AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss OTT: ‘ಬಿಗ್ ಬಾಸ್​ ಒಟಿಟಿ’ಗೆ ವಾಸುಕಿ ವೈಭವ್ ಎಂಟ್ರಿ; ಮಾಜಿ ಸ್ಪರ್ಧಿ ಕಂಡು ಫ್ಯಾನ್ಸ್ ಖುಷ್

2019ರಲ್ಲಿ ಪ್ರಸಾರ ಕಂಡ ‘ಬಿಗ್ ಬಾಸ್ ಕನ್ನಡ 7’ರಲ್ಲಿ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು ವಾಸುಕಿ. ಅವರು ಮನೆಯಲ್ಲಿದ್ದಷ್ಟು ದಿನ ಎಲ್ಲರನ್ನೂ ರಂಜಿಸಿದ್ದರು. ಸಾಕಷ್ಟು ಹಾಡುಗಳನ್ನು ಹಾಡಿ ಗಮನ ಸೆಳೆದಿದ್ದರು.

Bigg Boss OTT: ‘ಬಿಗ್ ಬಾಸ್​ ಒಟಿಟಿ’ಗೆ ವಾಸುಕಿ ವೈಭವ್ ಎಂಟ್ರಿ; ಮಾಜಿ ಸ್ಪರ್ಧಿ ಕಂಡು ಫ್ಯಾನ್ಸ್ ಖುಷ್
ವಾಸುಕಿ-ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 05, 2022 | 7:13 PM

Share

‘ಬಿಗ್ ಬಾಸ್ ಒಟಿಟಿ’ (Bigg Boss OTT) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಆಗಸ್ಟ್ 6ರಿಂದ ‘ಬಿಗ್ ಬಾಸ್’ ಒಟಿಟಿ ಸೀಸನ್ ಆರಂಭ ಆಗುತ್ತಿದೆ. ಈ ವಾರ ಬಿಗ್ ಬಾಸ್ ಮನೆಗೆ ಯಾರೆಲ್ಲ ಸ್ಪರ್ಧಿಗಳಾಗಿ ಬರುತ್ತಾರೆ ಎಂಬ ಕುತೂಹಲ ಮೂಡಿದೆ. ಅದಕ್ಕೂ ಮೊದಲು ದೊಡ್ಮನೆಗೆ ಸಂಗೀತ ನಿರ್ದೇಶಕ, ಮಾಜಿ ಬಿಗ್ ಬಾಸ್ ಸ್ಪರ್ಧಿ ವಾಸುಕಿ ವೈಭವ್ (Vasuki Vaibhav) ಎಂಟ್ರಿ ಕೊಟ್ಟಿದ್ದಾರೆ. ಈ ಪ್ರೋಮೋವನ್ನು ವೂಟ್​ ಆ್ಯಪ್​ನಲ್ಲಿ ಹಂಚಿಕೊಳ್ಳಲಾಗಿದೆ. ಮಾಜಿ ಸ್ಪರ್ಧಿಗೆ ಇಲ್ಲೇನು ಕೆಲಸ ಎಂದು ವೀಕ್ಷಕರು ತಲೆಕೆಡಿಸಿಕೊಂಡಿದ್ದಾರೆ.

2019ರಲ್ಲಿ ಪ್ರಸಾರ ಕಂಡ ‘ಬಿಗ್ ಬಾಸ್ ಕನ್ನಡ 7’ರಲ್ಲಿ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು ವಾಸುಕಿ. ಅವರು ಮನೆಯಲ್ಲಿದ್ದಷ್ಟು ದಿನ ಎಲ್ಲರನ್ನೂ ರಂಜಿಸಿದ್ದರು. ಸಾಕಷ್ಟು ಹಾಡುಗಳನ್ನು ಹಾಡಿ ಗಮನ ಸೆಳೆದಿದ್ದರು. ಅವರು ದೊಡ್ಮನೆಯಲ್ಲಿ ಬರೆದ ‘ಮನಸ್ಸಿಂದ ಯಾರೂನು ಕೆಟ್ಟವರಲ್ಲ..’ ಹಾಡು ಸಾಕಷ್ಟು ಫೇಮಸ್ ಆಯಿತು. ಆ ಸೀಸನ್​ನಲ್ಲಿ ಅವರು ಎರಡನೇ ರನ್ನರ್ ಅಪ್ ಆದರು. ಬಿಗ್ ಬಾಸ್​ನಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಈಗ ಅವರು ಮತ್ತೆ ಮನೆ ಒಳಗೆ ಬಂದಿದ್ದಾರೆ!

