AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drushyam 2 Teaser: ಬಿಡುಗಡೆಯಾಯ್ತು ವೆಂಕಟೇಶ್ ನಟನೆಯ ದೃಶ್ಯಂ 2 ಟೀಸರ್; ಚಿತ್ರದ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ

Venkatesh Daggubati: ಟಾಲಿವುಡ್​ನ ಖ್ಯಾತ ನಟ ವೆಂಕಟೇಶ್ ಕಾಣಿಸಿಕೊಂಡಿರುವ ‘ದೃಶ್ಯಂ 2’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಎಲ್ಲರ ಕುತೂಹಲ ಕೆರಳಿಸಿದೆ. ಚಿತ್ರದ ಬಿಡುಗಡೆಯ ಕುರಿತ ಮಾಹಿತಿ ಇಲ್ಲಿದೆ.

Drushyam 2 Teaser: ಬಿಡುಗಡೆಯಾಯ್ತು ವೆಂಕಟೇಶ್ ನಟನೆಯ ದೃಶ್ಯಂ 2 ಟೀಸರ್; ಚಿತ್ರದ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ
‘ದೃಶ್ಯಂ 2’ ಚಿತ್ರದಲ್ಲಿ ವೆಂಕಟೇಶ್
TV9 Web
| Edited By: |

Updated on: Nov 12, 2021 | 3:44 PM

Share

ಮೋಹನ್​ಲಾಲ್ ನಟನೆಯ ‘ದೃಶ್ಯಂ’ ಚಿತ್ರ ಭಾರತದ ಹಲವು ಭಾಷೆಗಳಿಗೆ ರಿಮೇಕ್ ಆಗಿ ಭರ್ಜರಿ ಯಶಸ್ಸು ಗಳಿಸಿತ್ತು. ಅದರ ಮುಂದುವರೆದ ಭಾಗವಾಗಿ ಈಗಾಗಲೇ ಮಲಯಾಳಂನಲ್ಲಿ ‘ದೃಶ್ಯಂ 2’ ಬಿಡುಗಡೆಯಾಗಿ ಯಶಸ್ಸು ಗಳಿಸಿದೆ. ಇದೀಗ ಭಾರತದ ಇತರ ಭಾಷೆಗಳಿಗೂ ಚಿತ್ರ ರಿಮೇಕ್ ಆಗುತ್ತಿದ್ದು, ತೆಲುಗಿನಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರತಂಡ ಈ ನಿಟ್ಟಿನಲ್ಲಿ ಬಹುದೊಡ್ಡ ನಿರ್ಧಾರ ಕೈಗೊಂಡು ನೇರವಾಗಿ ಒಟಿಟಿ ಮೂಲಕ ತೆರೆಗೆ ತರಲು ಯೋಚಿಸಿದೆ. ಇದೀಗ ಚಿತ್ರದ ಬಿಡುಗಡೆಯ ದಿನಾಂಕವೂ ಘೋಷಣೆಯಾಗಿದ್ದು, ನವೆಂಬರ್ 25ರಂದು ಆಮೆಜಾನ್ ಪ್ರೈಮ್ ವಿಡಿಯೋ ಮೂಲಕ ತೆರೆಗೆ ಬರಲಿದೆ. ಮಲಯಾಳಂನಲ್ಲಿ ‘ದೃಶ್ಯಂ 2’ ನಿರ್ದೇಶಿಸಿದ ಜೀತು ಜೋಸೆಫ್ ತೆಲುಗಿಗೂ ಆಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಟ ವೆಂಕಟೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದ್ದು, ಎಲ್ಲರ ಕುತೂಹಲ ಕೆರಳಿಸಿದೆ.

ತೆಲುಗಿನಲ್ಲಿ ಈ ಹಿಂದೆ ತೆರೆಕಂಡ ‘ದೃಶ್ಯಂ’ ಸೂಪರ್ ಹಿಟ್ ಆಗಿತ್ತು. ವೆಂಕಟೇಶ್ ರಾಂಬಾಬು ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ದೃಶ್ಯಂ 2 ತೆರೆಗೆ ಬರಲಿದ್ದು, ಚಿತ್ರವನ್ನು ಡಿ.ಸುರೇಶ್ ಬಾಬು, ರಾಜ್​ಕುಮಾರ್ ಸೇತುಪತಿ ಮತ್ತು ಆಂಟೋನಿ ಪೆರುವಾಂಬೂರ್ ನಿರ್ಮಾಣ ಮಾಡಿದ್ದಾರೆ. ದೃಶ್ಯಂ 2 ಚಿತ್ರದ ಮೊದಲ ಮೋಷನ್ ಪೋಸ್ಟರ್ ಸೆಪ್ಟೆಂಬರ್​​ನಲ್ಲಿ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿತ್ತು. ಇದೀಗ ಚಿತ್ರತಂಡ 52 ಸೆಕೆಂಡ್​ಗಳ ಟೀಸರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ದೃಶ್ಯಂ 2 ಚಿತ್ರದ ಟೀಸರ್ ಇಲ್ಲಿದೆ:

2021ರ ಏಪ್ರಿಲ್​ನಲ್ಲಿ ದೃಶ್ಯಂ 2 ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿತ್ತು. ಈ ಚಿತ್ರದಲ್ಲಿ ವೆಂಕಟೇಶ್ ಅವರೊಂದಿಗೆ ಮೀನಾ ಸಾಗರ್ ಬಣ್ಣ ಹಚ್ಚಿದ್ದಾರೆ. ಸೆನ್ಸಾರ್ ಸರ್ಟಿಫಿಕೇಟ್ ಈಗಾಗಲೇ ಲಭ್ಯವಾಗಿದ್ದು, ಯು ಪ್ರಮಾಣ ಪತ್ರ ದೊರೆತಿದೆ.

ಚಿತ್ರದ ಕುರಿತು ವೆಂಕಟೇಶ್ ಹಂಚಿಕೊಂಡ ಟ್ವೀಟ್:

ಮೂಲ ಮಲಯಾಳಂ ಚಿತ್ರದಲ್ಲಿ ಮೋಹನ್​ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅಂಜಲಿ ನಾಯರ್ ಹಾಗೂ ಮೀನಾ ಕಾಣಿಸಿಕೊಂಡಿದ್ದರು. ಮಲಯಾಳಂನ ‘ದೃಶ್ಯಂ 2’ ಕೂಡ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಗಳಿಸಿತ್ತು.

ಇದನ್ನೂ ಓದಿ:

Marakkar: Lion of the Arabian Sea: ‘ಮರಕ್ಕರ್’ ಚಿತ್ರತಂಡದಿಂದ ಬಹುದೊಡ್ಡ ನಿರ್ಧಾರ; ಮೋಹನ್​ಲಾಲ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಹಾಟ್ ಫೋಟೋದಲ್ಲಿ ಜಾನ್ವಿ ಕಪೂರ್

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!