AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಕಷ್ಟ ಹೇಳ್ಕೊಂಡು ಸಿಂಪಥಿ ಗಿಟ್ಟಿಸಬೇಡಿ’: ಬಿಗ್​ ಬಾಸ್​ ಸ್ಪರ್ಧಿಗೆ ಗುರೂಜಿ ಮಾತಿನ ಡಿಚ್ಚಿ

Aryavardhan Guruji | Bigg Boss OTT: ಬಿಗ್​ ಬಾಸ್​ ಮನೆಯಲ್ಲಿ ಈ ರೀತಿ ಸಂಗತಿಗಳು ಆಗಾಗ ಎದುರಾಗುತ್ತವೆ. ಎಮೋಷನ್​ಗಳನ್ನು ಇಟ್ಟುಕೊಂಡು ಆಟ ಆಡಲಾಗುತ್ತದೆ.

Bigg Boss Kannada: ‘ಕಷ್ಟ ಹೇಳ್ಕೊಂಡು ಸಿಂಪಥಿ ಗಿಟ್ಟಿಸಬೇಡಿ’: ಬಿಗ್​ ಬಾಸ್​ ಸ್ಪರ್ಧಿಗೆ ಗುರೂಜಿ ಮಾತಿನ ಡಿಚ್ಚಿ
ಆರ್ಯವರ್ಧನ್ ಗುರೂಜಿ
Follow us
TV9 Web
| Updated By: ಮದನ್​ ಕುಮಾರ್​

Updated on:Aug 07, 2022 | 10:16 PM

ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​’ ಬಗ್ಗೆ ವೀಕ್ಷಕರಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್​ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದ ಗೋಳು ತೋಡಿಕೊಂಡು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಬಾರಿ ‘ಬಿಗ್​ ಬಾಸ್​ ಒಟಿಟಿ ಕನ್ನಡ’ (Bigg Boss OTT Kannada) ಕೂಡ ಅಂಥ ಕ್ಷಣಗಳಿಗೆ ಸಾಕ್ಷಿ ಆಗಿದೆ. 16 ಸ್ಪರ್ಧಿಗಳ ಪೈಕಿ ಬಹುತೇಕರು ತಮ್ಮ ಜೀವನದ ಕಷ್ಟದ ಕ್ಷಣಗಳನ್ನು ತೆರೆದಿಟ್ಟಿದ್ದಾರೆ. ಸಾನ್ಯಾ ಅಯ್ಯರ್​, ಉದಯ್​ ಸೂರ್ಯ, ಸೋಮಣ್ಣ ಮಾಚಿಮಾಡ, ಚೈತ್ರಾ ಹಳ್ಳಿಕೇರಿ, ಲೋಕೇಶ್​ (Lokesh) ಮುಂತಾದವರು ನೋವು ತೋಡಿಕೊಂಡಿದ್ದಾರೆ. ಇದನ್ನು ಆರ್ಯವರ್ಧನ್​ ಗುರೂಜಿ (Aryavardhan Guruji) ವಿರೋಧಿಸಿದ್ದಾರೆ. ಅದರಿಂದಾಗಿ ದೊಡ್ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ.

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಫೇಮಸ್​ ಆಗಿದ್ದ ಲೋಕೇಶ್​ ಅವರು ಈಗ ‘ಬಿಗ್​​ ಬಾಸ್​ ಒಟಿಟಿ’ ಶೋಗೆ ಬಂದಿದ್ದಾರೆ. ಅವರ ಬಾಲ್ಯ ತುಂಬ ಕಷ್ಟಕರವಾಗಿತ್ತು. ಮನೆ ಬಿಟ್ಟು ಓಡಿ ಹೋಗಿದ್ದ ಅವರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಭಿಕ್ಷೆ ಸಿಗಲಿ ಎಂದು ಮೂಕನಂತೆ ನಟಿಸುತ್ತಿದ್ದರು. ನಂತರ ನಿರಾಶ್ರಿತ ಮಕ್ಕಳ ಕೇಂದ್ರ ಸೇರಿದ ಬಳಿಕ ಬದುಕು ಕಂಡುಕೊಂಡರು.

ಈ ಎಲ್ಲ ಸಂಗತಿಗಳನ್ನು ಲೋಕೇಶ್​ ಅವರು ಬಿಗ್​ ಬಾಸ್​ ಮನೆಯೊಳಗೆ ಹೇಳಲು ಆರಂಭಿಸಿದರು. ‘ಇದನ್ನೆಲ್ಲ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಆರ್ಯವರ್ಧನ್​ ಗುರೂಜಿ ಮಾತಿನಲ್ಲೇ ಡಿಚ್ಚಿ ಕೊಟ್ಟರು. ಈ ಮಾತು ಲೋಕೇಶ್​ಗೆ ಸರಿ ಎನಿಸಲಿಲ್ಲ. ‘ನಿಮ್ಮ ಪ್ರಕಾರ ಇಲ್ಲಿ ನಾವು ಹೇಳುವುದೆಲ್ಲ ವೋಟ್​ ಪಡೆಯೋದಕ್ಕೋಸ್ಕರನಾ?’ ಎಂದು ಮರುಪ್ರಶ್ನೆ ಹಾಕಿದರು.

ಇದನ್ನೂ ಓದಿ
Image
Sanya Iyer: ಅಪ್ಪನೇ ಮಗಳ ಖಾಸಗಿ ವಿಡಿಯೋ ರೆಕಾರ್ಡ್​ ಮಾಡಿದ್ದ; ಸಾನ್ಯಾ ಅಯ್ಯರ್​ ತಾಯಿ ಹೇಳಿದ ಕರಾಳ ಸತ್ಯಗಳು
Image
Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು

ಬಿಗ್​ ಬಾಸ್​ ಮನೆಯಲ್ಲಿ ಈ ರೀತಿ ಸಂಗತಿಗಳು ಆಗಾಗ ಎದುರಾಗುತ್ತವೆ. ಎಮೋಷನ್​ಗಳನ್ನು ಇಟ್ಟುಕೊಂಡು ಆಟ ಆಡಲಾಗುತ್ತದೆ. ಈ ಕಾರಣದಿಂದ ಒಂದು ವರ್ಗದ ವೀಕ್ಷಕರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೂ ಪ್ರತಿ ಸೀಸನ್​ನಲ್ಲಿ ಇದು ಮುಂದುವರಿಯುತ್ತಲೇ ಇದೆ. ಈ ಬಾರಿ ಶೋ ಆರಂಭದಲ್ಲೇ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಮೊದಲ ವಾರ 8 ಮಂದಿ ನಾಮಿನೇಟ್​:

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು. ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಹಾಗಾಗಿ ಎಮೋಷನಲ್​ ಕಾರ್ಡ್​ ಬಳಸುತ್ತಿದ್ದಾರೆ ಎಂಬ ಅಭಿಪ್ರಾಯ ವೀಕ್ಷಕರ ವಲಯದಿಂದ ಕೇಳಿಬರುತ್ತಿದೆ.

Published On - 10:16 pm, Sun, 7 August 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್