AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲಿವುಡ್​ ತನ್ನದೇ ವಿನಾಶವನ್ನು ಸಂಭ್ರಮಿಸುತ್ತದೆ’; ವಿವೇಕ್ ಅಗ್ನೊಹೋತ್ರಿ ಟೀಕೆ

ಜಿಯೋ ಸಿನಿಮಾದಲ್ಲಿ ಉಚಿತವಾಗಿ ‘ಬ್ಲಡಿ ಡ್ಯಾಡಿ’ ನೋಡಲು ಅವಕಾಶ ಇದೆ. ಇಷ್ಟು ದೊಡ್ಡ ಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವುದು ಏಕೆ ಅನ್ನೋದು ಅವರ ಪ್ರಶ್ನೆ.

‘ಬಾಲಿವುಡ್​ ತನ್ನದೇ ವಿನಾಶವನ್ನು ಸಂಭ್ರಮಿಸುತ್ತದೆ’; ವಿವೇಕ್ ಅಗ್ನೊಹೋತ್ರಿ ಟೀಕೆ
ಶಾಹಿದ್​-ವಿವೇಕ್
Follow us
ರಾಜೇಶ್ ದುಗ್ಗುಮನೆ
|

Updated on: Jun 10, 2023 | 6:50 AM

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ (The Kashmir Files Movie) ಹಿಟ್ ಆದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರು ಸಾಕಷ್ಟು ವಿಚಾರಗಳ ಕುರಿತು ಮಾತನಾಡುತ್ತಾರೆ. ಅವರಿಗೆ ಬಾಲಿವುಡ್​ನಲ್ಲಿ ಒಂದು ವರ್ಗದವರನ್ನು ಕಂಡರೆ ಆಗುವುದಿಲ್ಲ. ಅದನ್ನು ಅವರು ಸದಾ ಟೀಕೆ ಮಾಡುತ್ತಾರೆ. ಹಿಂದಿ ಚಿತ್ರರಂಗದವರಲ್ಲಿ ಹೊರಗಿನವರಿಗೆ ಬೆಲೆ ಕೊಡುವುದಿಲ್ಲ ಅನ್ನೋದು ಅವರ ಆರೋಪ. ಈಗ ಅವರು ಶಾಹಿದ್ ಕಪೂರ್ (Shahid Kapoor) ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ. ಇಷ್ಟು ದೊಡ್ಡ ಬಜೆಟ್ ಚಿತ್ರವನ್ನು ಉಚಿತವಾಗಿ ಪ್ರಸಾರ ಮಾಡಿದ್ದೇಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಶಾಹಿದ್ ಕಪೂರ್ ನಟನೆಯ ‘ಬ್ಲಡಿ ಡ್ಯಾಡಿ’ ಚಿತ್ರ ಜಿಯೋ ಸಿನಿಮಾ ಒಟಿಟಿ ಮೂಲಕ ಪ್ರಸಾರ ಕಂಡಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಅಲಿ ಅಬ್ಬಾಸ್ ಜಫರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ ಸಿನಿಮಾ ನೋಡಲು ಅವಕಾಶ ಇದೆ. ಇಷ್ಟು ದೊಡ್ಡ ಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವುದು ಏಕೆ ಅನ್ನೋದು ಅವರ ಪ್ರಶ್ನೆ.

ಸುದ್ದಿ ಪತ್ರಿಕೆಯಲ್ಲಿ ಬಂದ ‘ಬ್ಲಡಿ ಡ್ಯಾಡಿ’ ಸಿನಿಮಾದ ಜಾಹೀರಾತಿನ ಫೋಟೋನ ವಿವೇಕ್ ಅಗ್ನಿಹೋತ್ರಿ ಶೇರ್ ಮಾಡಿಕೊಂಡಿದ್ದಾರೆ. ‘ಯಾರಾದರೂ 200 ಕೋಟಿ ರೂಪಾಯಿ ಚಿತ್ರವನ್ನು ಏಕೆ ಉಚಿತವಾಗಿ ತೋರಿಸುತ್ತಾರೆ? ಈ ಹುಚ್ಚು ಬಿಸ್ನೆಸ್​ನ ಮಾಡ್ಯೂಲ್ ಏನು? ದುಃಖದ ಸುದ್ದಿ ಎಂದರೆ ಬಾಲಿವುಡ್ ತನ್ನ ವಿನಾಶವನ್ನು ಆಚರಿಸಿಕೊಳ್ಳುತ್ತಿದೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರನ್ನು ಅನೇಕರು ಟೀಕೆ ಮಾಡಿದ್ದಾರೆ. ‘ಇದು ಜಿಯೋ ಸಿನಿಮಾ ಬಿಸ್ನೆಸ್ ಮಾಡ್ಯೂಲ್​. ಜಿಯೋ ಸಿನಿಮಾದವರು ಹಲವು ತಿಂಗಳು ಎಲ್ಲವನ್ನೂ ಉಚಿತವಾಗಿ ವೀಕ್ಷಿಸಲು ಅವಕಾಶ ನೀಡುತ್ತಾರೆ. ಈ ಮೂಲಕ ಒಂದಷ್ಟು ಗ್ರಾಹಕರನ್ನು ಹೊಂದುತ್ತಾರೆ. ನಂತರ ನಿಧಾನವಾಗಿ ಚಾರ್ಜ್ ಮಾಡಲು ಆರಂಭಿಸುತ್ತಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಬ್ಲಡಿ ಡ್ಯಾಡಿ ತಂಡದವರಿಗೆ ಜಿಯೋ ಸಿನಿಮಾದವರಿಂದ ಹಣ ಸಿಕ್ಕಿರುತ್ತದೆ. ನಿಮಗೇಕೆ ಈ ಬಗ್ಗೆ ಚಿಂತೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು

ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಈಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೆಲವು ದಿನಗಳ ಶೂಟಿಂಗ್​ ಬಾಕಿ ಇದೆ. ಭಾರತದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೂ ಮುನ್ನ ಅಮೆರಿಕದಲ್ಲಿ ಪ್ರೀಮಿಯರ್​ ಮಾಡಲು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಪ್ಲ್ಯಾನ್​ ಪ್ರಕಾರವೇ ಹೋಗುವುದಾದರೆ ‘ದಿ ವ್ಯಾಕ್ಸಿನ್​ ವಾರ್​’ ಬಿಡುಗಡೆ ಆಗಲು ಕೊಂಚ ಕಾಯಬೇಕಾಗುತ್ತದೆ. ಹಾಗಾಗಿ ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್