AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbaikar: ‘ಜಿಯೋ ಸಿನಿಮಾ’ಒಟಿಟಿಯಲ್ಲಿ ಉಚಿತವಾಗಿ ಲಭ್ಯವಾಗಲಿದೆ ವಿಜಯ್​ ಸೇತುಪತಿ ನಟನೆಯ ಹೊಸ ಸಿನಿಮಾ ‘ಮುಂಬೈಕರ್​’

Vijay Sethupathi: ‘ಮುಂಬೈಕರ್​’ ಚಿತ್ರದಲ್ಲಿ ವಿಜಯ್​ ಸೇತುಪತಿ ಜೊತೆಗೆ ವಿಕ್ರಾಂತ್​ ಮೆಸ್ಸಿ ಕೂಡ ನಟಿಸಿದ್ದಾರೆ. ಜೂನ್​ 2ರಿಂದ ‘ಮುಂಬೈಕರ್​’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

Mumbaikar: ‘ಜಿಯೋ ಸಿನಿಮಾ’ಒಟಿಟಿಯಲ್ಲಿ ಉಚಿತವಾಗಿ ಲಭ್ಯವಾಗಲಿದೆ ವಿಜಯ್​ ಸೇತುಪತಿ ನಟನೆಯ ಹೊಸ ಸಿನಿಮಾ ‘ಮುಂಬೈಕರ್​’
ವಿಜಯ್​ ಸೇತುಪತಿ
ಮದನ್​ ಕುಮಾರ್​
|

Updated on: May 25, 2023 | 6:14 PM

Share

ನಟ ವಿಜಯ್​ ಸೇತುಪತಿ (Vijay Sethupathi) ಅವರು ದಕ್ಷಿಣ ಭಾರತದಲ್ಲಿ ಸಖತ್​ ಫೇಮಸ್​ ಆಗಿದ್ದಾರೆ. ಈಗ ಅವರು ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಅವರು ನಟಿಸಿದ ಮೊದಲ ಹಿಂದಿ ಸಿನಿಮಾ ‘ಮುಂಬೈಕರ್​’ (Mumbaikar) ನೇರವಾಗಿ ಒಟಿಟಿ ಮೂಲಕ ಬಿಡುಗಡೆ ಆಗಲಿದೆ. ‘ಜೀಯೋ ಸಿನಿಮಾ’ದಲ್ಲಿ (Jio Cinema) ಈ ಚಿತ್ರ ಸ್ಟ್ರೀಮ್​ ಆಗಲಿದೆ. ಈ ಚಿತ್ರದಲ್ಲಿ ವಿಜಯ್​ ಸೇತುಪತಿ ಜೊತೆಗೆ ವಿಕ್ರಾಂತ್​ ಮೆಸ್ಸಿ ಕೂಡ ನಟಿಸಿದ್ದಾರೆ. ಜೂನ್​ 2ರಿಂದ ‘ಮುಂಬೈಕರ್​’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಖ್ಯಾತ ಛಾಯಾಗ್ರಾಹಕ ಸಂತೋಷ್​ ಶಿವನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಇದು ತಮಿಳಿನ ‘ಮಾನಗರಂ’ ಸಿನಿಮಾದ ಹಿಂದಿ ರಿಮೇಕ್​. ಮೂಲ ಚಿತ್ರಕ್ಕೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡಿದ್ದರು.

