ ಸಿಂಹ ರೆಡ್ಡಿ’ ಹಾಗೂ ‘ವಾಲ್ತೇರು ವೀರಯ್ಯ’ ಚಿತ್ರಗಳು ತೆರೆಗೆ ಬಂದಿದ್ದವು. ಎರಡೂ ಚಿತ್ರಗಳನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಈ ಚಿತ್ರಗಳು ಒಳ್ಳೆಯ ಕಮಾಯಿ ಮಾಡಿವೆ. ಇವುಗಳ ಒಟಿಟಿ ರಿಲೀಸ್ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