‘ಬಿಗ್ ಬಾಸ್’ ಮನೆಯನ್ನು ರಿವೀಲ್ ಮಾಡುವ ಉದ್ದೇಶದಿಂದ ವೂಟ್ ಆ್ಯಪ್​ನಲ್ಲಿ ಹೊಸ ವಿಡಿಯೋ ಹಂಚಿಕೊಳ್ಳಲಾಗಿದೆ. ಕಿಚ್ಚ ಸುದೀಪ್ ಹಾಗೂ ವಾಸುಕಿ ವೈಭವ್ ಅವರು ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಇಡೀ ಮನೆಯ ಜಾಗ ಯಾವಾಗ ಯಾವ ರೀತಿಯಲ್ಲಿ ಬಳಕೆ ಆಗುತ್ತದೆ ಎಂಬುದನ್ನು ವಾಸುಕಿ ವೈಭವ್ ಅವರು ವಿವರಿಸಿದ್ದಾರೆ. ಈ ಮೂಲಕ ಸುದೀಪ್​ಗೆ ಅವರು ಸಾತ್ ನೀಡಿದ್ದಾರೆ. ಈ ಬಾರಿ ಮನೆ ಹೇಗಿದೆ ಎಂಬುದನ್ನು ತೋರಿಸುವ ಉದ್ದೇಶದಿಂದ ಇಬ್ಬರೂ ‘ಬಿಗ್ ಬಾಸ್​’ ಮನೆ ಒಳಗೆ ಬಂದಿದ್ದರು. ವಾಸುಕಿ ಅವರ ಕೆಲಸ ಇಲ್ಲಿ ಏನು ಎಂಬುದು ಅನೇಕರ ಕುತೂಹಲ.

ಇದನ್ನೂ ಓದಿ
Image
Bigg Boss OTT Kannada: ಈ ಬಾರಿಯ ‘ಬಿಗ್ ಬಾಸ್ ಒಟಿಟಿ’ ಪ್ರಸಾರ ಎಷ್ಟು ಗಂಟೆಗೆ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಉತ್ತರ
Image
ಈ ಬಾರಿ ಕನ್ನಡ ‘ಬಿಗ್ ಬಾಸ್ ಒಟಿಟಿ’ ಮನೆ ಹೇಗಿರಲಿದೆ? ಇಲ್ಲಿದೆ ಫೋಟೋ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಇದನ್ನೂ ಓದಿ: ಈ ಬಾರಿಯ ‘ಬಿಗ್ ಬಾಸ್ ಒಟಿಟಿ’ ಪ್ರಸಾರ ಎಷ್ಟು ಗಂಟೆಗೆ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಉತ್ತರ

ಆಗಸ್ಟ್ 6ರಿಂದ ಸಂಜೆ 7 ಗಂಟೆಗೆ ‘ಬಿಗ್ ಬಾಸ್​ ಒಟಿಟಿ’ ಆರಂಭ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ 8’ ಕಳೆದ ವರ್ಷ ಆಗಸ್ಟ್ 8ರಂದು ಪೂರ್ಣಗೊಂಡಿತ್ತು. ಅದೇ ಸಂದರ್ಭದಲ್ಲಿ ಈಗ ‘ಬಿಗ್ ಬಾಸ್ ಒಟಿಟಿ 1’ ಆರಂಭಗೊಳ್ಳುತ್ತಿದೆ. ಒಂದು ವರ್ಷದ ಬಳಿಕ ಮತ್ತೆ ‘ಬಿಗ್ ಬಾಸ್​​’ ಮನೆಗೆ ಹೊಸ ಕಳೆ ಬಂದಿದೆ.

Published On - 7:13 pm, Fri, 5 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!