ಹೈಪರ್​ ಲಿಂಕ್​ ರೀತಿಯ ಕಥಾಹಂದರ ‘ಮುಂಬೈಕರ್​’ ಸಿನಿಮಾದಲ್ಲಿದೆ. ‘ಜಿಯೋ ಸಿನಿಮಾ’ದಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ ಎಂಬುದನ್ನು ತಿಳಿಸಲು ಹೊಸ ಟೀಸರ್​ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ವಿಜಯ್​ ಸೇತುಪತಿ ಜೊತೆ ನಟಿಸಿದ್ದಕ್ಕೆ ವಿಕ್ರಾಂತ್​ ಮೆಸ್ಸಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಿರ್ದೇಶಕ ಸಂತೋಷ್​ ಶಿವನ್​ ಅವರ ಕೆಲಸವನ್ನು ವಿಕ್ರಾಂತ್​ ಮೆಸ್ಸಿ ಕೊಂಡಾಡಿದ್ದಾರೆ. ಒಟಿಟಿಯಲ್ಲಿ ಈ ಸಿನಿಮಾ ನೋಡಿದ ಪ್ರೇಕ್ಷಕರಿಂದ ಯಾವ ರೀತಿ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಮೊದಲ ಲಾಕ್​ ಡೌನ್​ ಬಳಿಕ ಪ್ರೇಕ್ಷಕರಲ್ಲಿ ಒಟಿಟಿ ಬಳಕೆ ಜಾಸ್ತಿ ಆಯಿತು. ಹಲವು ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಹೊಸ ಸಿನಿಮಾಗಳನ್ನು ಸ್ಟ್ರೀಮ್​ ಮಾಡುವ ಮೂಲಕ ಜನರನ್ನು ಸೆಳೆಯಲು ಎಲ್ಲ ಒಟಿಟಿಗಳು ಪ್ರಯತ್ನಿಸುತ್ತಿವೆ. ಈ ಸಾಲಿಗೆ ‘ಜಿಯೋ ಸಿನಿಮಾ’ ಕೂಡ ಸೇರ್ಪಡೆ ಆಗಿದೆ. ಇದರಲ್ಲಿ ಹಲವು ಸಿನಿಮಾಗಳು ಲಭ್ಯವಾಗಿವೆ. ಈಗ ಹೊಸದೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ. ‘ವಿಕ್ರಮ್‌ ವೇದ’ ಸಿನಿಮಾದ ಪ್ರೀಮಿಯರ್‍ ನಂತರ, ಜಿಯೋ ಸಿನಿಮಾ ಥ್ರಿಲ್ಲಿಂಗ್ ಆ್ಯಕ್ಷನ್​ ಡ್ರಾಮಾ ‘ಇನ್‌ಸ್ಟೆಕ್ಟರ್ ಅವಿನಾಶ್‌’ ಚಿತ್ರದ ಪ್ರೀಮಿಯರ್​ ಮಾಡಿತು. ಪ್ರತಿಭಾವಂತ ನಟ ರಣದೀಪ್ ಹೂಡಾ ಅವರು ಆ ಸಿನಿಮಾದಲ್ಲಿ ಇನ್‌ಸ್ಟೆಕ್ಟರ್ ಅವಿನಾಶ್‌ ಆಗಿ ಕಾಣಿಸಿಕೊಂಡಿದ್ದಾರೆ. ಮೇ 18ರಿಂದ ಈ ಸಿನಿಮಾ ಉಚಿತವಾಗಿ ಬಿತ್ತರ ಆಗುತ್ತಿದೆ.

ಇದನ್ನೂ ಓದಿ: ‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಲವ್​ ಯೂ ಅಭಿ:

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಕ್ರಮ್​ ರವಿಚಂದ್ರನ್​ ಮತ್ತು ಅದಿತಿ ಪ್ರಭುದೇವ ಅವರು ಇದೇ ಮೊದಲ ಬಾರಿಗೆ ವೆಬ್​ ಸಿರೀಸ್​ ಲೋಕಕ್ಕೆ ಎಂಟ್ರಿ ನೀಡಿದ್ದಾರೆ. ಇವರಿಬ್ಬರು ಜೊತೆಯಾಗಿ ಒಂದು ವೆಬ್​ ಸರಣಿಯಲ್ಲಿ ನಟಿಸಿದ್ದಾರೆ. ‘ಲವ್​ ಯೂ ಅಭಿ’ ಎಂಬುದು ಇದರ ಶೀರ್ಷಿಕೆ. ‘ಜಿಯೋ ಸಿನಿಮಾ’ ಮೂಲಕ ಇದು ಪ್ರಸಾರ ಆಗುತ್ತಿದೆ. ಕನ್ನಡದಲ್ಲಿ ವೆಬ್ ಸಿರೀಸ್​ಗಳ ಸಂಖ್ಯೆ ಕಡಿಮೆ. ಆ ಕೊರತೆಯನ್ನು ನೀಗಿಸುವ ರೀತಿಯಲ್ಲಿ ‘ಲವ್​ ಯೂ ಅಭಿ’ ಸೇರ್ಪಡೆ ಆಗಿದೆ. ಅಂದಹಾಗೆ, ಇದನ್ನು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಉಚಿತವಾಗಿ ವೀಕ್ಷಿಸಬಹುದು. ಮೇ 19ರಂದು ಈ ವೆಬ್​ ಸಿರೀಸ್​ ಬಿಡುಗಡೆ ಆಗಿದೆ. ಕಾಳಿ ವೇಲಾಯುಧಂ ನಿರ್ಮಾಣ ಮಾಡಿ, ನಿರ್ದೇಶಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!