AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಸೇತುಪತಿ-ನಿತ್ಯಾ ಮೆನನ್​ ಮಹತ್ವದ ನಿರ್ಧಾರ; ಅಭಿಮಾನಿಗಳಿಗೆ ಅಚ್ಚರಿ ತಂದ ತೀರ್ಮಾನ

Vijay Sethupathi | Nithya Menon: ವಿಜಯ್​ ಸೇತುಪತಿ ನಟನೆಯ ಸಿನಿಮಾಗಳ ಬಗ್ಗೆ ಫ್ಯಾನ್ಸ್​ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದೇ ರೀತಿ ನಿತ್ಯಾ ಮೆನನ್​ ಅವರಿಗೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ವಿಜಯ್​ ಸೇತುಪತಿ-ನಿತ್ಯಾ ಮೆನನ್​ ಮಹತ್ವದ ನಿರ್ಧಾರ; ಅಭಿಮಾನಿಗಳಿಗೆ ಅಚ್ಚರಿ ತಂದ ತೀರ್ಮಾನ
ವಿಜಯ್ ಸೇತುಪತಿ, ನಿತ್ಯಾ ಮೆನನ್
TV9 Web
| Edited By: |

Updated on:Jul 17, 2022 | 2:15 PM

Share

ನಟ ವಿಜಯ್​ ಸೇತುಪತಿ (Vijay Sethupathi) ಅವರು ಬಣ್ಣದ ಲೋಕದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಹೀರೋ ಆಗಿ, ಖಳನಟನಾಗಿ, ಪೋಷಕ ಕಲಾವಿದನಾಗಿ ಅವರು ಶೈನ್​ ಆಗಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುವ ಪ್ರತಿಭೆ ಅವರಲ್ಲಿದೆ. ಹಾಗಾಗಿ ಅವರನ್ನು ಕಂಡರೆ ಅಭಿಮಾನಿಗಳಿಗೆ ಸಖತ್​ ಇಷ್ಟ. ವಿಶೇಷವಾದ ಮ್ಯಾನರಿಸಂ ಮೂಲಕ ಅವರು ಪ್ರೇಕ್ಷಕರನ್ನು ಸೆಳೆದುಕೊಂಡಿದ್ದಾರೆ. ವಿಜಯ್​ ಸೇತುಪತಿ ಸಿನಿಮಾ ರಿಲೀಸ್​ ಆದರೆ ಚಿತ್ರಮಂದಿರಕ್ಕೆ ಜನರು ಮುಗಿಬೀಳುತ್ತಾರೆ. ದಕ್ಷಿಣ ಭಾರತದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರು ತೆಗೆದುಕೊಂಡಿರುವ ಒಂದು ನಿರ್ಧಾರದಿಂದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಕರೆತರುವ ಸಾಮರ್ಥ್ಯ ಇದ್ದರೂ ಕೂಡ ವಿಜಯ್​ ಸೇತುಪತಿ ಅವರು ತಮ್ಮ ಮುಂದಿನ ಸಿನಿಮಾವನ್ನು ಒಟಿಟಿಯಲ್ಲಿ (OTT) ರಿಲೀಸ್​ ಮಾಡಲು ನಿರ್ಧರಿಸಿದ್ದಾರೆ. ಅವರಿಗೆ ನಿತ್ಯಾ ಮೆನನ್ (Nithya Menon)​ ಸಾಥ್​ ನೀಡಿದ್ದಾರೆ.

ವಿಜಯ್​ ಸೇತುಪತಿ ಮತ್ತು ನಿತ್ಯಾ ಮೆನನ್​ ಅವರು ‘19(1)(ಎ)’ ಸಿನಿಮಾದಲ್ಲಿ ನಟಿಸಿದ್ದಾರೆ. ಶೀರ್ಷಿಕೆ ಕಾರಣದಿಂದಲೇ ಈ ಚಿತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾವನ್ನು ಥಿಯೇಟರ್​ನಲ್ಲಿ ರಿಲೀಸ್​ ಮಾಡುವ ಬದಲು ನೇರವಾಗಿ ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಲಾಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಸ್ಟ್ರೀಮಿಂಗ್​ ಆರಂಭ ಆಗುವ ದಿನಾಂಕದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ವಿಜಯ್​ ಸೇತುಪತಿ ತಿಳಿಸಿದ್ದಾರೆ.

ವಿಜಯ್​ ಸೇತುಪತಿ ನಟನೆಯ ‘ವಿಕ್ರಮ್​’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಕಮಲ್​ ಹಾಸನ್​ ಹೀರೋ ಆಗಿ ಅಭಿನಯಿಸಿದ ಆ ಚಿತ್ರದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಅವರ ಪಾತ್ರವನ್ನು ಕಂಡು ಫ್ಯಾನ್ಸ್​ ಸಖತ್​ ಎಂಜಾಯ್​ ಮಾಡಿದ್ದಾರೆ. ಅವರ ಹೊಸ ಸಿನಿಮಾ ಕೂಡ ಥಿಯೇಟರ್​ನಲ್ಲಿ ರಿಲೀಸ್​ ಆಗಲಿ ಎಂದು ಪ್ರೇಕ್ಷಕರು ಬಯಸುವುದು ಸಹಜ. ಆದರೂ ಕೂಡ ‘19(1)(ಎ)’ ಸಿನಿಮಾವನ್ನು ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿರುವುದು ಯಾಕೆ ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ನಿತ್ಯಾ ಮೆನನ್​ ಅವರಿಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅವರು ‘19(1)(ಎ)’ ಚಿತ್ರದಲ್ಲಿ ಯಾವ ರೀತಿಯ ಪಾತ್ರ ಮಾಡಿದ್ದಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಇಂದೂ ವಿ.ಎಸ್​. ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘96’ ಖ್ಯಾತಿಯ ಗೋವಿಂದ್​ ವಸಂತ ಅವರ ಸಂಗೀತ ಈ ಸಿನಿಮಾಗಿದೆ.

Published On - 2:15 pm, Sun, 17 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?