Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಸೇತುಪತಿ-ನಿತ್ಯಾ ಮೆನನ್​ ಮಹತ್ವದ ನಿರ್ಧಾರ; ಅಭಿಮಾನಿಗಳಿಗೆ ಅಚ್ಚರಿ ತಂದ ತೀರ್ಮಾನ

Vijay Sethupathi | Nithya Menon: ವಿಜಯ್​ ಸೇತುಪತಿ ನಟನೆಯ ಸಿನಿಮಾಗಳ ಬಗ್ಗೆ ಫ್ಯಾನ್ಸ್​ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದೇ ರೀತಿ ನಿತ್ಯಾ ಮೆನನ್​ ಅವರಿಗೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ವಿಜಯ್​ ಸೇತುಪತಿ-ನಿತ್ಯಾ ಮೆನನ್​ ಮಹತ್ವದ ನಿರ್ಧಾರ; ಅಭಿಮಾನಿಗಳಿಗೆ ಅಚ್ಚರಿ ತಂದ ತೀರ್ಮಾನ
ವಿಜಯ್ ಸೇತುಪತಿ, ನಿತ್ಯಾ ಮೆನನ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 17, 2022 | 2:15 PM

ನಟ ವಿಜಯ್​ ಸೇತುಪತಿ (Vijay Sethupathi) ಅವರು ಬಣ್ಣದ ಲೋಕದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಹೀರೋ ಆಗಿ, ಖಳನಟನಾಗಿ, ಪೋಷಕ ಕಲಾವಿದನಾಗಿ ಅವರು ಶೈನ್​ ಆಗಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುವ ಪ್ರತಿಭೆ ಅವರಲ್ಲಿದೆ. ಹಾಗಾಗಿ ಅವರನ್ನು ಕಂಡರೆ ಅಭಿಮಾನಿಗಳಿಗೆ ಸಖತ್​ ಇಷ್ಟ. ವಿಶೇಷವಾದ ಮ್ಯಾನರಿಸಂ ಮೂಲಕ ಅವರು ಪ್ರೇಕ್ಷಕರನ್ನು ಸೆಳೆದುಕೊಂಡಿದ್ದಾರೆ. ವಿಜಯ್​ ಸೇತುಪತಿ ಸಿನಿಮಾ ರಿಲೀಸ್​ ಆದರೆ ಚಿತ್ರಮಂದಿರಕ್ಕೆ ಜನರು ಮುಗಿಬೀಳುತ್ತಾರೆ. ದಕ್ಷಿಣ ಭಾರತದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರು ತೆಗೆದುಕೊಂಡಿರುವ ಒಂದು ನಿರ್ಧಾರದಿಂದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಕರೆತರುವ ಸಾಮರ್ಥ್ಯ ಇದ್ದರೂ ಕೂಡ ವಿಜಯ್​ ಸೇತುಪತಿ ಅವರು ತಮ್ಮ ಮುಂದಿನ ಸಿನಿಮಾವನ್ನು ಒಟಿಟಿಯಲ್ಲಿ (OTT) ರಿಲೀಸ್​ ಮಾಡಲು ನಿರ್ಧರಿಸಿದ್ದಾರೆ. ಅವರಿಗೆ ನಿತ್ಯಾ ಮೆನನ್ (Nithya Menon)​ ಸಾಥ್​ ನೀಡಿದ್ದಾರೆ.

ವಿಜಯ್​ ಸೇತುಪತಿ ಮತ್ತು ನಿತ್ಯಾ ಮೆನನ್​ ಅವರು ‘19(1)(ಎ)’ ಸಿನಿಮಾದಲ್ಲಿ ನಟಿಸಿದ್ದಾರೆ. ಶೀರ್ಷಿಕೆ ಕಾರಣದಿಂದಲೇ ಈ ಚಿತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾವನ್ನು ಥಿಯೇಟರ್​ನಲ್ಲಿ ರಿಲೀಸ್​ ಮಾಡುವ ಬದಲು ನೇರವಾಗಿ ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಲಾಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಸ್ಟ್ರೀಮಿಂಗ್​ ಆರಂಭ ಆಗುವ ದಿನಾಂಕದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ವಿಜಯ್​ ಸೇತುಪತಿ ತಿಳಿಸಿದ್ದಾರೆ.

ವಿಜಯ್​ ಸೇತುಪತಿ ನಟನೆಯ ‘ವಿಕ್ರಮ್​’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಕಮಲ್​ ಹಾಸನ್​ ಹೀರೋ ಆಗಿ ಅಭಿನಯಿಸಿದ ಆ ಚಿತ್ರದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಅವರ ಪಾತ್ರವನ್ನು ಕಂಡು ಫ್ಯಾನ್ಸ್​ ಸಖತ್​ ಎಂಜಾಯ್​ ಮಾಡಿದ್ದಾರೆ. ಅವರ ಹೊಸ ಸಿನಿಮಾ ಕೂಡ ಥಿಯೇಟರ್​ನಲ್ಲಿ ರಿಲೀಸ್​ ಆಗಲಿ ಎಂದು ಪ್ರೇಕ್ಷಕರು ಬಯಸುವುದು ಸಹಜ. ಆದರೂ ಕೂಡ ‘19(1)(ಎ)’ ಸಿನಿಮಾವನ್ನು ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿರುವುದು ಯಾಕೆ ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ನಿತ್ಯಾ ಮೆನನ್​ ಅವರಿಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅವರು ‘19(1)(ಎ)’ ಚಿತ್ರದಲ್ಲಿ ಯಾವ ರೀತಿಯ ಪಾತ್ರ ಮಾಡಿದ್ದಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಇಂದೂ ವಿ.ಎಸ್​. ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘96’ ಖ್ಯಾತಿಯ ಗೋವಿಂದ್​ ವಸಂತ ಅವರ ಸಂಗೀತ ಈ ಸಿನಿಮಾಗಿದೆ.

Published On - 2:15 pm, Sun, 17 July 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್