AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ಫ್ಲಿಕ್ಸ್​ನಲ್ಲಿ ದಾಖಲೆ ಬರೆದ ವಿಜಯ್ ಸೇತುಪತಿಯ ‘ಮಹಾರಾಜ’

Maharaja: ವಿಜಯ್ ಸೇತುಪತಿ ನಟಿಸಿರುವ ‘ಮಹಾರಾಜ’ ಸಿನಿಮಾ ಕಡಿಮೆ ಬಜೆಟ್​ನಲ್ಲಿ ನಿರ್ಮಾಣವಾಗಿತ್ತು, ಚಿತ್ರಮಂದಿರದಲ್ಲಿ ದಾಖಲೆ ಗಳಿಕೆ ಕಂಡ ಈ ಸಿನಿಮಾ ಈಗ ಒಟಿಟಿಯಲ್ಲಿಯೂ ದಾಖಲೆಗಳನ್ನು ಬರೆದಿದೆ.

ನೆಟ್​ಫ್ಲಿಕ್ಸ್​ನಲ್ಲಿ ದಾಖಲೆ ಬರೆದ ವಿಜಯ್ ಸೇತುಪತಿಯ ‘ಮಹಾರಾಜ’
ಮಂಜುನಾಥ ಸಿ.
|

Updated on: Aug 12, 2024 | 5:31 PM

Share

ಭಾರಿ ಬಜೆಟ್​ನ ಸ್ಟಾರ್, ಸೂಪರ್ ಸ್ಟಾರ್ ನಟರ ಸಿನಿಮಾಗಳು ಮಾತ್ರವೇ ಚಿತ್ರಮಂದಿರಗಳಲ್ಲಿ ದೊಡ್ಡ ಯಶಸ್ಸು ಗಳಿಸುತ್ತಿವೆ. ಆದರೆ ಒಳ್ಳೆಯ ಸಿನಿಮಾಗಳು ಎಲ್ಲಿಂದಾದರೂ, ಹೇಗಿಂದಾದರೂ ಪ್ರೇಕ್ಷಕರನ್ನು ಹುಡುಕಿಕೊಳ್ಳುತ್ತದೆ. ಒಳ್ಳೆಯ ಸಿನಿಮಾಗಳು, ಸಿನಿಮಾ ಪ್ರೇಮಿಗಳನ್ನು ಒಂದಲ್ಲ ಒಂದು ರೀತಿಯಲ್ಲಿ ತಲುಪಿಯೇ ತೀರುತ್ತವೆ. ಇತ್ತೀಚೆಗೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸಿನಿಮಾ ಜೂನ್ 12 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸದ್ದು ಮಾಡಿತ್ತು. ಆದರೆ ತಮಿಳುನಾಡು ರಾಜ್ಯದ ಹೊರತಾಗಿ ಬೇರೆ ರಾಜ್ಯಗಳ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಆದರೆ ಸಿನಿಮಾ ಒಟಿಟಿಗೆ ಬಂದಮೇಲೆ ದಾಖಲೆಗಳನ್ನೇ ಬರೆದಿದೆ ‘ಮಹಾರಾಜ’.

ಜೂನ್ 12 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ‘ಮಹಾರಾಜ’ ಸಿನಿಮಾ ಜುಲೈ 14 ರಂದು ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬಂತು. ಅದಕ್ಕೆ ಮುನ್ನ ಚಿತ್ರಮಂದಿರದಲ್ಲಿ ಒಳ್ಳೆಯ ಪ್ರದರ್ಶನವನ್ನೇ ಕಂಡಿದ್ದ ಈ ಸಿನಿಮಾ, ಸುಮಾರು 100 ಕೋಟಿ ಕಲೆಕ್ಷನ್ ಅನ್ನು ಸಹ ಮಾಡಿತ್ತು. ಆದರೆ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ಬಳಿಕ ಹೊಸ ದಾಖಲೆಗಳನ್ನೇ ಬರೆಯಿತು ಈ ಸಿನಿಮಾ. ಗಡಿಗಳನ್ನು ದಾಟಿ ಕೋಟ್ಯಂತರ ಪ್ರೇಕ್ಷಕರನ್ನು ತಲುಪಿದ ‘ಮಹರಾಜ’ ಸಿನಿಮಾ ಸಿನಿಮಾ ಪ್ರೇಮಿಗಳ ಹೃದಯ ಸೂರೆಗೊಂಡಿದೆ.

ಇದನ್ನೂ ಓದಿ:ವಿಜಯ್ ಸೇತುಪತಿ ನಟನೆಯ 50ನೇ ಸಿನಿಮಾ ‘ಮಹಾರಾಜ’ ಟ್ರೇಲರ್; ಮತ್ತೆ ಡಿಫರೆಂಟ್ ಪಾತ್ರ

ಈ ವರ್ಷದಲ್ಲಿ ಅತಿ ಹೆಚ್ಚು ಮಂದಿಯಿಂದ ವೀಕ್ಷಣೆಗೆ ಒಳಗಾದ ಇಂಗ್ಲೀಷ್ ಹೊರತಾದ ಸಿನಿಮಾ ಎಂಬ ದಾಖಲೆ ‘ಮಹಾರಾಜ’ ಸಿನಿಮಾ ಪಾಲಾಗಿದೆ. ಮಾತ್ರವಲ್ಲದೆ ಭಾರತದಲ್ಲಿ ಅತಿ ಹೆಚ್ಚು ಮಂದಿ ವೀಕ್ಷಿಸಿದ ಸಿನಿಮಾ ಎಂಬ ಖ್ಯಾತಿಯೂ ಮಹಾರಾಜ ಸಿನಿಮಾದ್ದಾಗಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದಾಗಿನಿಂದ ಈಗಿನ ವರೆಗೆ ಟಾಪ್ 10 ರ ಪಟ್ಟಿಯಿಂದ ಕೆಳಗೆ ಇಳಿದೇ ಇಲ್ಲ ಎಂಬುದು ವಿಶೇಷ.

‘ಮಹಾರಾಜ’ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆದ ಮೊದಲ ವಾರದಲ್ಲಿಯೇ 75 ಲಕ್ಷ ಗಂಟೆಗಳ ಕಾಲ ವೀಕ್ಷಣೆಗೆ ಒಳಗಾಗಿತ್ತು. ಅದಾದ ಬಳಿಕ 1.5 ಕೋಟಿ ಗಂಟೆಗಳ ಕಾಲ ವೀಕ್ಷಣೆಗೆ ಒಳಗಾಗಿ ದಾಖಲೆ ಬರೆಯಿತು. ‘ಮಹಾರಾಜ’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗುವವರೆಗೆ ‘ಲಾಪತಾ ಲೇಡೀಸ್’ ಸಿನಿಮಾ ಈ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ಅತಿ ಹೆಚ್ಚು ನೋಡಲಾದ ಭಾರತೀಯ ಸಿನಿಮಾ ಎಂದೆನಿಸಿಕೊಂಡಿತ್ತು. ಆದರೆ ‘ಲಾಪತಾ ಲೇಡೀಸ್’ ದಾಖಲೆಯನ್ನು ಅಳಿಸಿ ಹಾಕಿತು, ‘ಮಹಾರಾಜ’.

ಕಳೆದುಹೋದ ಕಸದ ಬುಟ್ಟಿಗಾಗಿ ಹುಡುಕಾಡುವ ಕ್ಷೌರಿಕನೊಬ್ಬನ ಕತೆ ‘ಮಹಾರಾಜ’. ಸಿನಿಮಾದಲ್ಲಿ ವಿಜಯ್ ಸೇತುಪತಿ, ಬಾಲಿವುಡ್​ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್, ಮಮತಾ ಮೋಹನ್​ದಾಸ್ ಇನ್ನೂ ಕೆಲವು ಅತ್ಯುತ್ತಮ ನಟರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್